ಭಯೋತ್ಪಾದನೆ ನಿಗ್ರಹದಲ್ಲಿ ಕ್ಷುಲ್ಲಕ ರಾಜಕೀಯ ಸಲ್ಲದು


Team Udayavani, Jun 22, 2023, 5:38 AM IST

TERRORISTS IMP

ಚೀನ ಮತ್ತು ಪಾಕಿಸ್ಥಾನ ಜಂಟಿಯಾಗಿ ಭಾರತ ವಿರೋಧಿ ನಿಲುವನ್ನು ಮುಂದುವರಿಸಿದ್ದು ಉಭಯ ರಾಷ್ಟ್ರಗಳು ಒಂದಲ್ಲ ಒಂದು ವಿಷಯವನ್ನು ಮುಂದಿಟ್ಟು ಭಾರತದ ವಿರುದ್ಧ ಕಾಲು ಕೆರೆದು ಜಗಳ ಕಾಯಲು ಹಾತೊ ರೆಯುತ್ತಿವೆ. 26/11ರ ಮುಂಬಯಿ ದಾಳಿಯಲ್ಲಿ ಭಾಗಿಯಾಗಿದ್ದ ಲಷ್ಕರ್‌ ಈ ತಯ್ಯಬಾದ ಉಗ್ರ ಸಾಜಿದ್‌ ಮಿರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸುವ ಸಂಬಂಧ ಭಾರತ ಮತ್ತು ಅಮೆರಿಕ ಜಂಟಿಯಾಗಿ ಮುಂದಿರಿಸಿದ್ದ ಪ್ರಸ್ತಾವನೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಖಾಯಂ ಸದಸ್ಯ ರಾಷ್ಟ್ರವಾಗಿರುವ ಚೀನ ಅಡ್ಡಗಾಲು ಇರಿಸುವ ಮೂಲಕ ಭಾರತದ ವಿರುದ್ಧದ ತನ್ನ ಕ್ಯಾತೆ ಮುಂದುವರಿಸಿದೆ.

26/11ರ ಮುಂಬಯಿ ದಾಳಿಯಲ್ಲಿ 166 ಮಂದಿ ಅಮಾಯಕರು ಹತ್ಯೆಗೀಡಾಗಿದ್ದರು. ಈ ದಾಳಿಯ ಪ್ರಮುಖ ರೂವಾರಿಗಳಿಗೆ ಪಾಕಿಸ್ಥಾನ ಆಶ್ರಯ ನೀಡಿರುವ ಸಂಬಂಧ ಭಾರತ, ಸಾಕ್ಷ್ಯಾಧಾರಗಳನ್ನು ನೀಡಿದ್ದರೂ ಅಲ್ಲಿನ ಸರಕಾರ ಮಾತ್ರ ಇದನ್ನು ನಿರಾಕರಿಸುತ್ತಲೇ ಬಂದಿತ್ತು. ಈ ಹಿನ್ನೆಲೆಯಲ್ಲಿ ಭಾರತ, ಅಂತಾರಾಷ್ಟ್ರೀಯ ವೇದಿಕೆಗಳಲ್ಲೆಲ್ಲ ಈ ವಿಷಯ ವನ್ನು ಪ್ರಸ್ತಾವಿಸಿ ಪಾಕಿಸ್ಥಾನದ ಬಣ್ಣ ಬಯಲು ಮಾಡುತ್ತಲೇ ಬಂದಿದೆ.

ಅದರಂತೆ ಮೋಸ್ಟ್‌ ವಾಂಟೆಡ್‌ ಉಗ್ರ ಸಾಜಿದ್‌ ಮಿರ್‌ನ ಕುರಿತಂತೆ ಭಾರತ ಸರಕಾರ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ಅಲ್‌ ಕಾಯಿದಾ ನಿರ್ಬಂಧಗಳ ಸಮಿತಿಯ ಮುಂದಿಟ್ಟು ಮಿರ್‌ನನ್ನು ಜಾಗತಿಕ ಉಗ್ರ ಎಂದು ಘೋಷಿಸುವಂತೆ ಆಗ್ರಹಿಸಿತ್ತು. ಆರಂಭದಲ್ಲಿಯೇ ಈ ಪ್ರಸ್ತಾವನೆಗೆ ಚೀನ ತನ್ನ ತಕರಾರು ತೆಗೆಯುವ ಮೂಲಕ ತನ್ನ ಪರಮಾಪ್ತ ರಾಷ್ಟ್ರವಾದ ಪಾಕಿಸ್ಥಾನದ ಪರ ನಿಂತಿತ್ತು. ಆದರೆ ಅಮೆರಿಕ ಕೂಡ ಭಾರತದೊಂದಿಗೆ ಕೈಜೋಡಿಸಿ ಭದ್ರತಾ ಮಂಡಳಿಯ ಸಮಿತಿಯ ಮುಂದೆ ಪ್ರಸ್ತಾವನೆ ಇರಿಸಿತ್ತು. ಆದರೆ ಇಲ್ಲೂ ಚೀನ ತನ್ನ ಮೊಂಡಾಟ ಬಿಡದೆ ಪ್ರಸ್ತಾವನೆಗೆ ತಡೆ ಒಡ್ಡಿದೆ.

ಚೀನದ ಈ ಧೋರಣೆಗೆ ಭಾರತ, ಭದ್ರತಾ ಮಂಡಳಿಯ ಸಮಿತಿ ಸಭೆಯಲ್ಲಿಯೇ ಪ್ರಬಲ ಆಕ್ಷೇಪ ವ್ಯಕ್ತಪಡಿಸಿ, ಈ ಬೆಳವಣಿಗೆ ಭಯೋ ತ್ಪಾದನೆಯ ವಿರುದ್ಧ ಜಾಗತಿಕ ಸಮುದಾಯ ನಡೆಸುತ್ತಿರುವ ಸಾಮೂಹಿಕ ಹೋರಾಟಕ್ಕೆ ಬಲುದೊಡ್ಡ ಹಿನ್ನಡೆ ಎಂದು ಅಭಿಪ್ರಾಯಪಟ್ಟಿದೆ. ಕ್ಷುಲ್ಲಕ ಮತ್ತು ಭೌಗೋಳಿಕ ರಾಜಕೀಯ ಹಿತಾಸಕ್ತಿಯ ಕಾರಣಗಳಿಗಾಗಿ ಭಯೋ ತ್ಪಾದಕರನ್ನು ನಿಷೇಧಿಸುವ ಪ್ರಯತ್ನಗಳು ವಿಫ‌ಲವಾದದ್ದೇ ಆದಲ್ಲಿ ಭಯೋತ್ಪಾದನೆಯ ಸವಾಲನ್ನು ಪ್ರಾಮಾಣಿಕವಾಗಿ ಎದುರಿಸಲು ವಿಶ್ವ ಸಮುದಾಯಕ್ಕೆ ರಾಜಕೀಯ ಇಚ್ಛಾಶಕ್ತಿ ಇಲ್ಲ ಎಂಬುದು ಸಾಬೀತಾ ದಂತಾಗುತ್ತದೆ ಎಂದು ಕಟು ಶಬ್ದಗಳಲ್ಲಿ ಚೀನದ ಷಡ್ಯಂತ್ರವನ್ನು ಖಂಡಿಸಿದೆ. ಜತೆಗೆ ಉಗ್ರ ತ್ವದ ವಿರುದ್ಧದ ಹೋರಾಟದಲ್ಲಿ ಎಲ್ಲ ರಾಷ್ಟ್ರಗಳು ಕೈಜೋಡಿಸಲೇಬೇಕಾದ ಅನಿವಾರ್ಯತೆಯನ್ನು ಒತ್ತಿ ಹೇಳಿದೆ.

ಚೀನದ ಈ ಧೋರಣೆ ಭಯೋತ್ಪಾದನೆ ಕುರಿತಾಗಿನ ಅದರ ನಿಲುವು ಪ್ರಶ್ನಾರ್ಹವನ್ನಾಗಿಸಿದೆ. ಈ ಹಿಂದೆಯೂ ಭಯೋತ್ಪಾದನೆ ವಿಚಾರದಲ್ಲಿ ದ್ವಂದ್ವ ನಿಲುವು ತಾಳಿದ ರಾಷ್ಟ್ರಗಳು ಕ್ರಮೇಣ ಉಗ್ರರ ಕಪಿಮುಷ್ಟಿಗೆ ಸಿಲುಕಿ ನಲುಗುವಂತಾದ ನಿದರ್ಶನಗಳು ಸಾಕಷ್ಟಿವೆ. ಭಾರತವನ್ನು ವಿರೋಧಿಸುವ ಭರದಲ್ಲಿ ಸಣ್ಣತನ, ರಾಜಕೀಯ ಪ್ರದರ್ಶಿಸುವ ಚೀನದಂಥ ರಾಷ್ಟ್ರಗಳಿಗೆ ಭವಿಷ್ಯದಲ್ಲಿ ಉಗ್ರ ತ್ವ ಮಾರಕವಾಗಲಿರುವುದಂತೂ ಖಚಿತ. ಭಾರತ ಬೆಂಬಲಿತ ಪ್ರಸ್ತಾವನೆಗೆ ತಡೆ ಒಡ್ಡಿದಾಕ್ಷಣ ರಾಜತಾಂತ್ರಿಕವಾಗಿ ಭಾರೀ ಗೆಲುವು ಲಭಿಸಿತು ಎಂದು ಬೀಗಿದಲ್ಲಿ ಮುಂದಿನ ದಿನಗಳಲ್ಲಿ ಅದು ಚೀನಕ್ಕೇ ತಿರುಗುಬಾಣವಾಗಲಿದೆಯೇ ಹೊರತು ಭಾರತಕ್ಕಲ್ಲ.

ಟಾಪ್ ನ್ಯೂಸ್

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Bus Carrying Devotees Catches Fire In Haryana

Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Untitled-1

ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ

22

Gurucharan Singh: ನಾಪತ್ತೆಯಾಗಿದ್ದ ಕಿರುತೆರೆ ನಟ ಮನೆಗೆ ವಾಪಾಸ್; ಹೋಗಿದ್ದೆಲ್ಲಿಗೆ?

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

Vijayapura:ತತ್ಕಾಲ ಪೋಡಿಗೆ 47ಸಾವಿರ ಲಂಚ: ಲೋಕಾಯುಕ್ತರ ಬಲೆಗೆ ಬಿದ್ದ ಸರ್ವೇಯರ್,ಮಧ್ಯವರ್ತಿ

crime

Ramanagara: ತಂದೆಯಿಂದಲೇ ಮಗನ ಕೊಲೆ.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.