UP; ನೆಹರು, ಸಾವರ್ಕರ್ ಸೇರಿ 11 ನಾಯಕರ ಜೀವನ ಚರಿತ್ರೆ ಪಠ್ಯಕ್ಕೆ ಸೇರ್ಪಡೆ
Team Udayavani, Jun 23, 2023, 8:12 PM IST
ಲಕ್ನೋ: ಉತ್ತರ ಪ್ರದೇಶದ ಪ್ರೌಢ ಶಿಕ್ಷಣ ಮಂಡಳಿಯು 9 ರಿಂದ 12 ನೇ ತರಗತಿಗಳ ಪಠ್ಯಕ್ರಮದಲ್ಲಿ ಹಿಂದುತ್ವ ಸಿದ್ಧಾಂತವಾದಿ ವಿ.ಡಿ.ಸಾವರ್ಕರ್, ಮರಾಠ ರಾಜ ಛತ್ರಪತಿ ಶಿವಾಜಿ ಮತ್ತು ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜೀವನ ಚರಿತ್ರೆಯನ್ನು ಸೇರಿಸಿದೆ.
ಭಾರತದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು, ಆಧ್ಯಾತ್ಮಿಕ ನಾಯಕ ಸ್ವಾಮಿ ವಿವೇಕಾನಂದ, ಆರ್ಯ ಸಮಾಜದ ಸಂಸ್ಥಾಪಕ ಸ್ವಾಮಿ ದಯಾನಂದ ಸರಸ್ವತಿ, ಬರಹಗಾರ ಮತ್ತು ಸ್ವಾತಂತ್ರ್ಯ ಹೋರಾಟಗಾರ ಪಂಡಿತ್ ಶ್ರೀರಾಮ್ ಶರ್ಮಾ ಅವರ ಜೀವನ ಚರಿತ್ರೆಗಳನ್ನು ಪಠ್ಯಕ್ರಮದಲ್ಲಿ ಸೇರಿಸಲಾಗಿದೆ.
9 ರಿಂದ 12 ನೇ ತರಗತಿಯ ನೈತಿಕ ಶಿಕ್ಷಣ ಪಠ್ಯಕ್ರಮದಲ್ಲಿ 11 ನಾಯಕರ ಜೀವನ ಚರಿತ್ರೆಯನ್ನು ಸೇರಿಸಲಾಗಿದೆ. 2023-24ರ ಶೈಕ್ಷಣಿಕ ಅಧಿವೇಶನದಿಂದ ವಿದ್ಯಾರ್ಥಿಗಳು ಈ ನಾಯಕರ ಬಗ್ಗೆ ಓದುತ್ತಾರೆ ಎಂದು ಉತ್ತರ ಪ್ರದೇಶ ಮಾಧ್ಯಮಿಕ ಶಿಕ್ಷಾ ಪರಿಷತ್ (ಯುಪಿಎಂಎಸ್ಪಿ) ಕಾರ್ಯದರ್ಶಿ ದಿಬ್ಯಕಾಂತ್ ಶುಕ್ಲಾ ಪಿಟಿಐಗೆ ತಿಳಿಸಿದ್ದಾರೆ.
.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ
ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್ಕೌಂಟರ್… ಇಬ್ಬರು ಉಗ್ರರು ಹತ
Monsoon: ನಿಗದಿತ ಸಮಯಕ್ಕೆ ಕೇರಳಕ್ಕೆ ಮುಂಗಾರು ಪ್ರವೇಶ: ಹವಾಮಾನ ಇಲಾಖೆ
Hoarding Collapse: ಅಪ್ಪಚ್ಚಿಯಾದ ಕಾರಿನಲ್ಲಿತ್ತು ನಿವೃತ್ತ ಅಧಿಕಾರಿ, ಪತ್ನಿಯ ಮೃತದೇಹ
ಪ್ರಧಾನಿ ಮೋದಿ ವಿರುದ್ಧ ವಾರಾಣಸಿಯಲ್ಲಿ ಕಣಕ್ಕಿಳಿದಿದ್ದ ಶ್ಯಾಮ್ ರಂಗೀಲಾ ನಾಮಪತ್ರ ತಿರಸ್ಕೃತ