ಹುಣಸೂರಲ್ಲಿ ಮುನೇಶ್ವರಸ್ವಾಮಿ ದೇವರ ಉತ್ಸವ, ಭಾನುವಾರ ಹರಕೆ ಸಮರ್ಪಣೆ
Team Udayavani, Jun 24, 2023, 10:46 PM IST
ಹುಣಸೂರು: ಹುಣಸೂರಿನ ಕಾಫಿ ವರ್ಕ್ಸ್ ರಸ್ತೆಯ ಶ್ರೀ ಮುನೇಶ್ವರಸ್ವಾಮಿ 17 ನೇ ವರ್ಷದ ಜಾತ್ರಾ ಮಹೋತ್ಸವದ ಅಂಗವಾಗಿ ದೇವರ ಉತ್ಸವವು ನಗರದ ಪ್ರಮುಖ ಬೀದಿಗಳಲ್ಲಿ ಶನಿವಾರ ವಿಜೃಂಭಣೆಯಿಂದ ನಡೆಯಿತು. ಭಕ್ತರು ಉತ್ಸುಕತೆಯಿಂದ ಭಾಗವಹಿಸಿದ್ದರು.
ನಗರದ ಜನತೆಯ ಆರಾಧ್ಯ ಧೈವ ಮುನೇಶ್ವರಸ್ವಾಮಿ ದೇವಾಲಯದಲ್ಲಿ ಮುಂಜಾನೆ ಅರ್ಚಕ ನಾರಾಯಣಮೂರ್ತಿ ನೇತೃತ್ವದಲ್ಲಿ ಅರ್ಚಕರು ಗಣಪತಿ ಹೋಮ, ಅಭಿಷೇಕ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು.
ಸಂಜೆ ದೇವಾಲಯದಿಂದ ಮಂಗಳವಾದ್ಯ, ತಮಟೆ, ವೀರಗಾಸೆ ಕುಣಿತದೊಂದಿಗೆ ಹೊರಟ ದೇವರ ಉತ್ಸವವು ನಗರದ ಎಸ್.ಜೆ.ರಸ್ತೆ, ಜೆಎಲ್ಬಿ ರಸ್ತೆ, ಲಕ್ಷ್ಮೀ ವಿಲಾಸ್ ವೃತ್ತ, ಮಂಟಿ ಸರ್ಕಲ್, ಗಣೇಶಗುಡಿ ಬೀದಿ, ದಾವಣಿಬೀದಿ, ಬ್ರಾಹ್ಮಣಬೀದಿ ಮಾರ್ಗವಾಗಿ ದೇವಾಲಯಕ್ಕೆ ಸಾಗಿ ಬಂದರು. ನೂರಾರು ಮಂದಿ ಭಕ್ತರು ರಸ್ತೆಗಳಲ್ಲಿ ಈಡುಗಾಯಿ ಒಡೆದರು. ಪೂಜೆ ಸಲ್ಲಿಸಿದರು.
ಇಂದು ಅನ್ನದಾನ
ಭಾನುವಾರ ಮುಂಜಾನೆ 4 ಗಂಟೆಗೆ ಮುನೇಶ್ವರ ಸ್ವಾಮಿಗೆ ಹರಕೆ ಸಮರ್ಪಿಸುವರು, ಮದ್ಯಾಹ್ನ ಮಹಾಮಂಗಳಾರತಿ ನಂತರ ೧ಗಂಟೆಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿದೆ ಎಂದು ಮುನೇಶ್ವರಸ್ವಾಮಿ ಸೇವಾ ಸಮಿತಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ
Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್ನೋಟ್ ಪತ್ತೆ!
Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ
Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು
State Politics: ನಮ್ಮಲ್ಲಿ ಒಳಜಗಳ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Kalaburagi; ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸುರೇಶ ಸಜ್ಜನ್ ನಾಮಪತ್ರ ಸಲ್ಲಿಕೆ
Mistake; ಮಗುವಿನ ಬೆರಳಿಗೆ ಶಸ್ತ್ರಚಿಕಿತ್ಸೆ ಬೇಕಿತ್ತು: ವೈದ್ಯರು ಮಾಡಿದ್ದು ನಾಲಗೆಗೆ!
J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ
Naveen Patnaik ಅವರಿಗೆ ಬೀಳ್ಕೊಡುಗೆ ನೀಡಲು ಒಡಿಶಾ ಜನ ಸಜ್ಜು: ಜೆ.ಪಿ.ನಡ್ಡಾ
Money Laundering Case; ಇಡಿ ಸುಮ್ಮನೆ ಬಂಧಿಸುವಂತಿಲ್ಲ..: ಮಹತ್ವದ ತೀರ್ಪು ನೀಡಿದ ಸುಪ್ರೀಂ