Honnavara: ವಿಚಾರಣೆ ವೇಳೆ ವಿಷ ಸೇವಿಸಿದ ಆರೋಪಿ ; ಚಿಕಿತ್ಸೆ ಫಲಿಸದೆ ಸಾವು
Team Udayavani, Jun 25, 2023, 12:29 PM IST
ಹೊನ್ನಾವರ: ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಯುತ್ತಿದ್ದ ವೇಳೆ ವಿಷ ಸೇವಿಸಿದ ಒರ್ವ ಆರೋಪಿ ಮೃತಪಟ್ಟ ಘಟನೆ ಹೊನ್ನಾವರ ಪೋಲಿಸ್ ಠಾಣೆಯಲ್ಲಿ ಸಂಭವಿಸಿದೆ.
ಪಟ್ಟಣದ ಸಾಲೆಹಿತ್ತಲ್ ಮನೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಮೂಲದ ಇಬ್ಬರು ಚಿನ್ನ ಹೊಳಪು ಮಾಡುತ್ತಿರುವ ಬಗ್ಗೆ ವಿಚಾರಣೆಗೆ ಕರೆ ತರಲಾಗಿತ್ತು.
ಬಂಧಿತರಲ್ಲಿ ಒಬ್ಬರಾದ ದಿಲೀಪ ಮಂಡೇಲ್ ವಿಚಾರಣೆ ವೇಳೆ ಚಿನ್ನಕ್ಕೆ ಹೊಳಪು ನೀಡುವ ಕಾರ್ಯ ತೋರಿಸುತ್ತಿರುವಾಗ ಸೆನೈಡ್ ಬಗೆಯ ವಿಷವನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಕುರಿತು ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿ ಆದೇಶಿಸಲಾಗಿದೆ. ಸಿಪಿಐ ಮಂಜುನಾಥ, ಇ.ಓ ಕೈಂ ಪಿಎಸೈ ಮಂಜೇಶ್ವರ ಚಂದಾವರ, ಸಿಬ್ಬಂದಿಗಳಾದ ಸಂತೋಷ, ರಮೇಶ ಲಂಬಾಣಿ, ಮಹಾವೀರ ಅಮಾನತಾದ ಸಿಬ್ಬಂದಿಗಳು.
ಶನಿವಾರ ರಾತ್ರಿಯೇ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ ಆರಂಭದಲ್ಲಿ ವಿಚಾರಣೆ ನಡೆಸಿ ನಂತರ ಮಂಗಳೂರು ವಲಯದ ಐ ಜಿ ಚಂದ್ರಗುಪ್ತ ಸುದೀರ್ಘ ಅವರ ಎರಡು ಗಂಟೆಯ ವಿಚಾರಣೆಯ ಬಳಿಕ ಈ ಆದೇಶ ಜಾರಿಯಾಗಿದೆ.
ಮೃತದೇಹವನ್ನು ಖಾಸಗಿ ಆಸ್ಪತ್ರೆಯಲ್ಲಿ ಇಡಲಾಗಿದ್ದು, ರವಿವಾರ ಮ್ಯಾಜಿಸ್ಟೇಟ್ ಸಮ್ಮುಖದಲ್ಲಿ ಕುಟುಂಬದ ಅನುಮತಿ ಮೇರೆಗೆ ಮರಣೊತ್ತರ ಪರೀಕ್ಷೆ ನಡೆಯಲಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾನವ ಹಕ್ಕು ಆಯೋಗ, ಸಿ.ಐ.ಡಿ ಅಧಿಕಾರಿಗಳು ಪ್ರಕರಣದ ವಿಚಾರಣೆಗೆ ಆಗಮಿಸುವ ಸಾಧ್ಯತೆ ಇದ್ದು, ತನಿಖೆಯ ಬಳಿಕ ಪ್ರಕರಣದ ಸತ್ಯಾಸತ್ಯತೆ ಬೆಳಕಿಗೆ ಬರಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Malpe Beach: ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರ ರಕ್ಷಣೆ
Mangaluru ಕಾಲೇಜಿನ ಶೌಚಗೃಹದಲ್ಲಿ ಮೊಬೈಲ್ ಇಟ್ಟು ಚಿತ್ರೀಕರಣಕ್ಕೆ ಯತ್ನ; ಬಾಲಕನ ಬಂಧನ
ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ
Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ
ಸಂಧಾನ ಮೂಲಕ ವಿವಾದ ಬಗೆಹರಿಸಿಕೊಳ್ಳಿ: ರೋಹಿಣಿ, ರೂಪಾಗೆ ಸು.ಕೋರ್ಟ್ ಸಲಹೆ