ವಂದೇ ಭಾರತ್ನಲ್ಲಿ ಟಿಕೆಟ್ ರಹಿತನ ಅವಾಂತರ
ಶೌಚಾಲಯದ ಬಾಗಿಲು ಜಡಿದು ಕುಳಿತ ಭೂಪ!
Team Udayavani, Jun 27, 2023, 7:57 AM IST
ಕಾಸರಗೋಡು: ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿ ಟಿಕೆಟ್ ರಹಿತ ಪ್ರಯಾಣಿಕನೊಬ್ಬ ಶೌಚಾಲಯಕ್ಕೆ ನುಗ್ಗಿ ಬಾಗಿಲು ಹಾಕಿಕೊಂಡು ಹೊರಗೆ ಬರಲೊಪ್ಪದೆ ಅವಾಂತರ ಸೃಷ್ಟಿಸಿದ ಘಟನೆ ನಡೆದಿದೆ.
ಉಪ್ಪಳ ಮಂಗಲ್ಪಾಡಿ ಕಲ್ಯಾಣಿ ನಿಲಯದ ನಿವಾಸಿ ಶರಣ್ (26) ಅವಾಂತರ ಸೃಷ್ಟಿಸಿದ ಪ್ರಯಾಣಿಕ.ಶರಣ್ ಜೂ. 25ರಂದು ಮಧ್ಯಾಹ್ನ 2.30ಕ್ಕೆ ಕಾಸರಗೋಡಿನಿಂದ ತಿರುವನಂತಪುರಕ್ಕೆ ಹೊರಟ ರೈಲನ್ನೇರಿದ್ದು, ಟಿಕೆಟ್ ಪರಿವೀಕ್ಷಕರು ಬರುತ್ತಿದ್ದಂತೆ ತನ್ನಲ್ಲಿ ಟಿಕೆಟ್ ಇಲ್ಲದ ಕಾರಣ ಶೌಚಾಲಯದೊಳಗೆ ಪ್ರವೇಶಿಸಿ ಒಳಗಿನಿಂದ ಚಿಲಕ ಹಾಕಿಕೊಂಡಿದ್ದ. ಹೊರಬರುವಂತೆ ಇಲಾಖೆಯ ಸಿಬಂದಿ ಮನವಿ ಮಾಡಿದರೂ ಆತ ಹೊರಬರಲಿಲ್ಲ.
ಕಣ್ಣೂರು ಮತ್ತು ಕೋಯಿಕ್ಕೋಡ್ ನಿಲ್ದಾಣಗಳಲ್ಲಿ ಹಲವರು ಸೇರಿ ಬಾಗಿಲನ್ನು ತೆರೆಯಲು ಪ್ರಯತ್ನಿಸಿದ್ದರು. ಸಾಧ್ಯವಾಗದಿದ್ದಾಗ ರೈಲ್ವೇ ಭದ್ರತಾ ಪಡೆ ಮತ್ತು ರೈಲ್ವೇ ಪೊಲೀಸರು ಆಗಮಿಸಿ ಬಾಗಿಲು ತೆರೆಯಲು ಪ್ರಯತ್ನಿಸಿ ದರು. ಅದೂ ವಿಫಲಗೊಂಡಿತು. ಕೊನೆಗೆ ರೈಲು ಶೊರ್ನೂರಿಗೆ ತಲುಪಿ ದಾಗ ಮೂವರು ಎಂಜಿನಿಯರ್ಗಳ ನೇತೃತ್ವದಲ್ಲಿ ಯತ್ನಿಸಿದರೂ ತೆರೆಯಲು ಸಾಧ್ಯವಾಗಲಿಲ್ಲ. ಎಲ್ಲ ಪ್ರಯತ್ನಗಳು ವಿಫಲವಾದ ಬಳಿಕ ಬೀಗವನ್ನೇ ಒಡೆದು ಬಾಗಿ ಲನ್ನು ತೆರೆಯಲಾಯಿತು. ಆತನನ್ನು ರೈಲ್ವೇ ಭದ್ರತಾ ದಳದವರು (ಆರ್ಪಿಎಫ್) ವಶಕ್ಕೆ ತೆಗೆದುಕೊಂಡಿದ್ದು, ಪ್ರಶ್ನಿಸುತ್ತಿದ್ದಾರೆ ಎಂದು ಇಲಾಖಾ ಮೂಲಗಳು ತಿಳಿಸಿವೆ.
ಆರಂಭದಲ್ಲಿ ತಾನು ಮಹಾರಾಷ್ಟ್ರದ ವನು ಎಂದು ಹೇಳಿಕೊಂಡು ಹಿಂದಿಯಲ್ಲಿ ಮಾತನಾಡುತ್ತಿದ್ದ; ಬಳಿಕ ಕೇರಳದವನು ಎಂದಿದ್ದಾನೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ
Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು
RCB vs CSK ರೋಚಕ ಪಂದ್ಯಕ್ಕೆ ಮಳೆ ಅಡ್ಡಿ: ಬೌಲಿಂಗ್ ಆಯ್ಕೆ ಮಾಡಿಕೊಂಡ ಚೆನ್ನೈ
BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು
Congress ಪಕ್ಷದಲ್ಲಿ ಔರಂಗಜೇಬನ ಆತ್ಮ ಸೇರಿಕೊಂಡಿದೆ: ಸಿಎಂ ಯೋಗಿ ವಾಗ್ದಾಳಿ