Delhi Metro Train: ಪ್ರಯಾಣಿಕರಿಬ್ಬರ ನಡುವೆ ಮಾರಾಮಾರಿ- ಪ್ರಯಾಣಿಕರು ಹೈರಾಣ
Team Udayavani, Jun 29, 2023, 11:25 AM IST
ನವದೆಹಲಿ: ಇತ್ತೀಚೆಗೆ ದೆಹಲಿ ಮೆಟ್ರೋ ರೈಲಿನಲ್ಲಿ ನಡೆದ ಕೆಲವು ಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಗಮನ ಸೆಳೆದಿತ್ತು. ಅದೇ ರೀತಿ ಇಬ್ಬರು ಪ್ರಯಾಣಿಕರು ದೆಹಲಿ ಮೆಟ್ರೋ ರೈಲಿನೊಳಗೆ ಮಾರಾಮಾರಿ ಹೊಡೆದಾಡಿಕೊಂಡ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ:ಕುರಾನ್ ಬಗ್ಗೆ ಡಾಕ್ಯುಮೆಂಟರಿ ಮಾಡಿ ಏನಾಗುತ್ತದೆ ನೋಡಿ..: ‘ಆದಿಪುರುಷ್’ ತಂಡಕ್ಕೆ ಕೋರ್ಟ್
ದೆಹಲಿ ಮೆಟ್ರೋದ ವಯೋಲೆಂಟ್ ಲೈನ್ ಮಾರ್ಗದಲ್ಲಿ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ. ರೈಲು ರಾಜಾ ನಹರ್ ಸಿಂಗ್ ಮತ್ತು ಕಾಶ್ಮೀರ್ ಗೇಟ್ ನಿಲ್ದಾಣದತ್ತ ತೆರಳುತ್ತಿದ್ದ ವೇಳೆ ಇಬ್ಬರು ಪ್ರಯಾಣಿಕರು ಹೊಡೆದಾಡಿಕೊಳ್ಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಪ್ರಯಾಣಿಕರಿಂದ ತುಂಬಿದ್ದ ಮೆಟ್ರೋ ರೈಲಿನ ಬೋಗಿಯೊಳಗೆ ಯುವಕನೊಬ್ಬನನ್ನು ಎಳೆದು ಹೊಡೆಯುತ್ತಿದ್ದು, ಈ ಸಂದರ್ಭದಲ್ಲಿ ಇತರ ಪ್ರಯಾಣಿಕರು ಇಬ್ಬರ ಜಗಳವನ್ನು ತಪ್ಪಿಸಲು ಯತ್ನಿಸಿರುವುದು ವಿಡಿಯೋದಲ್ಲಿದೆ.
ಕಳೆದ ವಾರ ದೆಹಲಿ ಮೆಟ್ರೋದಲ್ಲಿ ಇಬ್ಬರು ಮಹಿಳೆಯರು ಹಾಗೂ ದಂಪತಿ ನಡುವೆ ತೀವ್ರ ಮಾತಿನ ಚಕಮಕಿ ನಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
Fight in Delhi metro. Passengers were fighting into the train during the journey. #delhimetro #Metro #Delhi pic.twitter.com/kDUOydRQEY
— anuj kumar singh (@sanuj42) June 28, 2023
ಇದಕ್ಕಿಂತ ಮೊದಲು ದೆಹಲಿ ಮೆಟ್ರೋ ರೈಲಿನಲ್ಲಿ ಅರೆಬೆತ್ತಲಾಗಿ ಕಾಣಿಸಿಕೊಂಡಿದ್ದ ಯುವತಿ, ಬಿಕಿನಿ ಧರಿಸಿ ಓಡಾಡಿದ್ದ ಯುವತಿ ಹಾಗೂ ಪ್ರೇಮಿಗಳ ಲಿಪ್ ಲಾಕ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಮೂಲಕ ಚರ್ಚೆಗೆ ಗ್ರಾಸವಾಗಿದ್ದ ಘಟನೆ ನಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್ ಕೊಟ್ಟ ಯುವತಿಯರು.!
Cat ರಕ್ಷಣೆಗೆ ಭಾರೀ ಕಾರ್ಯಾಚರಣೆ ; ಕೊನೆಗೆ ಆಗಿದ್ದೆ ಬೇರೆ!: ವೈರಲ್ ವಿಡಿಯೋ ನೋಡಿ
5 ರೂಪಾಯಿ ಕುರ್ಕುರೆ ತಂದುಕೊಡಲಿಲ್ಲ ಎನ್ನುವ ಕಾರಣಕ್ಕೆ ಪತಿಗೆ ಡಿವೋರ್ಸ್ ಕೊಟ್ಟ ಪತ್ನಿ.!
Rahul Gandhi: ಶೀಘ್ರದಲ್ಲೇ ಮದುವೆಯಾಗಲಿದ್ದೇನೆ… ಅಭಿಮಾನಿಯ ಪ್ರಶ್ನೆಗೆ ರಾಹುಲ್ ಉತ್ತರ
Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ
MUST WATCH
ಹೊಸ ಸೇರ್ಪಡೆ
Ragini Dwivedi; ಸಂಜು ಜೊತೆ ರಾಗಿಣಿ ಡ್ಯಾನ್ಸ್ ; ಮಂಗ್ಲಿ ಹಾಡಿಗೆ ಭರ್ಜರಿ ಸ್ಟೆಪ್
YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ