ಯುವಜನತೆಗೆ ರಾಜಕೀಯ ತರಬೇತಿ: ವಿನೂತನ ಪರಿಕಲ್ಪನೆ


Team Udayavani, Jun 30, 2023, 5:53 AM IST

politi

ಆಸಕ್ತ ಪದವೀಧರ ಯುವ ಜನತೆಗೆ ರಾಜಕೀಯ ತರಬೇತಿ ನೀಡಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ರಾಜಕೀಯ ತರಬೇತಿ ಸಂಸ್ಥೆಯನ್ನು ಆರಂಭಿಸುವ ಪ್ರಸ್ತಾವವನ್ನು ವಿಧಾನಸಭೆಯ ಸ್ಪೀಕರ್‌ ಯು.ಟಿ. ಖಾದರ್‌ ಮುಂದಿಟ್ಟಿದ್ದಾರೆ. ಇಂದಿನ ಯುವಪೀಳಿಗೆ ರಾಜಕೀಯದಲ್ಲಿ ಆಸಕ್ತಿ ತೋರುತ್ತಿಲ್ಲ ಮತ್ತು ರಾಜಕೀಯ ಕ್ಷೇತ್ರವನ್ನು ಪ್ರವೇಶಿಸುವ ಯುವಜನತೆಗೆ ರಾಜಕೀಯದ ಒಳ-ಹೊರಗುಗಳ ಬಗೆಗೆ ಪ್ರಾಥಮಿಕ ಜ್ಞಾನ ಇರುವುದಿಲ್ಲ ಎಂಬ ಆರೋಪಗಳು ಸರ್ವೇ ಸಾಮಾನ್ಯವಾಗಿದ್ದು ಈ ಹಿನ್ನೆಲೆಯಲ್ಲಿ ಸ್ಪೀಕರ್‌ ಅವರ ಈ ಪ್ರಸ್ತಾವ ನಿಜಕ್ಕೂ ಚಿಂತನೀಯ. ರಾಜಕೀಯದಲ್ಲೂ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಬೇಕೆಂಬ ಬೇಡಿಕೆ ಇತ್ತೀಚಿನ ವರ್ಷಗಳಲ್ಲಿ ತೀವ್ರ ಚರ್ಚೆಗೀಡಾಗಿರುವಂತೆಯೇ ಯುವಜನತೆಯನ್ನು ನಾಯಕರನ್ನಾಗಿ ರೂಪಿಸುವ ನಿಟ್ಟಿನಲ್ಲಿ ಇದೊಂದು ಕ್ರಾಂತಿಕಾರಿ ಹೆಜ್ಜೆಯಾಗಲಿದೆ.

ಕಳೆದೊಂದು ದಶಕದಿಂದೀಚೆಗೆ ರಾಜ್ಯ ಮಾತ್ರವಲ್ಲದೆ ದೇಶದೆಲ್ಲೆಡೆ ರಾಜಕೀಯ ಕ್ಷೇತ್ರದಲ್ಲಿ ಯುವಜನರ ಹವಾ ಒಂದಿಷ್ಟು ಬೀಸತೊಡಗಿದ್ದು ಕೊಂಚ ಆಶಾವಾದ ಮೂಡಿಸಿದೆ. ಆದರೆ ಈ ಯುವ ಪ್ರತಿನಿಧಿಗಳು ರಾಜಕೀಯದಲ್ಲಿ ಇನ್ನಷ್ಟೇ ಪಳಗಬೇಕಾಗಿದ್ದು ಅವರ ಒಟ್ಟಾರೆ ಕಾರ್ಯವೈಖರಿ ದೇಶದ ಗಮನ ಸೆಳೆದಿಲ್ಲ. ಹೀಗಾಗಿ ಶಾಸನ ಸಭೆಗಳಿಗೆ ಚುನಾಯಿತರಾಗಿ ಆಯ್ಕೆಯಾಗಿ ಬರುವ ಯುವಕರಿಗೆ ಆರಂಭದಲ್ಲೇ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ವೇಳೆ  ನೂತನ ಶಾಸಕರಿಗೆ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವಿಕೆ, ಅವರ ಕಾರ್ಯವ್ಯಾಪ್ತಿ, ಸದನದಲ್ಲಿ ಉತ್ತಮ ನಡತೆ ಮತ್ತು ವರ್ತನೆ ತೋರುವುದು ಮತ್ತಿತರ ವಿಚಾರಗಳಲ್ಲಿ ತಜ್ಞರು ಮತ್ತು ರಾಜಕೀಯ ಮುತ್ಸದ್ಧಿಗಳಿಂದ ತರಬೇತಿಯನ್ನು ನೀಡುತ್ತ ಬರಲಾಗಿದೆ. ಇದರಿಂದಾಗಿ ನೂತನ ಶಾಸಕರು ಕೂಡ ಕಲಾಪಗಳಲ್ಲಿ ತಮ್ಮ ಹೊಣೆಗಾರಿಕೆಯನ್ನು ಅರಿತುಕೊಂಡು ಕಲಾಪಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗಿದೆ. ಹೀಗಾಗಿ ಸ್ಪೀಕರ್‌ ಯು.ಟಿ.ಖಾದರ್‌ ಅವರು ರಾಜಕೀಯದಲ್ಲಿ ಆಸಕ್ತಿಯುಳ್ಳ ಪದವೀಧರರನ್ನು ಸಜ್ಜು ಗೊಳಿಸಲು ಮುಂದಾಗಿರುವುದು ದೂರದೃಷ್ಟಿಯ ಕ್ರಮವಾಗಿದೆ.

ಸದ್ಯ ಈ ಪ್ರಸ್ತಾವ ಪ್ರಾಥಮಿಕ ಹಂತದಲ್ಲಿದ್ದು ಆದಷ್ಟು ಶೀಘ್ರದಲ್ಲಿ ಇದನ್ನು ಅನುಷ್ಠಾನಗೊಳಿಸುವುದಾಗಿ ಸ್ಪೀಕರ್‌ ಹೇಳಿದ್ದಾರೆ. ಹಾಲಿ ಪ್ರಸ್ತಾ ವನೆಯ ಪ್ರಕಾರ ತರಬೇತಿಯ ಅವಧಿ ಒಂದು ವರ್ಷದ್ದಾಗಿರಲಿದ್ದು ಇದ ರಲ್ಲಿ ಮೊದಲ ಆರು ತಿಂಗಳುಗಳ ಕಾಲ ಪಠ್ಯ ಸಹಿತ ತರಬೇತಿ ಹಾಗೂ ಬಳಿಕದ ಆರು ತಿಂಗಳ ಕಾಲ ಪ್ರಾಯೋಗಿಕ ಅನುಭವ ಪಡೆಯಲು ಶಾಸ ಕರು, ಸಚಿವರು ಮತ್ತು ಸ್ಪೀಕರ್‌ ಅವರ ಕಚೇರಿಗಳಲ್ಲಿ ಇಂಟರ್ನ್ಶಿಪ್‌ಗೆ ಅವಕಾಶ ಕಲ್ಪಿಸಿಕೊಡಲಾಗುವುದು. ಇದರ ಜತೆಯಲ್ಲಿ ಹಿರಿಯ ನಾಯಕರು ಮತ್ತು ರಾಜಕೀಯ ಮುತ್ಸದ್ಧಿಗಳು, ಐಎಎಸ್‌ ಅಧಿಕಾ ರಿಗಳನ್ನು ಸಂಸ್ಥೆಗೆ ಕರೆಸಿಕೊಂಡು ಅವರೊಂದಿಗೆ ಸಂವಾದಗಳನ್ನು ಏರ್ಪಡಿಸುವ ಚಿಂತನೆಯನ್ನು ಇದು ಒಳಗೊಂಡಿದೆ.

ಸದ್ಯ ಮಹಾರಾಷ್ಟ್ರದ ಪುಣೆಯಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಯೊಂದು ಇಂತಹ ತರಬೇತಿ ನೀಡುತ್ತಿದೆ. ಈ ಸಂಸ್ಥೆಯ ಸಹಾಯ ಪಡೆದು ರಾಜ್ಯದಲ್ಲಿ ತೆರೆಯಲಾಗುವ ರಾಜಕೀಯ ತರಬೇತಿ ಸಂಸ್ಥೆಯ ಪಠ್ಯಕ್ರಮವನ್ನು ಅಖೈರುಗೊಳಿಸಲು ನಿರ್ಧರಿಸಲಾಗಿದೆ. ಸ್ಪೀಕರ್‌ ಯು.ಟಿ.ಖಾದರ್‌ ಅವರ ಈ ವಿನೂತನ ಪರಿಕಲ್ಪನೆ ಯುವಜನತೆಗೆ ರಾಜಕಾರಣದ ವರ್ಣಮಾಲೆಯನ್ನು ಕಲಿಸಿಕೊಡುವುದರ ಜತೆಯಲ್ಲಿ ಅವರ ರಾಜಕೀಯ ಪ್ರವೇಶಕ್ಕೆ ಪ್ರಥಮ ಮೆಟ್ಟಿಲಾಗಲಿದೆ. ಭವಿಷ್ಯದ ರಾಜಕಾರಣಿಗಳನ್ನು ರೂಪಿಸುವ ನಿಟ್ಟಿನಲ್ಲಿ ಇದು ಸಹಕಾರಿಯಾಗಲಿದೆ.

 

ಟಾಪ್ ನ್ಯೂಸ್

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Road Mishap ಜಾಲ್ಸೂರು: ಬಸ್‌ – ಲಾರಿ ಢಿಕ್ಕಿ; ಹಾನಿ

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು

Kadaba ಕಾರು ಚರಂಡಿಗೆ ಬಿದ್ದು ಮಂಡ್ಯ ಮೂಲದ ವ್ಯಕ್ತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

1—–ewqeq

Health; ರೋಗಮುಕ್ತ ಸಮಾಜಕ್ಕಾಗಿ ಆರೋಗ್ಯಯುತ ಆಹಾರ ಕ್ರಮ

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

ಶಾಂತಿಯುತ ಮತದಾನ: ಸಾಂಘಿಕ ಪ್ರಯತ್ನ ಸಫ‌ಲ…

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

Hiriadka ವಿಚಾರಣಾಧೀನ ಕೈದಿಗೆ ಗಾಂಜಾ ಪೂರೈಕೆ: ಪ್ರಕರಣ ದಾಖಲು

ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

Udupi ಟೆಸ್ಟ್‌ ಡ್ರೈವ್‌ ನೆಪದಲ್ಲಿ ಕಾರಿಗೆ ಜಖಂ; ಕಳ್ಳತನಕ್ಕೆ ಯತ್ನ

BJP notice to Union Minister Sinha who did not come to campaign and did not vote

BJP: ಪ್ರಚಾರಕ್ಕೆ ಬರದ, ವೋಟ್‌ ಮಾಡದ ಕೇಂದ್ರ ಸಚಿವ ಸಿನ್ಹಾಗೆ ಬಿಜೆಪಿ ನೋಟಿಸ್‌

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.