Gundlupete; ಕಾರು-ಈಚರ್ ನಡುವೆ ಮುಖಾಮುಖಿ ಡಿಕ್ಕಿ: ಕಾರು ಚಾಲಕ ಸಜೀವ ದಹನ
Team Udayavani, Jul 2, 2023, 8:34 AM IST
ಗುಂಡ್ಲುಪೇಟೆ(ಚಾಮರಾಜನಗರ): ಕಾರು ಹಾಗೂ ಈಚರ್ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಂಕಿ ಹತ್ತಿಕೊಂಡ ಪರಿಣಾಮ ಕಾರು ಚಾಲಕ ಸಜೀವ ದಹನವಾಗಿರುವ ಘಟನೆ ತಾಲೂಕಿನ ಹಿರೀಕಾಟಿ ಗೇಟ್ ಬಳಿ ಶನಿವಾರ ತಡರಾತ್ರಿ ನಡೆದಿದೆ.
ಮೈಸೂರಿನ ಮುಜಾಮಿಲ್ ಅಹಮದ್(35) ಮೃತಪಟ್ಟ ಚಾಲಕ. ಈಚರ್ ವಾಹನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ.
ಘಟನೆ: ಈಚರ್ ವಾಹನವು ಗುಂಡ್ಲುಪೇಟೆಯಿಂದ ಮೈಸೂರಿನ ಕಡೆಗೆ ಹಾಗೂ ಕಾರು ಮೈಸೂರು ಕಡೆಯಿಂದ ಗುಂಡ್ಲುಪೇಟೆಗೆ ಅತೀವೇಗದಿಂದ ತೆರಳುತ್ತಿದ್ದ ಹಿನ್ನಲೆ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹತ್ತಿಕೊಂಡಿದೆ. ಈಚರ್ ವಾಹನದಲ್ಲಿದ್ದವರು ಹೊರಗೆ ಹಾರಿ ಅಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಚಾಲಕ ಹೊರಬರಲಾರದೆ ಸಜೀವ ದಹನವಾಗಿದ್ದಾನೆ ಎಂದು ಬೇಗೂರು ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾಹಿತಿ ಅರಿತ ಅಗ್ನಿ ಶಾಮಕದಳದ ಸಿಬ್ಬಂದಿ ಕೂಡಲೇ ದೌಡಾಯಿಸಿ ಧಗಧಗಿಸುತ್ತಿದ್ದ ಬೆಂಕಿ ನಂದಿಸಲು ಹರಸಾಹಸ ಪಟ್ಟರು.
ಸ್ಥಳಕ್ಕೆ ಎಸ್ಪಿ ಭೇಟಿ: ಘಟನಾ ಸ್ಥಳಕ್ಕೆ ತಡರಾತ್ರಿ ಚಾಮರಾಜನಗರ ಪೊಲೀಸ್ ವರಿಷ್ಟಾಧಿಕಾರಿ ಪದ್ಮಿನಿ ಸಾಹೋ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ಬಗ್ಗೆ ಮಾಹಿತಿ ಪಡೆದರು. ಸರ್ಕಲ್ ಇನ್ಸ್ ಪೆಕ್ಟರ್ ಕಿರಣ್ ಕುಮಾರ್, ಸಬ್ ಇನ್ಸ್ ಪೆಕ್ಟರ್ ಚರಣ್ ಗೌಡ ಸೇರಿದಂತೆ ಪೊಲೀಸ್ ಸಿಬ್ಬಂದಿ ಹಾಜರಿದ್ದರು.
ಇನ್ನೂ ಘಟನೆ ಕುರಿತು ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ
Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು
Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ
Pune; ಖ್ಯಾತ ಬಿಲ್ಡರ್ ಒಬ್ಬರ 17 ವರ್ಷದ ಪುತ್ರನ ಪೋರ್ಷೆ ಕಾರಿಗೆ ಇಬ್ಬರು ಬಲಿ
Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ