ಸರ್ಕಾರದ ಯೋಜನೆ ಅರ್ಹರಿಗೆ ತಲುಪಿಸಿ


Team Udayavani, Jul 2, 2023, 3:33 PM IST

ಸರ್ಕಾರದ ಯೋಜನೆ ಅರ್ಹರಿಗೆ ತಲುಪಿಸಿ

ಮೈಸೂರು: ಸರ್ಕಾರದ ಕಾರ್ಯಕ್ರಮಗಳನ್ನು ಅರ್ಹ ಫ‌ಲಾನುಭವಿಗಳಗೆ ತಲುಪಿಸಿ ಹಾಗೂ ಸರ್ಕಾರದ ಅನುದಾನವನ್ನು ನಿರ್ದಿಷ್ಟ ಕಾಮಗಾರಿಗಳಿಗೆ ಬಳಸಿಕೊಳ್ಳ ಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪಂಚಾಯತ್‌ ಆಡಳಿತಾಧಿಕಾರಿ ಡಾ. ಎಸ್‌. ಸೆಲ್ವಕುಮಾರ್‌ ಹೇಳಿದರು.

ಜಿಲ್ಲಾ ಪಂಚಾಯತ್‌ ಅಬ್ದುಲ್‌ ನಜೀರ್‌ ಸಾಬ್‌ ಸಭಾಂಗಣದಲ್ಲಿ ಶನಿವಾರ ನಡೆದ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಳೆ ವಿಳಂಬವಾಗುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದರು.

ಜ್ಯೋತಿ ತಳಿಯ ಭತ್ತಕ್ಕೆ ಹೆಚ್ಚಿನ ಬೇಡಿಕೆ: ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಚಂದ್ರಶೇಖರ್‌ ಮಾಹಿತಿ ನೀಡಿ, 2023 ರ ಜೂನ್‌ವರೆಗೆ ವಾಡಿಕೆ ಮಳೆ 290.1 ಮಿ.ಮಿ ನಷ್ಟಿದ್ದು 267.3 ಮಳೆಯಾಗಿರುತ್ತದೆ. ಶೇ. 8 ರಷ್ಟು ಮಳೆ ಕೊರತೆಯಾಗಿದೆ. ಅಗತ್ಯದಷ್ಟು ಬಿತ್ತನೆ ಬೀಜ ಲಭ್ಯವಿದ್ದು ಜ್ಯೋತಿ ತಳಿಯ ಭತ್ತಕ್ಕೆ ಹೆಚ್ಚಿನ ಬೇಡಿಕೆ ಇದೆ. ವರ್ತಕರು ಈ ಭತ್ತವನ್ನು ಹೊಲಕ್ಕೆ ಬಂದು ಖರೀದಿಸುತ್ತಾರೆ ಎಂದರು.

ಮೈಸೂರು ಜಿಲ್ಲೆಯಲ್ಲಿ ರಸಗೊಬ್ಬರ 1,15,220 ಟನ್‌ ಲಭ್ಯವಿದ್ದು, ಉಳಿಕೆ ದಾಸ್ತಾನು ಮುಂದಿನ ದಿನಗಳಲ್ಲಿ ಬರುವುದರಿಂದ ರಸಗೊಬ್ಬರದ ಯಾವುದೇ ಕೊರತೆ ಬರುವುದಿಲ್ಲ ಎಂದರು.

ರೈತ ಮುಖಂಡರ ಸಭೆ ನಡೆಸಿ: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಮಾತನಾಡಿ, ಎಲ್ಲ ತಹಶೀಲ್ದಾರ್‌ಗಳಿಗೂ ತಾಲೂಕು ಹಂತದಲ್ಲಿ ರೈತ ಮುಖಂಡರ ಸಭೆ ನಡೆಸಿ ಅವರಿಗೆ ಬೇಕಾದ ತಳಿಯ ಬೀಜಗಳನ್ನು ವಿತರಿಸಲು ಸೂಚಿಸಲಾಗಿದೆ. ಮುಖ್ಯಮಂತ್ರಿಗಳು ನಡೆಸಿದ ಸಭೆಯಲ್ಲಿ ರೈತರಿಗೆ ವಿತರಿಸುವ ಬೀಜಗಳು ಉತ್ಕಷ್ಟ ಗುಣಮಟ್ಟ, ಮೊಳಕೆಯೊಡೆಯುವ ಪ್ರಮಾಣದ ಬಗೆಗೆ ಕೃಷಿ ಇಲಾಖೆಯವರು ಖಾತರಿ ಒದಗಿಸಬೇಕೆಂದು ಸೂಚಿಸಿದ್ದಾರೆ ಎಂದರು.

ಡಿಡಿಪಿಐ ಅವರು ಸಭೆಗೆ ಮಾಹಿತಿ ನೀಡಿ, ಈ ಸಾಲಿನ ಪಠ್ಯಪುಸ್ತಕ ಹಾಗೂ ಸಮವಸ್ತ್ರ ವಿತರಣೆಯಾಗಿವೆ, ಎಸ್‌.ಎಸ್‌.ಎಲ್‌.ಸಿ ಪರೀಕ್ಷೆಯಲ್ಲಿ ಜಿಲ್ಲೆಯ ಫ‌ಲಿತಾಂಶ 13 ನೇ ಸ್ಥಾನದಲ್ಲಿದೆ ಎಂದರು.

10 ಜಾನುವಾರುಗಳು ಗುಣಮುಖ: ಪಶು ವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರು ಮಾಹಿತಿ ನೀಡಿ, ಜಾನುವಾರುಗಳಿಗೆ 30 ವಾರಗಳಿಗಾಗುವಷ್ಟು ಮೇವು ಲಭ್ಯವಿದೆ. ಜಿÇÉೆಯಲ್ಲಿ 5.14 ಲಕ್ಷ ಜಾನುವಾರು ಗಳಿದ್ದು, ಈ ಪೈಕಿ ಮೇಕೆ, ಕುರಿಗಳಿಗೆ ವಾಕ್ಸಿನೇಶನ್‌ ಆಗಿದೆ. ಚರ್ಮಗಂಟು ರೋಗವೂ ಕಡಿಮೆಯಾಗಿದೆ. ಚರ್ಮಗಂಟು ರೋಗದಿಂದ ಬಳಲುತ್ತಿದ್ದ 24 ಜಾನುವಾರುಗಳ ಪೈಕಿ 10 ಗುಣವಾಗಿವೆ ಎಂದರು. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಮಹಾನಗರ ಪಾಲಿಕೆ ಆಯುಕ್ತ ಲಕ್ಷ್ಮೀಕಾಂತ ರೆಡ್ಡಿ ಭಾಗವಹಿಸಿದ್ದರು.

ಇನ್ನೂ 15 ದಿನಗಳು ನೀರು ಬಳಸಬಹುದು : ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿ, ಬೋರ್ವೆಲ್‌ ನೀರನ್ನು ಭಾಗಶಃ ಅವಲಂಬಿಸಿರುವ ನಗರ ಸ್ಥಳೀಯ ಸಂಸ್ಥೆಗಳಾದ ಬೋಗಾದಿ, ರಮ್ಮನ ಹಳ್ಳಿ, ಕಡಕೋಳ, ಶ್ರೀರಾಂಪುರ ಪಟ್ಟಣ ಪಂಚಾಯಿತಿಗಳಿಗೆ ಮತ್ತು ಯಾವುದೇ ನಗರ ಸ್ಥಳೀಯ ಸಂಸ್ಥೆಗಳಿಗೆ ಸಫೇìಸ್‌ ವಾಟರ್‌ ಕೊರತೆ ಇರುವುದಿಲ್ಲ. ಲಭ್ಯವಿರುವ ನೀರನ್ನು ಇನ್ನೂ 15 ದಿನಗಳವರೆಗೆ ಬಳಸಬಹುದು. ಇನ್ನು 15 ದಿನಗಳ ಕಾಲ ಮಳೆ ಬಾರದೆ ಇದ್ದಲ್ಲಿ ಬೋರ್ವೆಲ್‌ ಮತ್ತು ಟ್ಯಾಂಕರ್‌ ಮೂಲಕ ನೀರು ಸರಬರಾಜು ಮಾಡುವ ಸಮಸ್ಯೆ ಎದುರಾಗಬಹುದು ಎಂದರು.

ಟಾಪ್ ನ್ಯೂಸ್

1-weeqweqw

Mumbai: ಬಿರುಗಾಳಿ ಮಳೆ ಅಬ್ಬರಕ್ಕೆ ಬಿಲ್ ಬೋರ್ಡ್ ಕುಸಿದು 35 ಮಂದಿಗೆ ಗಾಯ

Opposition cowards fearing Pakistan’s nuclear power: PM Modi

Election; ಪಾಕಿಸ್ತಾನದ ಪರಮಾಣು ಶಕ್ತಿಗೆ ಹೆದರುವ ವಿಪಕ್ಷದ ಹೇಡಿಗಳು…: ಪ್ರಧಾನಿ ಮೋದಿ

Revanna 2

Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು

1-wewqeqe

Rahul Gandhi ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ: ಶಾ ವಾಗ್ದಾಳಿ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

Gangavathi ಖಾಸಗಿ ಶಾಲೆಗಳಿಂದ ಪ್ರವೇಶ ನೆಪದಲ್ಲಿ ಲಕ್ಷಾಂತರ ರೂ.ವಸೂಲಿ ಖಂಡಿಸಿ ಪ್ರತಿಭಟನೆ

siddanna

Eknath Shinde ಭ್ರಮೆಯಲ್ಲಿದ್ದಾರೆ, ನಮ್ಮ ಶಾಸಕರು ಮಾರಾಟವಾಗಲು ಸಿದ್ದರಿಲ್ಲ: ಸಿದ್ದರಾಮಯ್ಯ

Kharge (2)

Modi ಗೆದ್ದರೆ ಭವಿಷ್ಯದಲ್ಲಿ ಚುನಾವಣೆಗಳೇ ಇರುವುದಿಲ್ಲ: ಖರ್ಗೆ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Revanna ನನ್ನನ್ನು ಅಪಹರಿಸಿಲ್ಲ, ಸಂಬಂಧಿಕರ ಮನೆಯಲ್ಲಿದ್ದೇನೆ

HD Revanna ನನ್ನನ್ನು ಅಪಹರಿಸಿಲ್ಲ, ಸಂಬಂಧಿಕರ ಮನೆಯಲ್ಲಿದ್ದೇನೆ

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ 

ಯಾರನ್ನೂ ರಾಜಕೀಯವಾಗಿ ಸಮಾಧಿ ಮಾಡಲು ಸಾಧ್ಯವಿಲ್ಲ: ಸಿದ್ದರಾಮಯ್ಯ 

Siddaramaiah ಪಕ್ಷ ಬೇರೆಯಾದರೂ ಸಂಸದ ಪ್ರಸಾದ್‌ ಜತೆಗಿನ ಸ್ನೇಹಕ್ಕೆ ಧಕ್ಕೆ ಇರಲಿಲ್ಲ

Siddaramaiah ಪಕ್ಷ ಬೇರೆಯಾದರೂ ಸಂಸದ ಪ್ರಸಾದ್‌ ಜತೆಗಿನ ಸ್ನೇಹಕ್ಕೆ ಧಕ್ಕೆ ಇರಲಿಲ್ಲ

ಸಿಎಂಗೆ ಚೀಟಿ ಕೊಟ್ಟ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

ಸಿಎಂಗೆ ಚೀಟಿ ಕೊಟ್ಟ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ

1-wqewqewq

Hunsur: ಕಲುಷಿತ ನೀರು ಸೇವಿಸಿ 25ಕ್ಕೂ ಹೆಚ್ಚು ಮಂದಿ ಅಸ್ವಸ್ಥ; ಆತಂಕ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-weeqweqw

Mumbai: ಬಿರುಗಾಳಿ ಮಳೆ ಅಬ್ಬರಕ್ಕೆ ಬಿಲ್ ಬೋರ್ಡ್ ಕುಸಿದು 35 ಮಂದಿಗೆ ಗಾಯ

Opposition cowards fearing Pakistan’s nuclear power: PM Modi

Election; ಪಾಕಿಸ್ತಾನದ ಪರಮಾಣು ಶಕ್ತಿಗೆ ಹೆದರುವ ವಿಪಕ್ಷದ ಹೇಡಿಗಳು…: ಪ್ರಧಾನಿ ಮೋದಿ

Revanna 2

Bail; ಎಚ್.ಡಿ.ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು

qpl

Queen Premier League; ಸಿನಿಮಾ ಸೀರಿಯಲ್ ನಟಿಯರ ಕ್ರಿಕೆಟ್ ಪಂದ್ಯಾವಳಿ

1-wewqeqe

Rahul Gandhi ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಲಿಲ್ಲ: ಶಾ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.