NCP; ಮಹಾರಾಷ್ಟ್ರ ಅಸೆಂಬ್ಲಿಯಲ್ಲಿ ಜಿತೇಂದ್ರ ಅವ್ಹಾದ್ ವಿಪಕ್ಷ ನಾಯಕ
ಸರಕಾರ ಬೆಂಬಲಿಸಲು ಇಡಿ , ಸಿಬಿಐ ಹೊರತುಪಡಿಸಿ ಬೇರೆ ಕಾರಣ ಗೊತ್ತಿಲ್ಲ...
Team Udayavani, Jul 2, 2023, 7:02 PM IST
ಮುಂಬಯಿ: ವಿಪಕ್ಷ ನಾಯಕರಾಗಿದ್ದ ಅಜಿತ್ ಪವಾರ್ ಅವರು ಏಕನಾಥ್ ಶಿಂಧೆ ಸರ್ಕಾರವನ್ನು ಭಾನುವಾರ ಉಪಮುಖ್ಯಮಂತ್ರಿಯಾಗಿ ಸೇರಿದ ನಂತರ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷವು ಜಿತೇಂದ್ರ ಅವ್ಹಾದ್ ಅವರನ್ನು ಮಹಾರಾಷ್ಟ್ರ ಅಸೆಂಬ್ಲಿಯ ಪ್ರತಿಪಕ್ಷದ ನಾಯಕರನ್ನಾಗಿ ನೇಮಕ ಮಾಡಿದೆ.
ಎನ್ಸಿಪಿಯ 53 ಶಾಸಕರ ಪೈಕಿ 36 ಮಂದಿ ಹೊಸ ಉಪ ಮುಖ್ಯಮಂತ್ರಿಗೆ ಬೆಂಬಲ ವ್ಯಕ್ತಪಡಿಸಿದ್ದು ಮತ್ತು ಕೆಲವೇ ದಿನಗಳಲ್ಲಿ ಸಂಖ್ಯೆ 46 ಕ್ಕೆ ಏರಿಕೆಯಾಗಬಹುದು ಎಂದು ಅಜಿತ್ ಪವಾರ್ ಅವರ ಆಪ್ತ ಸಹಾಯಕರು ಹೇಳಿರುವ ನಡುವೆ ಈ ಬೆಳವಣಿಗೆಯಾಗಿದೆ.
ಎನ್ಸಿಪಿ ರಾಜ್ಯ ಘಟಕದ ಅಧ್ಯಕ್ಷ ಜಯಂತ್ ಪಾಟೀಲ್ ಅವರು ಥಾಣೆ ಜಿಲ್ಲೆಯ ಮುಂಬ್ರಾ-ಕಲ್ವಾ ಶಾಸಕ ಅವ್ಹಾದ್ ಅವರನ್ನು ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಮತ್ತು ಮುಖ್ಯ ಸಚೇತಕರನ್ನಾಗಿ ನೇಮಿಸಿದ್ದಾರೆ ಎಂದು ಹೇಳಿದ್ದಾರೆ.
“ಎಲ್ಲಾ ಶಾಸಕರು ನನ್ನ ವಿಪ್ ಅನ್ನು ಪಾಲಿಸಬೇಕಾಗುತ್ತದೆ” ಎಂದು ಅವರು ಪಕ್ಷಾಂತರ ಮತ್ತು ಅನರ್ಹತೆಯ ಕೋನಗಳ ಸ್ಪಷ್ಟ ಉಲ್ಲೇಖದಲ್ಲಿ ಪ್ರತಿಪಾದಿಸಿದ್ದಾರೆ.
ಕೆಲವು ಎನ್ಸಿಪಿ ನಾಯಕರ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತು ಕೇಂದ್ರೀಯ ತನಿಖಾ ದಳದ ತನಿಖೆಗಳು ಮತ್ತು ಅವರ ಪಕ್ಷವನ್ನು ಬದಲಾಯಿಸುವಲ್ಲಿ ಅದರ ಪಾತ್ರದ ಕುರಿತು ಪ್ರಶ್ನಿಸಿದ ಅವ್ಹಾದ್, “ಈ ನಾಯಕರು ರಾಜ್ಯ ಸರ್ಕಾರವನ್ನು ಸೇರಲು ನಿರ್ಧರಿಸುವ ಹಿಂದೆ ನನಗೆ ಬೇರೆ ಯಾವುದೇ ಕಾರಣ ಗೊತ್ತಿಲ್ಲ.ಅಂತಹ ಕೆಲಸ ಮಾಡುವ ಅಗತ್ಯವಿರಲಿಲ್ಲ. ಆ ನಾಯಕರು ಪಕ್ಕಕ್ಕೆ ಕುಳಿತುಕೊಳ್ಳಬಹುದಿತ್ತು ಎಂದರು.
ಕಳೆದ 25 ವರ್ಷಗಳಲ್ಲಿ ತಮ್ಮನ್ನು ಸಚಿವರನ್ನಾಗಿ ಮಾಡಿದ ಪಕ್ಷವನ್ನು ಈ ನಾಯಕರು ಮರೆಯಬಾರದು. ಈಗ, ಅವರು ತಮ್ಮ ನಾಯಕ 83 ವರ್ಷ ವಯಸ್ಸಿನ ಶರದ್ ಪವಾರ್ ಅವರ ಇಳಿ ವಯಸ್ಸಿನಲ್ಲಿ ಪಕ್ಷ ತೊರೆಯುತ್ತಿದ್ದಾರೆ” ಎಂದು ಅವ್ಹಾದ್ ಕಿಡಿ ಕಾರಿದರು.
ಸಂಸದರಾದ ಸುನೀಲ್ ತಟ್ಕರೆ ಮತ್ತು ಅಮೋಲ್ ಕೋಲ್ಹೆ ಮತ್ತು ರಾಜ್ಯಸಭಾ ಸದಸ್ಯ ಪ್ರಫುಲ್ ಪಟೇಲ್ ಭಾನುವಾರದ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸಿ ಶರದ್ ಪವಾರ್ ಅವರಿಗೆ ಶಾಕ್ ನೀಡಿದ್ದಾರೆ.
ಪಕ್ಷದ ಗೆರೆಯನ್ನು ಉಲ್ಲಂಘಿಸಿ ಏಕನಾಥ್ ಶಿಂಧೆ ಸರ್ಕಾರಕ್ಕೆ ಸೇರ್ಪಡೆಗೊಂಡವರ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಭಾನುವಾರ ಹೇಳಿದ್ದಾರೆ, ಅಜಿತ್ ಪವಾರ್ ಮತ್ತು ಆಡಳಿತದ ಭಾಗವಾಗಿರುವ ಇತರ ನಾಯಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bijapur; ಭಾರೀ ಎನ್ಕೌಂಟರ್ ವೇಳೆ ಸಮವಸ್ತ್ರ ಬದಲಿಸಿದ ನಕ್ಸಲೀಯರು!
Congress ಪಕ್ಷ ಈ ಬಾರಿ 50 ಕ್ಷೇತ್ರಗಳಲ್ಲೂ ಜಯ ಗಳಿಸಲ್ಲ: ಪ್ರಧಾನಿ ಮೋದಿ ವಾಗ್ದಾಳಿ
Panaji: ಕೇಜ್ರಿವಾಲ್ಗೆ ಜಾಮೀನು… ಬೆರಗಾದ ಬಿಜೆಪಿ ನಾಯಕರು: ವಿನೋದ ಪಾಲೇಕರ್
Cash Seized: ಅಪಘಾತವಾದ ವಾಹನದಲ್ಲಿತ್ತು ದಾಖಲೆ ಇಲ್ಲದ 7 ಕೋಟಿ ಹಣ… ಬೆಚ್ಚಿ ಬಿದ್ದ ಜನ
ಹೈದರಾಬಾದ್ ಗೆ ಬರುವೆ ಯಾರು ತಡೆಯುತ್ತಾರೋ…ನೋಡೋಣ: ಒವೈಸಿಗೆ ಬಿಜೆಪಿ ನಾಯಕಿ ರಾಣಾ
MUST WATCH
ಹೊಸ ಸೇರ್ಪಡೆ
Rain; ಬೆಳಗಾವಿ, ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತ
Former CM ಎಸ್.ಎಂ. ಕೃಷ್ಣ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ
Modi ಟೀಕೆಗಳನ್ನು ಸಹಿಸುವುದಿಲ್ಲ,ಇತರರ ವಿರುದ್ಧ ಏನನ್ನೂ ಮಾತನಾಡುತ್ತಾರೆ: ಪವಾರ್
Bijapur; ಭಾರೀ ಎನ್ಕೌಂಟರ್ ವೇಳೆ ಸಮವಸ್ತ್ರ ಬದಲಿಸಿದ ನಕ್ಸಲೀಯರು!
Bado Badi Hoye Hoye.. ಎಲ್ಲಿ ನೋಡಿದರೂ ಈ ಹಾಡಿನದ್ದೇ ಹವಾ.. ಇದನ್ನು ಹಾಡಿದವರು ಯಾರು?