ಬೆಳಗಾವಿ: ಉತ್ತರ ಕರ್ನಾಟಕದ ಲೇಖಕರನ್ನು ಗುರುತಿಸುತ್ತಿಲ್ಲ-ಡಾ. ಬಸವರಾಜ

ಬರವಣಿಗೆಯ ಶೈಲಿ ಕೂಡ ಓದುಗನಿಗೆ ಬೇಸರವಾಗದಂತಿರುತ್ತದೆ

Team Udayavani, Jul 3, 2023, 2:10 PM IST

ಬೆಳಗಾವಿ: ಉತ್ತರ ಕರ್ನಾಟಕದ ಲೇಖಕರನ್ನು ಗುರುತಿಸುತ್ತಿಲ್ಲ-ಡಾ. ಬಸವರಾಜ

ಬೆಳಗಾವಿ: ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಪ್ರತಿಭಾವಂತ ಬರಹಗಾರರಿದ್ದಾರೆ. ಅಭ್ಯಾಸಪೂರ್ಣ ಕೃತಿಗಳನ್ನು ರಚಿಸುತ್ತಿದ್ದಾರೆ. ಯಾವುದೇ ಪಿಎಚ್‌ಡಿ ಪ್ರಬಂಧಗಳಿಗೆ ಕಡಿಮೆ ಇಲ್ಲದ ಕೃತಿಗಳು ಹೊರಬರುತ್ತಿವೆ. ಆದರೆ ಉತ್ತರ ಕರ್ನಾಟಕದ ಇಂತಹ ಕೆಲಸಗಳನ್ನು ಗುರುತಿಸಿ, ಗೌರವಿಸದಿರುವುದು ಬೇಸರದ ವಿಷಯ ಎಂದು ಖ್ಯಾತ ವಿದ್ವಾಂಸ ಡಾ. ಬಸವರಾಜ ಜಗಜಂಪಿ
ವಿಷಾದಿಸಿದರು.

ಇಲ್ಲಿಯ ಅನಗೋಳದ ಆಶೀರ್ವಾದ ಮಂಗಲ ಕಾರ್ಯಾಲಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಲೇಖಕ ಶಿರೀಷ ಜೋಶಿ ಅವರು ರಚಿಸಿದ ಗುಜರಿ ತೋಡಿ ಗ್ರಂಥ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಅತ್ಯಂತ ಹೆಮ್ಮೆಯ ಬರಹಗಾರರಲ್ಲಿ ಶಿರೀಷ ಜೋಶಿ ಸಹ ಒಬ್ಬರು. ಅವರ ಈ ಗುಜರಿ ತೋಡಿ ಕಾದಂಬರಿ ಕೂಡ ಸಾಕಷ್ಟು ಮಹತ್ವದ ವಿವರಗಳನ್ನು ಒಳಗೊಂಡ ಕೃತಿಯಾಗಿದ್ದು ಲೇಖಕರು ವಿಶ್ವವಿದ್ಯಾಲಯದ ಅಕಾಡೆಮಿಯ ಗೌರವಕ್ಕೆ ಅರ್ಹರಾಗಿದ್ದಾರೆ ಎಂದರು.

ಕರ್ನಾಟಕದಲ್ಲಿ ಸಾಕಷ್ಟು ಅಕಾಡೆಮಿಗಳಿವೆ. ವಿಶ್ವವಿದ್ಯಾಲಯಗಳಿವೆ. ಉತ್ತಮ ಗುಣಮಟ್ಟದ ಮೌಲಿಕ ಬರಹಗಾರರಿದ್ದಾರೆ. ಸಂಶೋಧನಾತ್ಮಕ ಕೃತಿಗಳನ್ನು ರಚಿಸುತ್ತಿದ್ದಾರೆ. ಆದರೆ ಅಂಥವರನ್ನು ಗುರುತಿಸುವ ಕೆಲಸವಾಗುತ್ತಿಲ್ಲ. ಸಂಬಂಧಿಸಿದವರು ಇದರ ಕಡೆ ಗಮನಿಸಬೇಕಾದ ಅಗತ್ಯವಿದೆ ಎಂದು ಡಾ| ಬಸವರಾಜ ಜಗಜಂಪಿ ಹೇಳಿದರು.

ಕೃತಿಯ ಕುರಿತು ಡಾ| ಪಿ ಜಿ ಕೆಂಪಣ್ಣವರ ಮತ್ತು ಪ್ರೊ| ಜಿ ಆರ್‌ ಕುಲಕರ್ಣಿ ಮಾತನಾಡಿ, ಲೇಖಕ ಅತ್ಯಂತ ತಾಳ್ಮೆಯಿಂದ ಮತ್ತು ಶ್ರಮದಿಂದ ಈ ಕೃತಿ ರಚಿಸಿದ್ದು ಇದೊಂದು ಮೌಲಿಕ ಗ್ರಂಥವಾಗಿದೆ ಎಂದರು.

ಸಾನ್ನಿಧ್ಯ ವಹಿಸಿದ್ದ ಚಿಂಚಣಿಯ ಅಲ್ಲಮಪ್ರಭು ಸ್ವಾಮಿಜಿ ಅವರು ಮಾತನಾಡಿ, ಶಿರೀಷ ಜೋಶಿಯವರ ಪ್ರತಿಯೊಂದು ಕೃತಿಯೂ ಅಭ್ಯಾಸಪೂರ್ಣವಾಗಿರುತ್ತದೆ ಉದ್ದೇಶಕ್ಕೆ ಭಂಗವಾಗದಂತೆ ಅವರ ಬರವಣಿಗೆ ಇರುತ್ತದೆ. ಕೃತಿಗಳ ರಚನೆ ಅಷ್ಟೇ ಅಲ್ಲ ಅವರು ಚಲನಚಿತ್ರ ಕಥಾ ಸಂಭಾಷಣೆಗಳನ್ನು ಕೂಡ ತುಂಬಾ ಚೆನ್ನಾಗಿ ಬರೆಯುತ್ತಾರೆ. ಅವರ ಕೃತಿಗಳ ಕಥಾ ವಸ್ತು ವಿಶೇಷವಾಗಿದ್ದು ಅವರ ಬರವಣಿಗೆಯ ಶೈಲಿ ಕೂಡ ಓದುಗನಿಗೆ ಬೇಸರವಾಗದಂತಿರುತ್ತದೆ ಎಂದರು.

ಜೋಶಿ ಅವರ ಈ ಗುಜರಿ ತೋಡಿ ಕಾದಂಬರಿ ವಿಶ್ವವಿದ್ಯಾಲಯಕ್ಕೆ ಪಠ್ಯವಾಗಬೇಕು, ಬರಹಗಾರರನ್ನು ಪ್ರೋತ್ಸಾಹಿಸಬೇಕು ಎಂದು ಹೇಳಿದರು. ಅಭಿಯಂತರ ಅರುಣಕುಮಾರ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಡಾ| ರಾಮಕೃಷ್ಣ ಮರಾಠೆ ಪ್ರಾಸ್ತಾವಿಕವಾಗಿ ಮಾತನಾಡಿದರು. ರಜಿಸ್ಟ್ರಾರ್‌ ಕೆ ನಾಗೇಂದ್ರ, ಡಾ| ಸರಜೂ ಕಾಟ್ಕರ್‌, ಪ್ರೊ| ಡಿ ಎಸ್‌ ಚೌಗಲೆ, ಶ್ರೀಧರ ಕುಲಕರ್ಣಿ, ಯ ರು ಪಾಟೀಲ, ರಂಗಕರ್ಮಿ ಝಕೀರ ನದಾಫ, ಕೆ ಟಿ ಜೋಶಿ, ರಮೇಶ ಜಂಗಲ್‌, ಮಂಜುಳಾ ಜೋಶಿ, ಬಂಡು ಕುಲಕರ್ಣಿ, ಡಾ ಅರವಿಂದ ಕುಲಕರ್ಣಿ, ಅನಂತ ಪಪ್ಪು, ಪ್ರಾ| ಬಿ ಎಸ್‌ ಗವಿಮಠ ಮುಂತಾದವರು ಉಪಸ್ಥಿತರಿದ್ದರು.

ಲೇಖಕ ಶಿರೀಷ ಜೋಶಿ ತಮ್ಮ ಸಾಹಿತ್ಯ, ರಂಗಭೂಮಿ ಮತ್ತು ಸೇವಾ ಅನುಭವಗಳನ್ನು ಹಂಚಿಕೊಂಡರು. ಬಸವರಾಜ ಗಾರ್ಗಿ ನಿರೂಪಿಸಿದರು. ಶ್ರದ್ಧಾ ಪಾಟೀಲ ಸ್ವಾಗತಿಸಿದರು. ನೀರಜಾ ಗಣಾಚಾರಿ ಪರಿಚಯ ಮಾಡಿದರು. ಶ್ರೀನಾಥ ಜೋಶಿ ವಂದಿಸಿದರು. ಇದೆ ಸಂದರ್ಭದಲ್ಲಿ ಚಿತ್ರಕಲಾವಿದರಾದ ಬಾಳು ಸದಲಗೆ ದಂಪತಿಗಳನ್ನು ಸತ್ಕರಿಸಲಾಯಿತು.

ಟಾಪ್ ನ್ಯೂಸ್

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewe

Star Air ;ತಿರುಪತಿಯಿಂದ ಬೆಳಗಾವಿಗೆ ವಿಮಾನ ರದ್ದು: ಪ್ರಯಾಣಿಕರ ಪರದಾಟ

three year old child passed away in Suspicious way

Belagavi: ಮೂರು ವರ್ಷದ‌ ಕಂದಮ್ಮ ಅನುಮಾನಾಸ್ಪದ ಸಾವು; ಕೊಲೆ ಆರೋಪ

drowned

Vedganga ನದಿಯಲ್ಲಿ ಮುಳುಗಿ ನಾಲ್ವರು ಮೃತ್ಯು:ಇಬ್ಬರು ಬೆಳಗಾವಿಯವರು

ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

Belagavi; ಅಂಜಲಿ ಹತ್ಯೆ ಖಂಡಿಸಿ ಬಿಜೆಪಿ ಪ್ರತಿಭಟನೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

3-bng

Road Mishap: ನೈಸ್‌ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಸಾವು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.