Khalistan; ಕೆನಡಾದೊಂದಿಗೆ ಸಂಬಂಧಗಳಿಗೆ ಹೊಡೆತ ಬೀಳಲಿದೆ: ಜೈಶಂಕರ್ ಎಚ್ಚರಿಕೆ
Team Udayavani, Jul 3, 2023, 10:38 PM IST
ಹೊಸದಿಲ್ಲಿ: ಖಲಿಸ್ತಾನಿ ಅಂಶಗಳಿಗೆ ಜಾಗ ನೀಡದಂತೆ ಕೆನಡಾಕ್ಕೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಸೋಮವಾರ ಎಚ್ಚರಿಕೆ ನೀಡಿದ್ದಾರೆ. ಕೆನಡಾದಲ್ಲಿ ಖಲಿಸ್ತಾನಿ ಬೆದರಿಕೆ ಪೋಸ್ಟರ್ಗಳು ಭಾರತೀಯ ರಾಜತಾಂತ್ರಿಕರ ಹೆಸರನ್ನು ಒಳಗೊಂಡಿರುವುದು ಬೆಳಕಿಗೆ ಬಂದ ನಂತರ ಜೈಶಂಕರ್ ಈ ಹೇಳಿಕೆ ನೀಡಿದ್ದಾರೆ.
ಬಿಜೆಪಿ ಪ್ರಚಾರ ಅಭಿಯಾನದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಜೈಶಂಕರ್, ಖಲಿಸ್ತಾನಿ ಪೋಸ್ಟರ್ಗಳಲ್ಲಿನ ಭಾರತೀಯ ರಾಜತಾಂತ್ರಿಕರ ಚಿತ್ರಗಳ ವಿಷಯವನ್ನು ಕೆನಡಾದ ಅಧಿಕಾರಿಗಳೊಂದಿಗೆ ಭಾರತ ಪ್ರಸ್ತಾಪಿಸಿದೆ ಎಂದು ಜೈಶಂಕರ್ ಹೇಳಿದ್ದಾರೆ. ಭಾರತ ಸರ್ಕಾರವು ಕೆನಡಾ ಮತ್ತು ಯುಕೆ ನಂತಹ ಪಾಲುದಾರ ರಾಷ್ಟ್ರಗಳನ್ನು ತಲುಪಿದೆ. ಖಲಿಸ್ತಾನಿ ಗುಂಪುಗಳಿಗೆ ಜಾಗ ನೀಡದಂತೆ ವಿನಂತಿಸಿದ್ದೇವೆ, ಇದು ದೇಶಗಳ ನಡುವಿನ ಸಂಬಂಧದ ಮೇಲೆ ಪರಿಣಾಮ ಬೀರುತ್ತದೆ ಎಂದು ಎಚ್ಚರಿಸಿರುವುದಾಗಿ ಹೇಳಿದರು.
“ಕೆನಡಾ, ಯುಎಸ್, ಯುಕೆ ಮತ್ತು ಆಸ್ಟ್ರೇಲಿಯಾದಂತಹ ನಮ್ಮ ಪಾಲುದಾರ ರಾಷ್ಟ್ರಗಳಿಗೆ ನಾವು ವಿನಂತಿಸಿದ್ದೇವೆ, ಅಲ್ಲಿ ಕೆಲವೊಮ್ಮೆ ಖಲಿಸ್ತಾನಿ ಚಟುವಟಿಕೆಗಳು ನಡೆಯುತ್ತವೆ, ಖಲಿಸ್ತಾನಿಗಳಿಗೆ ಜಾಗ ನೀಡಬೇಡಿ. ಏಕೆಂದರೆ ಖಲಿಸ್ತಾನಿಗಳು ತೀವ್ರಗಾಮಿ, ಉಗ್ರಗಾಮಿ ಚಿಂತನೆ ನಮಗಾಗಲೀ ಅವರಿಗಾಗಲೀ ಸಂಬಂಧಗಳಿಗೆ ಒಳ್ಳೆಯದಲ್ಲ” ಎಂದು ವಿದೇಶಾಂಗ ವ್ಯವಹಾರಗಳ ಸಚಿವರು ಹೇಳಿದರು.
ಕೆನಡಾದಲ್ಲಿ ಭಾರತೀಯ ರಾಯಭಾರಿ, ಹೈಕಮಿಷನರ್ ಸಂಜಯ್ ವರ್ಮಾ ಮತ್ತು ಟೊರೊಂಟೊದಲ್ಲಿರುವ ಭಾರತದ ಕಾನ್ಸುಲ್ ಜನರಲ್ ಅಪೂರ್ವ ಶ್ರೀವಾಸ್ತವ ಅವರ ಚಿತ್ರಗಳು ಮತ್ತು ಹೆಸರುಗಳನ್ನು ಹೊಂದಿರುವ ಖಲಿಸ್ತಾನ್ ಪರ ಪೋಸ್ಟರ್ ಕೆನಡಾದಲ್ಲಿ ಹೊರಬಿದ್ದಿದ್ದು, ಖಲಿಸ್ತಾನಿ ಹರ್ದೀಪ್ ನಿಜ್ಜಾರ್ ಹತ್ಯೆಗೆ ಭಾರತವೇ ಕಾರಣ ಎಂದು ಹೇಳಿಕೊಂಡಿತ್ತು. ಭಾರತದಲ್ಲಿ ಮೋಸ್ಟ್ ವಾಂಟೆಡ್ ಭಯೋತ್ಪಾದಕರಲ್ಲಿ ಒಬ್ಬನಾಗಿದ್ದ ಖಲಿಸ್ತಾನ್ ಟೈಗರ್ ಫೋರ್ಸ್ ಮುಖ್ಯಸ್ಥ ನಿಜ್ಜರ್ ನನ್ನು ಜೂನ್ 18 ರಂದು ಕೆನಡಾದ ಸರ್ರೆಯಲ್ಲಿರುವ ಗುರುನಾನಕ್ ಗುರುದ್ವಾರ ಸಾಹಿಬ್ನ ಪಾರ್ಕಿಂಗ್ ಸ್ಥಳದಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು. ಖಲಿಸ್ತಾನಿಗಳು ಹತ್ಯೆಗೆ ಭಾರತವನ್ನು ದೂಷಿಸಲು ಪ್ರಾರಂಭಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Goa ;ಬೀಚ್ ನಲ್ಲಿ ಸಿಡಿಲಿನ ಆಘಾತಕ್ಕೆ ಕೇರಳದ ಪ್ರವಾಸಿಗ ಮೃತ್ಯು
AAP Leader ಬಿಭವ್ ಕುಮಾರ್ ನನ್ನ ಕೆನ್ನೆಗೆ ಹೊಡೆದು, ಎದೆಗೆ ಒದ್ದರು..; ಸ್ವಾತಿ ಮಲಿವಾಲ್
PM Modi ಪತ್ರಿಕಾಗೋಷ್ಠಿ ಯಾಕೆ ನಡೆಸುವುದಿಲ್ಲ? ಉತ್ತರಿಸಿದ ಪ್ರಧಾನಿ ಮೋದಿ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್
Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್
Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ
Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!