ಆರ್ದ್ರಾ ಅಬ್ಬರ; ಕರಾವಳಿಯಲ್ಲಿ ಇಬ್ಬರ ಸಾವು, ಕೃತಕ ನೆರೆ ಸಂಕಷ್ಟ


Team Udayavani, Jul 4, 2023, 7:00 AM IST

ಆರ್ದ್ರಾ ಅಬ್ಬರ; ಕರಾವಳಿಯಲ್ಲಿ ಇಬ್ಬರ ಸಾವು, ಕೃತಕ ನೆರೆ ಸಂಕಷ್ಟ

ಮಂಗಳೂರು/ಉಡುಪಿ: ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರ ಗೋಡು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಆರ್ದ್ರಾ ನಕ್ಷತ್ರದ ಕೊನೆಯ ಪಾದದಲ್ಲಿ ಒಂದೆರಡು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಸೋಮ ವಾರ ಬಿರುಸುಗೊಂಡಿತ್ತು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಕಡೆಗಳಲ್ಲಿ ಹಾನಿ ಉಂಟಾಗಿದೆ.

ಶಿರ್ವದ ಬಳಿ ಆವರಣಗೋಡೆ ಇಲ್ಲದ ಬಾವಿಯ ಮಣ್ಣು ಕುಸಿದು ಬಾವಿಗೆ ಬಿದ್ದು ಗುಲಾಬಿ (43) ಮೃತಪಟ್ಟಿದ್ದಾರೆ. ಕುಂಬಳೆ ಸಮೀಪದ ಅಂಗಡಿ ಮೊಗರಿನಲ್ಲಿ ಗಾಳಿ ಮಳೆಯಿಂದಾಗಿ ಮರ ಉರುಳಿ ಆಯಿಷತ್‌ ಮಿನ್ಹಾ (11) ಸಾವನ್ನಪ್ಪಿದ್ದಾಳೆ.

ಪಂಪ್‌ವೆಲ್‌, ಕೊಟ್ಟಾರಚೌಕಿ ಜಲಾವೃತ
ಮಳೆಯಿಂದಾಗಿ ಮಂಗಳೂರು ನಗರದಲ್ಲಿ ಅವಾಂತರಗಳ ಸರಮಾಲೆಯೇ ಉಂಟಾಗಿದ್ದು, ಪಂಪ್‌ವೆಲ್‌ನಲ್ಲಿ ಕೃತಕ ನೆರೆ ಸೃಷ್ಟಿಯಾಗಿ ಹಲವು ತಾಸುಗಳ ಕಾಲ ಸಂಚಾರಕ್ಕೆ ತೊಡಕು ಉಂಟಾಯಿತು. ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪಂಪ್‌ವೆಲ್‌ ಪ್ಲೈಓವರ್‌ ಕೆಳಭಾಗದಲ್ಲಿ ಸೋಮವಾರ ಸಂಜೆ ನೆರೆ ನೀರು ತುಂಬಿ ಭಾರೀ ಸಮಸ್ಯೆಯಾಯಿತು. ಪ್ಲೈಓವರ್‌ ಕೆಳಗೆ ಸುಮಾರು 3 ಅಡಿಗಳಷ್ಟು ನೀರು ನಿಂತು ಆತಂಕ ಸೃಷ್ಟಿಸಿತು. ಸುಮಾರು ಒಂದು ತಾಸು ನಿರಂತರ ಸುರಿದ ಮಳೆ ಯಿಂದಾಗಿ ಹತ್ತಿರದ ರಾಜಕಾಲುವೆ ಉಕ್ಕಿ ಹರಿದು ಸಮಸ್ಯೆಗೆ ಕಾರಣವಾಯಿತು. ಪ್ಲೈಓವರ್‌ನ ಎರಡೂ ಭಾಗದ ಸರ್ವೀಸ್‌ ರಸ್ತೆಗಳು ಹಾಗೂ ಅಕ್ಕಪಕ್ಕದ ಪ್ರದೇಶವೂ ಜಲಾ ವೃತಗೊಂಡಿತು. ನಾಲ್ಕೂ ಭಾಗದ ವಾಹನಗಳು ಕಿ.ಮೀ.ಗಟ್ಟಲೆ ಸಾಲುಗಟ್ಟಿ ನಿಲ್ಲಬೇಕಾಯಿತು.

ಉಡುಪಿ ಜಿಲ್ಲೆಯಲ್ಲಿಯೂ ಹಲವು ಕಡೆ ಮನೆಗಳ ಮೇಲೆ ಮರ ಉರುಳಿದ, ಆವರಣ ಗೋಡೆ ಕುಸಿದ, ನೆರೆಯಿಂದ ಸಂಕಷ್ಟ ಉಂಟಾದ ಘಟನೆಗಳು ನಡೆದಿವೆ.

ಭಾರೀ ಮಳೆ ಎಚ್ಚರಿಕೆ
ಕರಾವಳಿಯಲ್ಲಿ ಜು. 8ರ ವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಆರೆಂಜ್‌ ಅಲರ್ಟ್‌ ಘೋಷಿಸಿದೆ. ಈಗಾಗಲೇ ಉಭಯ ಜಿಲ್ಲೆಗಳಲ್ಲಿ ಕಾಳಜಿ ಕೇಂದ್ರ ಗಳನ್ನು ಸನ್ನದ್ಧಗೊಳಿಸಲಾಗಿದೆ. ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದಲ್ಲಿ ಎಸ್‌ಡಿಆರ್‌ಎಫ್‌ನ 65, ಎನ್‌ಡಿಆರ್‌ಎಫ್‌ನ 25 ಮಂದಿಯ ತಂಡ ಸನ್ನದ್ಧವಾಗಿದೆ. 26 ಬೋಟ್‌ ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ.

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

ಲಕ್ಷದ್ವೀಪ ಪ್ರವಾಸೋದ್ಯಮದ ಅವಕಾಶ ಬಳಸಿಕೊಳ್ಳುವಲ್ಲಿ ಮಂಗಳೂರು ಹಿನ್ನಡೆ

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Mangaluru: ನಾಪತ್ತೆಯಾಗಿದ್ದ ಮಹಿಳೆ ವಿಮಾನ ನಿಲ್ದಾಣದಲ್ಲಿ ಪ್ರತ್ಯಕ್ಷ!

Theft Case: ಮನೆಯಿಂದ ಚಿನ್ನಾಭರಣ ಕಳವು

Theft Case: ಮನೆಯಿಂದ ಚಿನ್ನಾಭರಣ ಕಳವು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

Ullal; ಸ್ಕೂಟರ್ ಗಳ ಢಿಕ್ಕಿ; ಸಹಸವಾರ ಮೃತ್ಯು

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

“ಫೆಡೆಕ್ಸ್‌ ಪಾರ್ಸೆಲ್‌’ ಹೆಸರಲ್ಲಿ ಸೈಬರ್‌ ವಂಚಕರಿಂದ “ಗಾಳ’

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.