Panaji: ನಿಸರ್ಗದ ಸೌಂದರ್ಯದ ನಡುವೆ ಮೈದುಂಬಿ ಹರಿಯುತ್ತಿದೆ ಜಲಪಾತಗಳು

ಪ್ರವಾಸಿಗರ ಆಕರ್ಷಣೀಯ ಕೇಂದ್ರವಾಗುತ್ತಿದೆ ಜಲಪಾತಗಳು

Team Udayavani, Jul 5, 2023, 2:57 PM IST

Panaji: ನಿಸರ್ಗ ಸೌಂದರ್ಯದ ನಡುವೆ ಮೈದುಂಬಿ ಹರಿಯುತ್ತಿದೆ ಜಲಪಾತಗಳು

ಪಣಜಿ: ಗೋವಾದ ಸತ್ತರಿ ತಾಲೂಕು ಭಾಗದಲ್ಲಿರುವ ಜಲಪಾತಗಳು ರಮಣೀಯ ಸೌಂದರ್ಯದಿಂದ ಕೂಡಿದ್ದು, ನಿಸರ್ಗದ ಸೌಂದರ್ಯವನ್ನು ಆನಂದಿಸಲು ಈ ಭಾಗವು ಪ್ರಮುಖ ಪ್ರವಾಸಿ ತಾಣವಾಗುತ್ತಿದೆ.  ನದಿಗಳು ಮತ್ತು ಸರೋವರಗಳು ಪ್ರವಾಸಿಗರನ್ನು ಆಕರ್ಷಿಸುತ್ತವೆ ಮತ್ತು ಗೋವಾ ಮತ್ತು ಗೋವಾದ ಹೊರಗಿನ ಪ್ರವಾಸಿಗರು ಮಳೆಗಾಲದಲ್ಲಿ ಜಲಪಾತಗಳನ್ನು ಆನಂದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಇದೀಗ ಗೋವಾ ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಪರ್ವತಗಳ ತುದಿಯಿಂದ ಜಲಪಾತಗಳು ಹರಿಯಲು ಪ್ರಾರಂಭಿಸಿವೆ. ಸತ್ತರಿಯಲ್ಲಿರುವ ಮಾನ್ಸೂನ್ ಜಲಪಾತಗಳು ಪ್ರವಾಸಿಗರನ್ನು ಆಕರ್ಷಿಸಲು ಮೈದುಂಬಿಕೊಳ್ಳುತ್ತಿದೆ.

ಸತ್ತರಿಯಲ್ಲಿ ಪ್ರತಿ ವರ್ಷ, ಪ್ರವಾಸಿಗರು ಮಳೆಗಾಲದಲ್ಲಿ ಶನಿವಾರ, ಭಾನುವಾರ ಮತ್ತು ರಜಾದಿನಗಳಲ್ಲಿ ಜಲಪಾತಗಳಿಗೆ ಭೇಟಿ ನೀಡುತ್ತಾರೆ. ಅದೇ ಸಮಯದಲ್ಲಿ, ಪ್ರವಾಸೋದ್ಯಮ ಇಲಾಖೆ ಮತ್ತು ಇತರ ಸಂಸ್ಥೆಗಳು ಆಯೋಜಿಸಿರುವ ಜಲಪಾತಕ್ಕೆ ಚಾರಣಕ್ಕಾಗಿ ರಜಾದಿನಗಳಲ್ಲಿ ಪ್ರವಾಸಿಗರ ಗರ್ದಿಯನ್ನು ಕಾಣಬಹುದಾಗಿದೆ. ಆಷಾಢ ಏಕಾದಶಿ ಮತ್ತು ಬಕ್ರಿ ಈದ್ ಸಾರ್ವಜನಿಕ ರಜಾದಿನಗಳಾಗಿದ್ದವು. ಹಾಗಾಗಿ ಈ ಭಾಗದಲ್ಲಿರುವ ಮಾನ್ಸೂನ್ ಜಲಪಾತಕ್ಕೆ ಪ್ರವಾಸಿಗರ ದಂಡೇ ಹರಿದು ಬಂದಿತ್ತು. ಮಳೆಗಾಲದ ಸಂದರ್ಭದಲ್ಲಂತೂ ಶನಿವಾರ ಮತ್ತು ಭಾನುವಾರದಂದು  ಸತ್ತರಿ ತಾಲೂಕಿನಲ್ಲಿರುವ ಜಲಪಾತಗಳು ಹೌಸ್ ಫುಲ್ ಆಗಿರುತ್ತದೆ. ಆದರೆ ಇಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿದ್ದು ಸ್ಥಳೀಯ ಪಂಚಾಯಿತಿ ಪ್ರವಾಸಿಗರಿಗೆ ಅಗತ್ಯ ಸೌಲಭ್ಯ ಕಲ್ಪಿಸಿದರೆ ಇನ್ನೂ ಹೆಚ್ಚಿನ ಪ್ರವಾಸಿಗರು ಇಲ್ಲಿನ ಸೌಂದರ್ಯವನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ಪಾಳಿನಲ್ಲಿರುವ ಹೊಸ ರಸ್ತೆಯು ಪ್ರವಾಸಿಗರಿಗೆ ಪಾಳಿ ಮೂಲಕ ಚೋರ್ಲಾಘಾಟ್‍ಗೆ ಜಾಂಬಳಿ ತೆಂಬಾ ಮಾರ್ಗವಾಗಿ ಚೋರ್ಲಾ ತಲುಪಲು ಅನುಕೂಲಕರವಾಗಿದೆ. ಮಳೆಗಾಲದಲ್ಲಿ ಪ್ರವಾಸಿಗರು ಚೋರ್ಲಾ ಮತ್ತು ಸುರ್ಲಾದಂತಹ ಸುಂದರ ಸ್ಥಳಗಳಿಗೆ ಆಕರ್ಷಿತರಾಗುತ್ತಾರೆ. ಈ ರಸ್ತೆ ಪೂರ್ಣಗೊಂಡ ನಂತರ ಫೋಂಡಾ, ಗುಳೇಲಿ ಮತ್ತು ವಾಲ್ಪೈ ನಾಗರಿಕರು ಬೆಳಗಾವಿಗೆ ಹೋಗಲು ಈ ರಸ್ತೆಯನ್ನು ಬಳಸುತ್ತಿದ್ದಾರೆ. ಈ ಮಾರ್ಗದಲ್ಲಿ ಸಲೇಲಿ, ಜರ್ಮೆ, ನಾನೇಲಿ, ಬ್ರಹ್ಮಕರ್ಮಲಿ, ಶೆಲಪ್-ಬುದ್ರುಕ್, ಚೋರ್ಲಾಘಾಟ್, ಪಾಳಿ, ಹಿವ್ರೆ, ಶೆಲಾಪ್, ಸತ್ರೆ, ಕುಮ್ತಾಲ್, ಕಾರಂಜೋಲ್, ತುಲಾಸ್ ಕೊಂಡ್, ಮೋಳೆ, ರೈವ್, ಚರವಾಣೆ ಮತ್ತು ಸತ್ತಾರಿಯ ಅನೇಕ ಭಾಗಗಳಲ್ಲಿ ಹರಿಯುವ ಸಣ್ಣ ಮತ್ತು ದೊಡ್ಡ ಜಲಪಾತಗಳು ಮಳೆಗಾಲದ ಈ ಭಾಗದ ಪ್ರಮುಖ ಆಕರ್ಷಣೆಯಾಗಿದೆ. ಸತ್ತರಿಯಲ್ಲಿ ಜಲಪಾತ ವರ್ಷಪೂರ್ತಿ ಹರಿಯುತ್ತಿರುತ್ತದೆ. ಸತ್ತರಿ ಜಲಪಾತಗಳು ಮಹದಾಯಿ ಅಭಯಾರಣ್ಯದ ಅಡಿಯಲ್ಲಿ ಬರುತ್ತವೆ ಮತ್ತು ಅರಣ್ಯ ಅಧಿಕಾರಿಗಳು ಜಲಪಾತಗಳಿಗೆ ಪ್ರವೇಶ ಶುಲ್ಕವನ್ನು ವಿಧಿಸುತ್ತಾರೆ.

ಪಾಳಿ-ಸತ್ತರಿಯ ಪಂಚಾಯತ ಸದಸ್ಯ ಸುರೇಶ್ ಆಯಕರ್ ಪ್ರತಿಕ್ರಿಯೆ ನೀಡಿ- ಮಳೆಗಾಲದಲ್ಲಿ ಜಲಪಾತಕ್ಕೆ ಬರುವ ಪ್ರವಾಸಿಗರಿಂದ ಸ್ಥಳೀಯ ಪಂಚಾಯಿತಿ ಕಡಿಮೆ ಶುಲ್ಕ ವಿಧಿಸಬೇಕು. ಜಲಪಾತದ ಬಳಿ ಬಟ್ಟೆ ಬದಲಿಸಲು ಅಗತ್ಯ ಸೌಲಭ್ಯ ಕಲ್ಪಿಸಬೇಕು. ಪಂಚಾಯತ್‍ಗಳು ಕೆಲವು ಹಣಕಾಸಿನ ನೆರವನ್ನು ಶುಲ್ಕದ ಮೂಲಕ ಪಡೆಯಬಹುದು. ಪಾಳಿ-ಸತ್ತರಿಯಲ್ಲಿರುವ ಶಿವಲಿಂಗ ಮಾನ್ಸೂನ್ ಜಲಪಾತ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ವರ್ಷ ಮುಂಗಾರು ಹಂಗಾಮು ತಡವಾಗಿ ಆರಂಭವಾಗಿರುವುದು ಪ್ರವಾಸಿಗರ ಗಮನದ ಮೇಲೆ ಪರಿಣಾಮ ಬೀರಿದೆ. ಆದರೆ, ಈಗ ಮುಂಗಾರು ಮಳೆ ಆರಂಭವಾಗಿರುವುದರಿಂದ ಜಲಪಾತಗಳು ಮೈದುಂಬಿಕೊಳ್ಳುತ್ತಿದೆ. ಹೀಗಾಗಿ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದೆ.

ಇದನ್ನೂ ಓದಿ: Odisha: ಹುಟ್ಟಿದ ಎರಡನೇ ಮಗುವೂ ಹೆಣ್ಣಾಯಿತೆಂದು 8 ತಿಂಗಳ ಮಗುವನ್ನು 800ರೂ. ಗೆ ಮಾರಿದ ತಾಯಿ

ಟಾಪ್ ನ್ಯೂಸ್

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

17

Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

Swindon Borough ಕೌನ್ಸಿಲ್‍ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ

The Election Commission banned the BJP candidate from campaigning for 24 hours

W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Bangla MP who came to Kolkata goes missing

ಕೋಲ್ಕತಾಗೆ ಬಂದ ಬಾಂಗ್ಲಾ ಸಂಸದ ನಾಪತ್ತೆ

Swati Maliwal case: Data destruction on Bibhav’s phone

Swati Maliwal case: ಬಿಭವ್‌ ಫೋನ್‌ನಲ್ಲಿ ದತ್ತಾಂಶ ನಾಶ

Former AAP leader Jagbir Singh joins BJP

New Delhi; ಆಪ್‌ ಮಾಜಿ ನಾಯಕ ಜಗ್ಬೀರ್‌ ಸಿಂಗ್‌ ಬಿಜೆಪಿ ಸೇರ್ಪಡೆ

ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.