Gadkari; ಪೆಟ್ರೋಲ್‌ ಲೀಟರ್‌ ಗೆ 15 ರೂ.ಗೆ ಲಭ್ಯವಾಗುತ್ತೆ…ಆದರೆ; ಸಚಿವ ಗಡ್ಕರಿ ವಾದವೇನು?


Team Udayavani, Jul 5, 2023, 5:00 PM IST

ಪೆಟ್ರೋಲ್‌ ಲೀಟರ್‌ ಗೆ 15 ರೂ.ಗೆ ಲಭ್ಯವಾಗುತ್ತೆ…ಆದರೆ; ಸಚಿವನಿತಿನ್‌ ಗಡ್ಕರಿ ವಾದವೇನು?

ಜೈಪುರ: ಒಂದು ವೇಳೆ ಜನರು ಸರಾಸರಿ ಶೇ.60ರಷ್ಟು ಎಥೆನಾಲ್‌ ಮತ್ತು ಶೇ.40ರಷ್ಟು ವಿದ್ಯುತ್‌ ಬಳಕೆಯ ವಾಹನಗಳನ್ನು ಬಳಸಿದಲ್ಲಿ, ಮುಂಬರುವ ದಿನಗಳಲ್ಲಿ ಪೆಟ್ರೋಲ್‌ ಪ್ರತಿ ಲೀಟರ್‌ ಬೆಲೆ 15 ರೂಪಾಯಿಯಾಗಲಿದ್ದು, ಇದರಿಂದ ಜನರಿಗೆ ಲಾಭವಾಗುವ ದಿನ ದೂರವಿಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಬುಧವಾರ (ಜು.05) ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಯಡಮೊಗೆ; ಕಾಲು ಸಂಕದಿಂದ ಆಯತಪ್ಪಿ ನದಿಗೆ ಬಿದ್ದು ವೃದ್ಧ ಮೃತ್ಯು

ರಾಜಸ್ಥಾನದ ಪ್ರತಾಪ್‌ ಗಢದಲ್ಲಿ ಸಭೆಯೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ದೇಶದಲ್ಲಿ ಎಥೆನಾಲ್‌ ಉತ್ಪಾದನಾ ವೇಗವನ್ನು ಹೆಚ್ಚಿಸಲಾಗುತ್ತಿದೆ. ಹೀಗಾಗಿ ಒಂದು ವೇಳೆ ಜನರು ಶೇ.60ರಷ್ಟು ಎಥೆನಾಲ್‌ ಚಾಲಿತ ಹಾಗೂ ಶೇ.40ರಷ್ಟು ವಿದ್ಯತ್‌ ಚಾಲಿತ ವಾಹನಗಳನ್ನು ಬಳಸಿದಲ್ಲಿ ನಂತರ ಪೆಟ್ರೋಲ್‌ ಪ್ರತಿ ಲೀಟರ್‌ ಗೆ 15 ರೂಪಾಯಿಗೆ ಲಭ್ಯವಾಗಲಿದೆ. ಇದರಿಂದ ಜನರಿಗೂ ಅನುಕೂಲವಾಗಲಿದೆ ಎಂದರು.

ಎಥೆನಾಲ್‌, ವಿದ್ಯುತ್‌ ಚಾಲಿತ ವಾಹನಗಳನ್ನು ಹೆಚ್ಚಾಗಿ ಬಳಕೆ ಮಾಡುವುದರಿಂದ ಮಾಲಿನ್ಯ ಮತ್ತು ಆಮದನ್ನು ಕಡಿಮೆ ಮಾಡಬಹುದಾಗಿದೆ. ರೈತರು ಎಥೆನಾಲ್‌ ಉತ್ಪಾದನೆಯತ್ತ ಹೆಚ್ಚು ಆಸಕ್ತಿ ಹೊಂದಿದ್ದು, ಇದರಿಂದ ರೈತರ ಆದಾಯ ಕೂಡಾ ದ್ವಿಗುಣಗೊಳ್ಳಲಿದೆ. ದೇಶಾದ್ಯಂತ ರೈತರನ್ನು ಇಂಧನ ಪೂರೈಕೆದಾರರನ್ನಾಗಿ ಮಾಡಬೇಕೆಂಬುದು ಕೇಂದ್ರ ಸರ್ಕಾರದ ಆಶಯವಾಗಿದೆ ಎಂದು ಗಡ್ಕರಿ ಹೇಳಿದರು.

ರೈತರು ಉತ್ಪಾದಿಸಿದ ಎಥೆನಾಲ್‌ ಚಾಲಿತ ಹೊಸ ಕಾರುಗಳನ್ನು ಬಿಡುಗಡೆಗೊಳಿಸುವ ಯೋಜನೆ ಹೊಂದಿರುವುದಾಗಿ ತಿಳಿಸಿರುವ ಸಚಿವ ಗಡ್ಕರಿ ಅವರು, ಈ ವಾಹನಗಳು ಶೇ.60ರಷ್ಟು ಎಥೆನಾಲ್‌ ಮತ್ತು ಶೇ.40ರಷ್ಟು ವಿದ್ಯುತ್‌ ನಿಂದ ಸಂಚಾರ ನಡೆಸಲಿದೆ. ಈ ನಿಟ್ಟಿನಲ್ಲಿ ಪೆಟ್ರೋಲ್‌ ಬೆಲೆ ಗಣನೀಯವಾಗಿ ಇಳಿಕೆಯಾಗಲಿದೆ ಎಂದು ತಿಳಿಸಿದರು.

ಮುಂಬರುವ ದಿನಗಳಲ್ಲಿ ಬಜಾಜ್‌, ಟಿವಿಎಸ್‌, ಹೀರೋ ಕಂಪನಿಗಳು ಶೇ.100ರಷ್ಟು ಎಥೆನಾಲ್‌ ಚಾಲಿತ ಸ್ಕೂಟರ್‌ ಗಳನ್ನು ತಯಾರಿಸಲಿವೆ ಎಂದು ಸಚಿವ ನಿತಿನ್‌ ಗಡ್ಕರಿ ಈ ಸಂದರ್ಭದಲ್ಲಿ ಮಾಹಿತಿ ನೀಡಿದ್ದಾರೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ  ಮುಂಚೂಣಿಯಲ್ಲಿದ್ದಾರೆ!

Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ

sensex

Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್‌

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.