Karnataka: ಕನಿಷ್ಠ ವೇತನ ಸಿಗದೆ ಬಿಸಿಯೂಟ ಸಿಬಂದಿ ಸಂಕಷ್ಟ!
1.21 ಲಕ್ಷ ಬಿಸಿಯೂಟ ಸಿಬಂದಿ ಬದುಕು ಬೀದಿಗೆ- 6 ಸಾವಿರ ರೂ.ಗೆ ಹೆಚ್ಚಿಸುವುದಾಗಿ ಹೇಳಿದ್ದ ಕಾಂಗ್ರೆಸ್
Team Udayavani, Jul 10, 2023, 7:07 AM IST
ಬೆಂಗಳೂರು: ಸರಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಬಿಸಿಯೂಟ ಸಿದ್ಧಪಡಿಸುವ ಅಕ್ಷರ ದಾಸೋಹ ಸಿಬಂದಿ ಕನಿಷ್ಠ ವೇತನ ಜಾರಿಯಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ರಾಜ್ಯದ ಸರಕಾರಿ ಶಾಲೆಗಳಲ್ಲಿ 1.21 ಲಕ್ಷ ಬಿಸಿಯೂಟ ತಯಾರಕ ಸಿಬಂದಿ ಇದ್ದಾರೆ. ಸರಕಾರಿ ನೌಕರರೆಂದು ಪರಿಗಣಿಸಿದರೂ ಪ್ರಸ್ತುತ ನೀಡಲಾಗುತ್ತಿರುವ 3,600ರೂ. ಮಾಸಿಕ ವೇತನದಲ್ಲಿ ಜೀವನ ನಿರ್ವಹಣೆ ಸಾಧ್ಯವಾಗದೆ ಈ ಕುಟುಂಬಗಳು ಬೀದಿಗೆ ಬಂದಿವೆ. ಅಧಿಕಾರಕ್ಕೆ ಬಂದ ಕೂಡಲೇ ವೇತನವನ್ನು 6 ಸಾವಿರ ರೂ.ಗಳಿಗೆ ಹೆಚ್ಚಿಸುವುದಾಗಿ ಗ್ಯಾರಂಟಿ ಕೊಟ್ಟಿದ್ದ ಕಾಂಗ್ರೆಸ್ ಸರಕಾರವು ಮೌನಕ್ಕೆ ಶರಣಾಗಿದೆ.
15 ಸಾವಿರ ರೂ. ಕನಿಷ್ಠ ವೇತನ
ಸರಕಾರಿ ಶಾಲೆಗಳಲ್ಲಿ 25 ಮಕ್ಕಳಿಗೆ ಒಬ್ಬರು ಮುಖ್ಯ ಅಡುಗೆ ಸಿಬಂದಿ ಇದ್ದು, ಮಾಸಿಕ ಕೇವಲ 3,700 ರೂ. ನೀಡಲಾಗುತ್ತಿದೆ. 25ಕ್ಕಿಂತ ಅಧಿಕ ಮಕ್ಕಳಿರುವ ಶಾಲೆಗಳಲ್ಲಿ ಮಕ್ಕಳ ಪ್ರಮಾಣಕ್ಕೆ ಅನುಗುಣವಾಗಿ ಕೆಲಸ ಮಾಡುವ ಅಡುಗೆ ಸಹಾಯಕರಿಗೆ 3,600 ರೂ. ಮಾಸಿಕ ವೇತನವಿದೆ. ನಿಯಮ ಪ್ರಕಾರ ರಾಜ್ಯ ಸರಕಾರದ ಕನಿಷ್ಠ ವೇತನ 15 ಸಾವಿರ ರೂ. ಇದೆ. ಇಂಡಿಯನ್ ಲೇಬರ್ ಆರ್ಗನೈಸೇಶನ್ (ಐಎಲ್ಒ) ಪ್ರಕಾರ ಒಂದು ಕುಟುಂಬದ ಜೀವನಕ್ಕೆ ತಿಂಗಳಿಗೆ ತಗಲುವ ಖರ್ಚನ್ನು ಕನಿಷ್ಠ ವೇತನ ಎಂದು ಪರಿಗಣಿಸಲಾಗುತ್ತದೆ. ಸದ್ಯ ಐಎಲ್ಒ 31,500 ರೂ. ಇದೆ.
ದುರ್ಘಟನೆಗೆ ಪರಿಹಾರ ಸಿಗುತ್ತಿಲ್ಲ
ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್, ಕುಕ್ಕರ್ ಸ್ಫೋಟ, ಕೈ-ಕಾಲಿಗೆ ಗಾಯದಂತಹ ದುರ್ಘಟನೆ ಸಂಭವಿಸಿದರೆ ಸಂತ್ರ ಸ್ತ ರಿಗೆ ಸರಕಾರವು 30 ಸಾವಿರ ರೂ. ಪರಿಹಾರ ಮೀಸಲಿಟ್ಟಿದೆ. ಆದರೆ ಶೇ. 95ರಷ್ಟು ಪ್ರಕರಣಗಳಲ್ಲಿ ಇದು ಸಂತ್ರಸ್ತರ ಕೈ ಸೇರುವುದೇ ಇಲ್ಲ. ಶಾಲಾ ಮುಖ್ಯೋಪಾಧ್ಯಾಯರು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದರೆ ಆ ದಾಖಲೆಯ ಆಧಾರದ ಮೇಲೆ ಪರಿಹಾರ ಸಿಗುತ್ತದೆ. ಆದರೆ ಎಫ್ಐಆರ್ ದಾಖಲಾದರೆ ಉಂಟಾಗುವ ಕಿರಿಕಿರಿಯ ಭಯದಿಂದಾಗಿ ಎಫ್ಐಆರ್ ದಾಖಲಿಸುತ್ತಿಲ್ಲ.
ಬಿಸಿಯೂಟ ಸಿಬಂದಿಯ ಬೇಡಿಕೆಗಳೇನು?
– ವೇತನ 6 ಸಾವಿರ ರೂ.ಗಳಿಗೆ ಹೆಚ್ಚಿಸಬೇಕು
– ನಿವೃತ್ತಿ ಹೊಂದುವವರಿಗೆ ಪರಿಹಾರ ರೂಪದಲ್ಲಿ 1 ಲಕ್ಷ ರೂ. ನೀಡಬೇಕು
– ದುರ್ಘಟನೆ ಸಂಭವಿಸಿದರೆ ಎಫ್ಐಆರ್ ದಾಖಲೆ ಇಲ್ಲದೆ ಅನುದಾನ ಕೊಡಬೇಕು
– ಆರೋಗ್ಯ ವಿಮೆ, ಮರಣ ಪರಿಹಾರ, ಗಾಯಗಳಾದರೆ ಆಸ್ಪತ್ರೆ ಖರ್ಚು ವೆಚ್ಚ ಸರಕಾರ ಭರಿಸಬೇಕು
ಗ್ಯಾರಂಟಿ ಭರವಸೆ ಸುಳ್ಳು
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಕೂಡಲೇ ಬಿಸಿಯೂಟ ತಯಾರಕರ ವೇತನವನ್ನು 6 ಸಾವಿರ ರೂ.ಗಳಿಗೆ ಹೆಚ್ಚಿಸುವುದು 6ನೇ ಗ್ಯಾರಂಟಿಯಾಗಿದೆ ಎಂದು ಚುನಾವಣೆಗೆ ಮುನ್ನ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಭರವಸೆ ಕೊಟ್ಟಿದ್ದರು. ಈಗ ಈ ಭರವಸೆ ಸುಳ್ಳಾಗಿದೆ ಎಂದು ಬಿಸಿಯೂಟ ತಯಾರಕ ಸಿಬಂದಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಚುನಾವಣೆಯ ಅನಂತರ ಕಾಂಗ್ರೆಸ್ ಸರಕಾರ ಬಿಸಿಯೂಟ ತಯಾರಕರನ್ನು ಅವಗಣಿಸಿದೆ. ದುಡಿಯುವ ಮಹಿಳೆಯರನ್ನು ಸುಳ್ಳು ಹೇಳಿ ವಂಚಿಸಿದರೆ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಪಾಠ ಕಲಿಸಬೇಕಾಗುತ್ತದೆ.
– ಅವರಗೆರೆ ಚಂದ್ರು, ಪ್ರಧಾನ ಕಾರ್ಯದರ್ಶಿ, ಬಿಸಿಯೂಟ ತಯಾರಕರ ಒಕ್ಕೂ ಟದ ರಾಜ್ಯ ಸಮಿತಿ
ಅವಿನಾಶ ಮೂಡಂಬಿಕಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಕೆರೆ ಅಭಿವೃದ್ದಿ ಮಾಡಿದರೆ ಮಾತ್ರ ಜಲ ಸಂರಕ್ಷಣೆ ಸಾಧ್ಯ… :ಶ್ರೀನಿವಾಸ ಹೆಬ್ಬಾರ್
Shivamogga: ಪೊಲೀಸರ ಮೇಲೆ ಹಲ್ಲೆ ಯತ್ನ… ರೌಡಿ ಶೀಟರ್ ಶೋಹಿಬ್ ಕಾಲಿಗೆ ಗುಂಡೇಟು
ಆನೆ ಕಂಡು ಚರಂಡಿಗೆ ಇಳಿದ ಬೊಲೆರೋ… ರಸ್ತೆ ಕಾಣದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಟಿಟಿ
Legislative Council Elections: ಬಿಜೆಪಿ-ಜೆಡಿಎಸ್ ಮೈತ್ರಿ 5:1 ಅಲ್ಲ, 4:2
Prajwal Revanna ವಿಮಾನ ಟಿಕೆಟ್ ರದ್ದು; ಸಂಸದನ ನಡೆ ಕುತೂಹಲ, ಸಿಗದ ಸುಳಿವು
MUST WATCH
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?
ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ ಮಾಡಿದ ಡಿಕೆಶಿ;
ಹೊಸ ಸೇರ್ಪಡೆ
CM ಹುದ್ದೆಯಿಂದ ಕೇಜ್ರಿವಾಲ್ ವಜಾಗೊಳಿಸಿ: ಪಿಐಎಲ್ ವಜಾಗೊಳಿಸಿದ ಸುಪ್ರೀಂಕೋರ್ಟ್
Video: ಮತದಾನ ಮಾಡಲು ಸರತಿ ಸಾಲಿನಲ್ಲಿ ನಿಂತಿದ್ದ ಮತದಾರನಿಗೆ ಶಾಸಕನಿಂದ ಕಪಾಳಮೋಕ್ಷ
Marathi TV actor: ವೇದಿಕೆಯಲ್ಲೇ ಕುಸಿದು ಬಿದ್ದು ಮೃತಪಟ್ಟ ಖ್ಯಾತ ಹಿರಿಯ ನಟ
Smart Home Audio; ಸೌಂಡ್ ಬಾರ್ ಕ್ಷೇತ್ರಕ್ಕೆ ಕಾಲಿಟ್ಟ BOULT: ಎರಡು ಸೌಂಡ್ ಬಾರ್ ಬಿಡುಗಡೆ
Ujjivan Small Finance Bank; ಉಜ್ಜೀವನ್ ಎಂಡಿ, ಸಿಇಒ ಆಗಿ ಸಂಜೀವ್ ನೌಟಿಯಾಲ್ ನೇಮಕ