G20 summit: ಜಗದ್ವಿಖ್ಯಾತ ಹಂಪಿಯ ಸ್ಮಾರಕಗಳು ಝಗಮಗ


Team Udayavani, Jul 9, 2023, 9:23 PM IST

1-sadas

ಹೊಸಪೇಟೆ: ಜಗದ್ವಿಖ್ಯಾತ ಹಂಪಿ ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ವಿದ್ಯುದೀಪಾಲಂಕಾರದಿಂದ ಕಂಗೊಳಿಸುತ್ತಿದೆ. ಹಂಪಿಯ ಸ್ಮಾರಕಗಳಿಗೆ ವಿದ್ಯುದೀಪಾಲಂಕಾರ ಮಾಡಲಾಗಿದೆ.

ಜುಲೈ 9 ರಿಂದ 16 ರವರೆಗೆ ಜಿ-20 ಶೃಂಗಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹಂಪಿಯ ಸ್ಮಾರಕಗಳಿಗೆ ವಿದ್ಯುದೀಪಾಲಂಕಾರ ಮಾಡಲಾಗಿದೆ. ಹಂಪಿಯ ವಿಜಯ ವಿಠ್ಠಲ ದೇವಾಲಯ, ಸಾಸಿವೆ ಕಾಳು ಗಣಪ ಮಂಟಪ, ಶ್ರೀವಿರೂಪಾಕ್ಷೇಶ್ವರ ದೇವಾಲಯ, ಎದುರು ಬಸವಣ್ಣ ಮಂಟಪ, ಮಾತಂಗ ಪರ್ವತ ಸೇರಿದಂತೆ ಹಂಪಿಯ ಸ್ಮಾರಕಗಳಿಗೆ ವಿದ್ಯುದೀಪಾಲಂಕಾರ ಮಾಡಲಾಗಿದೆ.

ಹಂಪಿ ಬೈ ನೈಟ್ ಯೋಜನೆಗೆ ಈಗಾಗಲೇ ಹಂಪಿ ಅಭಿವೃದ್ಧಿ ಪ್ರಾಧಿಕಾರ ಸೈ ಎಂದಿದೆ. ಹಾಗಾಗಿ ಹಂಪಿಯ ಪ್ರಮುಖ ಸ್ಮಾರಕಗಳಿಗೆ ವಿದ್ಯುದೀಪಾಲಂಕಾರ ಮಾಡಲಾಗಿದೆ. ಹಂಪಿ ಉತ್ಸವದ ಸಮಯದಲ್ಲಿ ಸ್ಮಾರಕಗಳಿಗೆ ವಿದ್ಯುದೀಪಾಲಂಕಾರ ಮಾಡಲಾಗುತ್ತಿತ್ತು. ಈಗ ಜುಲೈ 9 ರಿಂದ 16 ರವರೆಗೂ ಹಂಪಿಯ ಸ್ಮಾರಕಗಳು ಜಗಮಗಿಸಲಿವೆ. ಹಾಗಾಗಿ ಹಂಪಿಯ ಸ್ಮಾರಕಗಳು ನವವಧುವಿನಂತೇ ಶೃಂಗಾರಗೊಂಡಿವೆ.

ಹಂಪಿಯ ಸ್ಮಾರಕಗಳನ್ನು ರಾತ್ರಿ ಹೊತ್ತಿನಲ್ಲೂ ವೀಕ್ಷಣೆಗೆ ಹಂಪಿ ಬೈ ನೈಟ್ ಯೋಜನೆ ರೂಪಿಸಲಾಗಿದೆ. ಜೊತೆಗೆ ಹಂಪಿಯ ಮಹತ್ವದ ಸ್ಮಾರಕಗಳ ಬಳಿ ಧ್ವನಿ ಮತ್ತು ಬೆಳಕು ಕಾರ್ಯಕ್ರಮದ ವ್ಯವಸ್ಥೆ ಕೂಡ ಮಾಡಲಾಗುತ್ತಿದೆ. ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ಎದುರು ಬಸವಣ್ಣ ಮಂಟಪ ಮತ್ತು ವಿಜಯ ವಿಠ್ಠಲ ದೇವಾಲಯದ ಬಳಿಯೂ ಧ್ವನಿ ಮತ್ತು ಬೆಳಕು ಕಾರ್ಯಕ್ರಮದ ವ್ಯವಸ್ಥೆ ಮಾಡಲಾಗಿದೆ. ಜಿ-20 ರಾಷ್ಟ್ರಗಳ ಪ್ರತಿನಿಧಿಗಳು ಈ ಕಾರ್ಯಕ್ರಮ ವೀಕ್ಷಣೆ ಮಾಡಲಿದ್ದಾರೆ. ಪ್ರವಾಸೋದ್ಯಮ, ಪುರಾತತ್ವ ಇಲಾಖೆಗಳು, ಹಂಪಿ ಅಭಿವೃದ್ಧಿ ಪ್ರಾಧಿಕಾರ ಹಾಗು ಜಿಲ್ಲಾಡಳಿತ ಹಂಪಿ ಸ್ಮಾರಕಗಳಿಗೆ ವಿದ್ಯುದೀಪಾಲಂಕಾರ ಮಾಡಿದ್ದು, ದೇಶ-ವಿದೇಶಿ ಪ್ರವಾಸಿಗರ ಗಮನ ಕೂಡ ಸೆಳೆಯುತ್ತಿದೆ.

ಹಂಪಿಯ ರಸ್ತೆಗಳಲ್ಲಿ ಜಿ-20 ಶೃಂಗಸಭೆಗೆ ಆಗಮಿಸುವ ಪ್ರತಿನಿಧಿಗಳಿಗೆ ಸ್ವಾಗತಿಸಲು ರಂಗೋಲಿ ಚಿತ್ತಾರಗಳನ್ನು ಬಿಡಿಸಲಾಗಿದೆ. ಕಮಲಾಪುರ ಪುರಸಭೆ ವತಿಯಿಂದ ಈ ಚಿತ್ತಾರಗಳನ್ನು ಬಿಡಿಸಲಾಗಿದೆ. ಹಂಪಿ, ಕಮಲಾಪುರ ಗೋಡೆಗಳ ಮೇಲೂ ಕಲಾವಿದರು ಹಂಪಿಯ ಸ್ಮಾರಕಗಳನ್ನು ಕುಂಚದಲ್ಲಿ ಅರಳಿಸಿದ್ದಾರೆ. ಇಡೀ ಹಂಪಿ ಶೃಂಗಾರಗೊಂಡಿದೆ.

ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ಹಂಪಿಯ ಸ್ಮಾರಕಗಳ ಬಳಿ ದೇಶದ ವಿವಿಧ ಕಲೆಗಳ ಪ್ರದರ್ಶನ ಕೂಡ ನಡೆಯಲಿದೆ. ಈಗಾಗಲೇ ಕಲಾವಿದರು ಆಗಮಿಸಿದ್ದು, 52 ಪ್ರತಿನಿಧಿಗಳಿಗೆ ಭಾರತೀಯ ಕಲೆಯನ್ನು ಉಣಬಡಿಸಲಿದ್ದಾರೆ.

ಹಂಪಿಯ ಇವೋಲ್ ಬ್ಯಾಕ್ ಹೋಟೆಲ್‌ಗೆ ಆಗಮಿಸಿದ ಜಿ-20 ರಾಷ್ಟ್ರಗಳ ಪ್ರತಿನಿಧಿಗಳನ್ನು ಸ್ಥಳೀಯ ಹಗಲು ವೇಷ ಕಲಾವಿದರ ತಂಡ ಬರಮಾಡಿಕೊಂಡಿತು. ಹಂಪಿ ನೆಲದ ಕಲೆಯೊಂದಿಗೆ ಸ್ವಾಗತ ಮಾಡಿದ ಕಲಾವಿದರು, ಹಂಪಿಯ ಗತ ವೈಭವ ಸಾರುವ ಕಾರ್ಯ ಮಾಡಿದರು.

ಹಂಪಿಯಲ್ಲಿ ಜಿ-20 ಶೃಂಗಸಭೆ ಹಿನ್ನೆಲೆಯಲ್ಲಿ ಪ್ರವಾಸಿಗರಲ್ಲಿ ಇಳಿಮುಖವಾಗಿದೆ. ಪ್ರವಾಸಿಗರಿಗೆ ನಿರ್ಬಂಧ ಹೇರದಿದ್ದರೂ ಪ್ರವಾಸಿಗರು ಈ ವೀಕೆಂಡ್‌ನಲ್ಲಿ ಭಾರಿ ಪ್ರಮಾಣದಲ್ಲಿ ಸುಳಿಯಲಿಲ್ಲ. ಕಳೆದ ಭಾನುವಾರ 8 ಸಾವಿರಕ್ಕೂ ಅಧಿಕ ಪ್ರವಾಸಿಗರು ಹಂಪಿಗೆ ಆಗಮಿಸಿದ್ದರು. ಹಂಪಿಯಲ್ಲಿ 1076 ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

Eshwara Khandre 5 ಕೋಟಿ ಸಸಿಗಳ ಪೈಕಿ ಎಷ್ಟು ಬದುಕಿವೆ? ವರದಿ ಕೊಡಿ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

ರಾಜ್ಯದ 2,207 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Election Commission ರಾಜ್ಯದಲ್ಲಿ ನೀತಿ ಸಂಹಿತೆ ಷರತ್ತು ಬದ್ಧ ಸಡಿಲಿಕೆ

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Chaluvaraya Swamy ಇಷ್ಟು ವರ್ಷ ಪೆನ್‌ಡ್ರೈವ್‌ ಇಟ್ಟುಕೊಂಡಿದ್ದೇಕೆ?

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

Prajwal Revanna ವಿರುದ್ಧ ಕ್ರಮಕ್ಕೆ ತಕರಾರಿಲ್ಲ: ಎಚ್‌.ಡಿ. ದೇವೇಗೌಡ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.