HUNSUR: ಗುಣಮಟ್ಟದ ಮೊಬೈಲ್, ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಪ್ರತಿಭಟನೆ


Team Udayavani, Jul 11, 2023, 10:10 AM IST

2-hunsur

ಹುಣಸೂರು: ಅಂಗನವಾಡಿ ನೌಕರಿಗೆ ಕನಿಷ್ಟ ವೇತನ ಜಾರಿ, ಮೊಬೈಲ್ ಬದಲಾಗಿ ಗುಣಮಟ್ಟದ ಟ್ಯಾಬ್ ನೀಡಿ, ಎನ್.ಇ.ಪಿ-2020ನ್ನು ವಾಪಸ್ಸು ಪಡೆಯಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಓತ್ತಾಯಿಸಿ ಅಂಗನವಾಡಿ ನೌಕರರು ಸಿಐಟಿಯು ನೇತೃತ್ವದಲ್ಲಿ ನಗರದ ಸಿಡಿಪಿಓ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ನಗರಸಭಾ ಮೈದಾನದಿಂದ ಹೊರಟ ಮೆರವಣಿಗೆಯಲ್ಲಿ ಅಂಗನವಾಡಿ ಕಾರ್ಯಕರ್ತರು, ಅಂಗನವಾಡಿ ನೌಕರರ ಬೇಡಿಕೆಗಳು ಈಡೇರಲಿ, ಕೊಟ್ಟ ಮಾತಿನಂತೆ ಸರಕಾರ ನಡೆದುಕೊಳ್ಳಲಿ ಎಂಬಿತ್ಯಾದಿ ಘೋಷಣೆ ಕೂಗುತ್ತಾ ಸಾಗಿ ಬಂದರು.

ಸಿಡಿಪಿಓ ಕಚೇರಿ ಎದುರು ನಡೆಸಿದ ಧರಣಿಯಲ್ಲಿ ಅಂಗನವಾಡಿ ನೌಕರರ ಸಂಘದ ಜಿಲ್ಲಾ ಕಾರ್ಯದರ್ಶಿ ಪುಷ್ಪ ಮಾತನಾಡಿ, ಅಂಗನವಾಡಿ ಕಾರ್ಯಕರ್ತರು ತ್ಯಾಗ ಮತ್ತು ಶ್ರಮದಿಂದ ಕೆಲಸ ಮಾಡುತ್ತಿದ್ದು, ಅವರುಗಳ ಸ್ಥಿತಿ ದಯನೀಯವಾಗಿದೆ. ಕಳಪೆ ಮೊಬೈಲ್ ನೀಡಿ ಎಲ್ಲವನ್ನೂ ದಾಖಲಿಸುವಂತೆ ಕಾರ್ಯಕರ್ತರಿಗೆ ಅಧಿಕಾರಿಗಳು ನೋಟೀಸ್ ನೀಡಿ ಕಿರುಕುಳ ನೀಡುತ್ತಿರುವುದನ್ನು ತಪ್ಪಿಸಬೇಕು ಎಂದರು.

1975ರಲ್ಲಿ ಆರಂಭವಾದ ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಐಸಿಡಿಎಸ್ ಸೆಕ್ಷನ್, ಅಂಗನವಾಡಿ ಮತ್ತು ಪೋಷಣ್-2ಯೋಜನೆಯಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರು ಗೋಳು ಹೇಳದಾಗಿದೆ. ಅಂಗನವಾಡಿ ನೌಕರರಿಗೆ ಕನಿಷ್ಠ ವೇತನ ಜಾರಿ ಮಾಡಬೇಕು. ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಬಾರದು ಎಂದು ಹೇಳಿದರು.

ಅಂಗನವಾಡಿ ನೌಕರರಿಂದ ಎಲ್ಲಾ ರೀತಿಯ ಸರ್ವೆ ಇತರ ಸಾಮಾಜಿಕ ಕಾರ್ಯಕ್ರಮಗಳನ್ನು ಜಾರಿಗೊಳಿಸುವ ಸರಕಾರಗಳು ಕನಿಷ್ಟ ವೇತನ ನಿಗದಿ ಮಾಡದೆ ಬೇಕಾಬಿಟ್ಟಿಯಾಗಿ ದುಡಿಸಿಕೊಳ್ಳುತ್ತಿರುವುದು ನಾಚಿಕೆಗೇಡಿನ ವಿಚಾರ. ಅಂಗನವಾಡಿ ನೌಕರರಿಗೆ ನೀಡಿರುವ ಕಳಪೆ ಮೊಬೈಲ್ ಬದಲಿಗೆ ಗುಣಮಟ್ಟದ ಟ್ಯಾಬ್ ವಿತರಿಸಬೇಕು ಎಂದು ಆಗ್ರಹಿಸಿದರು.

ಸರಕಾರ ಸಹಭಾಗಿತ್ವ ಪಿಂಚಣಿ ಪದ್ಧತಿ ಎನ್‌ಪಿಎಸ್‌ಅನ್ನು ಜಾರಿ ಮಾಡುತ್ತಿದೆ. ಅದು 40 ವರ್ಷದೊಳಗಿನ ಕಾರ್ಯಕರ್ತರು ಮತ್ತು ಸಹಾಯಕರಿಗೆ ಜಾರಿ ಮಾಡುತ್ತಿದೆ. ಕಳೆದ 45 ವರ್ಷಗಳಿಂದ ಇಲಾಖೆಯಲ್ಲಿ ಕೆಲಸ ನಿರ್ವಹಿಸಿದ ಲಕ್ಷಾಂತರ ಕಾರ್ಯಕರ್ತರು-ಸಹಾಯಕಿಯರನ್ನು ನಿವೃತ್ತಿ ಹೆಸರಿನಲ್ಲಿ ಬೀದಿ ಪಾಲು ಮಾಡುತ್ತಿದೆ ಎಂದು ದೂರಿದರು.

ಆ ಬಳಿಕ ಬೇಡಿಕೆಯುಳ್ಳ ಮನವಿ ಪತ್ರವನ್ನು ಸಿಡಿಪಿಓ ರಶ್ಮಿಯವರಿಗೆ ನೀಡಿದರು.

ಪ್ರತಿಭಟನೆಯಲ್ಲಿ ಸಿಐಟಿಯುನ ಬಸವರಾಜು ವಿ.ಕಲ್ಕುಣಿಕೆ, ಉಪಾಧ್ಯಕ್ಷರಾದ ಲತಾ, ಕಾಮಾಕ್ಷಿ, ಪದ್ಮಭಾಯಿ, ಸಂಘಟನಾ ಕಾರ್ಯದರ್ಶಿ ನಾಗಮ್ಮ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಾರದಾ, ಖಜಾಂಚಿ ಕಲಾವತಿ ಮುಖಂಡರಾದ ಪ್ರತಿಭಾ, ಮಂಜುಳಾ, ತೇಜಸ್ಮಿತ, ರಾಧಾಬಾಯಿ, ಸಾವಿತ್ರಮ್ಮ, ರೇಖಾ, ಮಣಿ, ಡಿ.ಎಚ್.ಎಸ್.ಜಿಲ್ಲಾ ಸಂಚಾಲಕ ಸತೀಶ್ ಮುಂತಾದವರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.