ಶಿವಣ್ಣನ ಹುಟ್ಟುಹಬ್ಬಕ್ಕೆ ಭರ್ಜರಿ ತಯಾರಿ: ದಿನಪೂರ್ತಿ ಕಾರ್ಯಕ್ರಮ


Team Udayavani, Jul 11, 2023, 11:23 AM IST

shivarajkumar

ಕನ್ನಡ ಚಿತ್ರರಂಗದ ಹ್ಯಾಟ್ರಿಕ್‌ ಹೀರೊ ಖ್ಯಾತಿಯ ನಟ ಶಿವರಾಜಕುಮಾರ್‌ ಇದೇ ಜು. 12ರಂದು 62ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಇನ್ನು ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಅದ್ಧೂರಿಯಾಗಿ ಆಚರಿಸಲು ಅಭಿಮಾನಿಗಳು ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ಶಿವಣ್ಣ ಜನ್ಮದಿನಕ್ಕೆ ಕ್ಷಣಗಣನೆ ಶುರುವಾಗಿದೆ.

ಕೋವಿಡ್‌ ಆತಂಕ ಆನಂತರ ನಟ ಪುನೀತ್‌ ರಾಜಕುಮಾರ್‌ ಅವರ ಅಗಲಿಕೆಯ ದುಃಖದಿಂದಾಗಿ ನಟ ಶಿವರಾಜಕುಮಾರ್‌, ಸುಮಾರು ನಾಲ್ಕು ವರ್ಷಗಳಿಂದ ಅದ್ಧೂರಿ ಬರ್ತ್‌ಡೇ, ಸಂಭ್ರಮಾಚರಣೆಗಳಿಂದ ದೂರ ಉಳಿದಿದ್ದರು. ಆದರೆ ಈ ಬಾರಿ ಅಭಿಮಾನಿಗಳ ಒತ್ತಾಯದ ಮೇರೆಗೆ ಸಾರ್ವಜನಿಕವಾಗಿ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲು ಶಿವರಾಜಕುಮಾರ್‌ ಸಮ್ಮತಿಸಿದ್ದು, ಅದಕ್ಕಾಗಿ ತಯಾರಿ ಕೂಡ ಜೋರಾಗಿ ನಡೆಯುತ್ತಿದೆ.

ದಿನಪೂರ್ತಿ ಕಾರ್ಯಕ್ರಮ:  ಜು. 11ರ ಸಂಜೆಯಿಂದಲೇ ಶಿವರಾಜಕುಮಾರ್‌ ಅವರ ಹುಟ್ಟುಹಬ್ಬ ಕಾರ್ಯಕ್ರಮ ಆರಂಭವಾಗಲಿದ್ದು, ಬೆಂಗಳೂರಿನ ನಾಗವಾರದಲ್ಲಿರುವ ಶಿವಣ್ಣ ನಿವಾಸದಲ್ಲಿ ರಾತ್ರಿ 12 ಗಂಟೆಗೆ ಬೃಹತ್‌ ಕೇಕ್‌ ಕತ್ತರಿಸಲಾಗುತ್ತಿದ್ದು, ಬಳಿಕ ಸಿಡಿಮದ್ದು ಸಂಭ್ರಮಾಚರಣೆ ನಡೆಯಲಿದೆ.

ಜು. 12ರಂದು ಬೆಳಿಗ್ಗೆ 8 ಗಂಟೆಯಿಂದ 10 ಗಂಟೆಯವರೆಗೆ ತಮ್ಮ ಸ್ವಗೃಹದಲ್ಲಿ ನಟ ಶಿವರಾಜಕುಮಾರ್‌ ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದಿರುವ ಅಭಿಮಾನಿಗಳ ಜೊತೆಗೆ ಕೇಕ್‌ ಕತ್ತರಿಸಿ, ಸಂಭ್ರಮಾಚರಣೆ ಮಾಡಲಿದ್ದಾರೆ. ಬಳಿಕ 10.30ಕ್ಕೆ “ಕಂಠೀರವ ಸ್ಟುಡಿಯೋ’ದಲ್ಲಿರುವ ವರನಟ ಡಾ. ರಾಜಕುಮಾರ್‌ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಅದಾದ ನಂತರ 11.15ಕ್ಕೆ ಕೆ. ಜಿ ರಸ್ತೆಯಲ್ಲಿರುವ ಸಂತೋಷ್‌ ಚಿತ್ರಮಂದಿರದಲ್ಲಿ ಶಿವರಾಜಕುಮಾರ್‌ ಬರ್ತ್‌ಡೇ ಪ್ರಯುಕ್ತ “ಘೋಸ್ಟ್‌’ ಸಿನಿಮಾದ ಸ್ಪೆಷಲ್‌ ಟೀಸರ್‌ ಮತ್ತು ಸಾಂಗ್‌ ಬಿಡುಗಡೆಯಾಗಲಿದ್ದು, ಶಿವಣ್ಣ ಚಿತ್ರತಂಡ ಮತ್ತು ಅಭಿಮಾನಿಗಳ ಜೊತೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ನಾಗವಾರದಲ್ಲಿರುವ ಶಿವಣ್ಣ ಅವರ ಸ್ವಗೃಹದಲ್ಲಿ ಅಭಿಮಾನಿಗಳಿಗೆ ಬಿರಿಯಾನಿ ವಿತರಣೆ ನಡೆಯಲಿದೆ. ಇದರ ಜೊತೆ ರಕ್ತದಾನ ಶಿಬಿರ ಸೇರಿದಂತೆ ಹಲವು ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಭರದಿಂದ ನಡೆದಿದೆ ತಯಾರಿ:  ಇನ್ನು ಶಿವರಾಜಕುಮಾರ್‌ ಅವರ ಜನ್ಮದಿನದ ಪ್ರಯುಕ್ತ ಎರಡು ವಾರಗಳಿಂದಲೇ ಅಭಿಮಾನಿಗಳು ಭರದಿಂದ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಹೊಸ ಸಿನಿಮಾಗಳ ಅಪ್ಡೇಟ್‌ ಇನ್ನು ಶಿವರಾಜಕುಮಾರ್‌ ಅವರ ಜನ್ಮದಿನದ ಪ್ರಯುಕ್ತ ಮುಂಬರಲಿರುವ ಅವರ ಹೊಸ ಸಿನಿಮಾಗಳ ಒಂದಷ್ಟು ಅಪ್ಡೆàಟ್‌ ಸಿಗಲಿದೆ. ಮೂಲಗಳ ಪ್ರಕಾರ, ಶಿವಣ್ಣ ಅಭಿನಯದ ಮುಂಬರಲಿರುವ ಮೂರು-ನಾಲ್ಕು ಹೊಸ ಸಿನಿಮಾಗಳು ಅನೌನ್ಸ್‌ ಆಗಲಿದೆ. ಇದರ ಜೊತೆಗೆ ಈಗಾಗಲೇ ಚಿತ್ರೀಕರಣ ಪೂರೈಸಿರುವ “ಜೈಲರ್‌’, “ಕ್ಯಾಪ್ಟನ್‌ ಮಿಲ್ಲರ್‌’ ಸೇರಿದಂತೆ ಕೆಲ ಸಿನಿಮಾಗಳ ಸ್ಪೆಷಲ್‌ ಲುಕ್‌ ಕೂಡ ಬಿಡುಗಡೆಯಾಗುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

1

Tollywood: ಬಹುನಿರೀಕ್ಷಿತ ʼಪುಷ್ಪ-2ʼ ರಿಲೀಸ್‌ ಡೇಟ್‌ ಮುಂದೂಡಿಕೆ?

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

ಮಗುವನ್ನು ಕಾರಿನಲ್ಲಿ ಬಿಟ್ಟು ಮದುವೆಗೆ ಹೋದ ಕುಟುಂಬ… ನೆನಪಾಗುವಷ್ಟರಲ್ಲಿ ಮಿಂಚಿತ್ತು ಕಾಲ

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

Hassan; ಕೆರೆಯಲ್ಲಿ ಈಜಲು ಹೋಗಿ ನೀರು ಪಾಲಾದ ನಾಲ್ವರು ಮಕ್ಕಳು

ಈಶ್ವರ್ ಖಂಡ್ರೆ

Bidar; ಯುವಕರ‌ ಬದುಕು‌ ಹಾಳು ಮಾಡಿದ‌ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ: ಈಶ್ವರ್ ಖಂಡ್ರೆ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ

ಜಮ್ಮು – ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಂದ ಎನ್‌ಕೌಂಟರ್‌… ಇಬ್ಬರು ಉಗ್ರರು ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

god promise kannada movie

Kannada Cinema; ‘ಗಾಡ್‌ ಪ್ರಾಮಿಸ್‌’ ಮುಹೂರ್ತ ಮಾಡಿದ್ರು

ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

Actor Darshan; ಅರ್ಜುನ ಸಮಾಧಿಗೆ ದರ್ಶನ್‌ ಫ್ಯಾನ್ಸ್‌ ಸಾಥ್‌

15

Vidhyarthi Vidyarthiniyare Trailer: ಟ್ರೇಲರ್‌ನಲ್ಲಿ ಟೀನೇಜ್‌ ಸ್ಟೋರಿ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

Brinda Acharya: ಸಾವಿರ ಗುಂಗಲ್ಲಿ ಬೃಂದಾ ಆಚಾರ್ಯ; ಆಲ್ಬಂ ಸಾಂಗ್‌ನಲ್ಲಿ ನಟನೆ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-aaaa

27 ವರ್ಷಗಳ ಹಿಂದೆ ನಾಪತ್ತೆಯಾದವ ನೆರೆಮನೆಯ ನೆಲಮಾಳಿಗೆಯಲ್ಲಿ ಪತ್ತೆ!!: ವಿಡಿಯೋ ವೈರಲ್

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

Sandalwood: ‘ಇದು ನಮ್‌ ಶಾಲೆ’ಯ ಹಾಡುಗಳು ಬಂತು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

8-bng

17 ಕೋಟಿ ರೂ. ವಿದ್ಯುತ್‌ ಬಿಲ್‌ ಕಂಡು ಮನೆ ಮಾಲೀಕನಿಗೆ ಶಾಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.