ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು
ಬಾಡಾರುವಿನಲ್ಲಿ ನಡೆಯಿತು ಹೇಯ ಕೃತ್ಯ
Team Udayavani, Jul 11, 2023, 2:29 PM IST
ವೇಣೂರು: ಬಜಿರೆ ಗ್ರಾಮದ ಬಾಡಾರು ಕೊರಂಗಲ್ಲುವಿನಲ್ಲಿ ಅನಾದಿ ಕಾಲದಿಂದ ಆಚರಿಸಿಕೊಂಡು ಬರುತ್ತಿದ್ದ ಕೊರಗಜ್ಜನ ಗುಡಿಗೆ ಕಿಡಿಗೇಡಿಗಳು ಬೆಂಕಿಯಿಟ್ಟಿರುವ ಘಟನೆ ನಡೆದಿದೆ.
ಬೆಳ್ತಂಗಡಿ-ಬಂಟ್ವಾಳ ತಾಲೂಕು ಗಡಿ ಭಾಗದಲ್ಲಿರುವ ಇಲ್ಲಿಯ ಬಾಡಾರು ಎಂಬಲ್ಲಿ ಜನವರಿ ತಿಂಗಳಿನಲ್ಲಿ ವರ್ಷಂಪ್ರತಿ ದೊಂಪದಬಲಿ ಉತ್ಸವ ಜರಗಿದ ಮರುದಿನ ಈ ಕೊರಗಜ್ಜನ ಗುಡಿಯಲ್ಲಿ ಸಾರ್ವಜನಿಕ ನೇಮೋತ್ಸವ ನಡೆಯುತ್ತ ಬರುತ್ತಿತ್ತು ಎನ್ನಲಾಗಿದೆ.
ಗುಡಿಯ ಜಾಗದ ವಿಚಾರ ಮತ್ತು ಆಡಳಿತದ ವಿಚಾರದಲ್ಲಿ ತಗಾದೆಗಳು ನಡೆಯುತ್ತಿತ್ತು ಎನ್ನಲಾಗಿದೆ.
ಇದೀಗ ಆರಾಧ್ಯ ಶಕ್ತಿ ಗುಡಿಗೆ ಬೆಂಕಿ ಇಟ್ಟಿರುವುದು ಹಲವಾರು ಅನುಮಾನಗಳಿಗೆ ಕಾರಣವಾಗಿದ್ದು, ತನಿಖೆಯಿಂದಷ್ಟೇ ಖಚಿತ ಮಾಹಿತಿ ತಿಳಿದು ಬರಬೇಕಿದೆ.