ದುಲೀಪ್‌ ಟ್ರೋಫಿ ಫೈನಲ್‌: ದಕ್ಷಿಣ ವಲಯ ಬ್ಯಾಟಿಂಗ್‌ ಕುಸಿತ


Team Udayavani, Jul 12, 2023, 11:07 PM IST

1eqwewq

ಬೆಂಗಳೂರು: ಬುಧವಾರ ಇಲ್ಲಿನ ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೊದಲ್ಗೊಂಡ ದುಲೀಪ್‌ ಟ್ರೋಫಿ ಫೈನಲ್‌ನಲ್ಲಿ ಹಾಲಿ ಚಾಂಪಿಯನ್‌ ಪಶ್ಚಿಮ ವಲಯ ವಿರುದ್ಧ ದಕ್ಷಿಣ ವಲಯ ಬ್ಯಾಟಿಂಗ್‌ ಕುಸಿತಕ್ಕೆ ಸಿಲುಕಿದೆ. 7 ವಿಕೆಟಿಗೆ 182 ರನ್‌ ಗಳಿಸಿ ಮೊದಲ ದಿನದಾಟ ಮುಗಿಸಿದೆ.

ಮಳೆ ಹಾಗೂ ಮಂದಬೆಳಕಿನಿಂದಾಗಿ ದಿದನಾಟ 65 ಓವರ್‌ಗಳಿಗೆ ಸೀಮಿತಗೊಂಡಿತು. ಟಾಸ್‌ ಗೆದ್ದು ಬೌಲಿಂಗ್‌ ಆಯ್ದುಕೊಂಡ ಪಶ್ಚಿಮ ವಲಯ ಮೇಲುಗೈ ಸಾಧಿಸುವಲ್ಲಿ ಯಶಸ್ವಿಯಾಯಿತಾದರೂ ಇದು ನಿಧಾನ ಗತಿಯ ಟ್ರ್ಯಾಕ್‌ ಎಂಬುದನ್ನು ಮರೆಯುವಂತಿಲ್ಲ. ಇಲ್ಲಿ ಬ್ಯಾಟಿಂಗ್‌ ಸುಲಭವಲ್ಲ ಎಂಬುದು ಮೊದಲ ದಿನವೇ ಸಾಬೀತಾಗಿದೆ.

ನಾಯಕ ಹನುಮ ವಿಹಾರಿ, ಸ್ಥಳೀಯ ಬ್ಯಾಟಿಂಗ್‌ ಹೀರೋ ಮಾಯಾಂಕ್‌ ಅಗರ್ವಾಲ್‌ ಮತ್ತು ತಿಲಕ್‌ ವರ್ಮ ಮಾತ್ರ ಬ್ಯಾಟಿಂಗ್‌ನಲ್ಲಿ ಯಶಸ್ಸು ಕಂಡರು. ಕರ್ನಾಟಕದವರೇ ಆದ ಓಪನರ್‌ ಆರ್‌. ಸಮರ್ಥ್ ಅವರ ವೈಫ‌ಲ್ಯ ಮತ್ತೆ ತಂಡವನ್ನು ಕಾಡಿತು. ಅವರು ಕೇವಲ 7 ರನ್‌ ಮಾಡಿ ನಿರ್ಗಮಿಸಿದರು. ಕೀಪರ್‌ ರಿಕ್ಕಿ ಭುಯಿ (9), ಕೇರಳದ ಸಚಿನ್‌ ಬೇಬಿ (7) ಕೂಡ ಯಶಸ್ಸು ಕಾಣಲಿಲ್ಲ.

ಸೆಮಿಫೈನಲ್‌ನಲ್ಲಿ ಮಿಂಚದ ಹನುಮ ವಿಹಾರಿ ಇಲ್ಲಿ ಕ್ರೀಸ್‌ ಆಕ್ರಮಿಸಿಕೊಳ್ಳುವಲ್ಲಿ ಯಶಸ್ವಿಯಾದರು. ಅವರಿಂದ ಇನ್ನಿಂಗ್ಸ್‌ನ ಏಕೈಕ ಅರ್ಧ ಶತಕ ದಾಖಲಾಯಿತು. 130 ಎಸೆತ ಎದುರಿಸಿ ನಿಂತ ವಿಹಾರಿ 9 ಬೌಂಡರಿ ನೆರವಿನಿಂದ 63 ರನ್‌ ಹೊಡೆದರು. ತಿಲಕ್‌ ವರ್ಮ ಅವರಿಂದ 40 ರನ್‌ ಸಂದಾಯವಾಯಿತು (87 ಎಸೆತ, 5 ಬೌಂಡರಿ, 1 ಸಿಕ್ಸರ್‌). ಮಾಯಾಂಕ್‌ ಅಗರ್ವಾಲ್‌ ಬಿರುಸಿನ ಆಟದ ಸೂಚನೆ ನೀಡಿದರೂ ಇನ್ನಿಂಗ್ಸ್‌ ವಿಸ್ತರಿಸಲು ವಿಫ‌ಲರಾದರು. ಅವರ ಗಳಿಕೆ 28 ರನ್‌ (47 ಎಸೆತ, 6 ಬೌಂಡರಿ). ವಾಷಿಂಗ್ಟನ್‌ ಸುಂದರ್‌ 9 ಮತ್ತು ವಿಜಯ್‌ಕುಮಾರ್‌ ವೈಶಾಖ್‌ 5 ರನ್‌ ಮಾಡಿ ಆಡುತ್ತಿದ್ದಾರೆ.

ಪಶ್ಚಿಮ ವಲಯದ ಬೌಲಿಂಗ್‌ ಸರದಿಯಲ್ಲಿ ಹೆಚ್ಚಿನ ಯಶಸ್ಸು ಸಾಧಿಸಿದವರೆಂದರೆ ಅರ್ಜಾನ್‌ ನರ್ಗಸ್ವಾಲಾ, ಚಿಂತನ್‌ ಗಜ ಮತ್ತು ಶಮ್ಸ್‌ ಮುಲಾನಿ. ಮೂವರೂ ತಲಾ 2 ವಿಕೆಟ್‌ ಕೆಡವಿದರು. ಒಂದು ವಿಕೆಟ್‌ ಅತೀತ್‌ ಸೇಠ್ ಪಾಲಾಯಿತು. 60 ಓವರ್‌ಗಳ ಆಟ ಮುಗಿದಾಗ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾಗಿತ್ತು. ಆಗ ದಕ್ಷಿಣ ವಲಯ 6 ವಿಕೆಟ್‌ ನಷ್ಟಕ್ಕೆ 170 ರನ್‌ ಮಾಡಿತ್ತು.

ಸಂಕ್ಷಿಪ್ತ ಸ್ಕೋರ್‌: ದಕ್ಷಿಣ ವಲಯ ಪ್ರಥಮ ಇನ್ನಿಂಗ್ಸ್‌-7 ವಿಕೆಟಿಗೆ 182 (ವಿಹಾರಿ 63, ತಿಲಕ್‌ ವರ್ಮ 40, ಅಗರ್ವಾಲ್‌ 28, ಶಮ್ಸ್‌ ಮುಲಾನಿ 19ಕ್ಕೆ 2, ಚಿಂತನ್‌ ಗಜ 27ಕ್ಕೆ 2, ನರ್ಗಸ್ವಾಲಾ 45ಕ್ಕೆ 2).

ಟಾಪ್ ನ್ಯೂಸ್

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

Arunagiri ರಥೋತ್ಸವದಲ್ಲಿ ಕಳ್ಳರ ಕೈಚಳಕ: ಐದು ಪವನ್ ತೂಕದ ಮಾಂಗಲ್ಯ ಸರ ಅಪಹರಣ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ

Sirsi: ಕುಡಿಯುವ ನೀರಿನ ಸಮಸ್ಯೆ ನಿವಾರಿಸಲು ಮುಂದಾದ ಜೀವಜಲ ಕಾರ್ಯಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

BCCI will call applications for head coach role

Head Coach: ಟೀಂ ಇಂಡಿಯಾಗೆ ಹೊಸ ಕೋಚ್; ಹುಡುಕಾಟ ಆರಂಭಿಸಿದ ಬಿಸಿಸಿಐ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

34

GT Vs CSK: ನಿರ್ಗಮನ ಬಾಗಿಲಲ್ಲಿ ಗುಜರಾತ್‌ ಪ್ಲೇ ಆಫ್‌ ಜಪದಲ್ಲಿ ಚೆನ್ನೈ

1-qwewqwqe

IPL;ಪಂಜಾಬ್ ವಿರುದ್ಧ 60 ರನ್ ಗಳ ಗೆಲುವು ಸಾಧಿಸಿದ ಆರ್ ಸಿಬಿ: ಪ್ಲೇ ಆಫ್ ಆಸೆ ಜೀವಂತ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Jay Shah said that canceling the contract of Ishaan and Iyer was not his decision

BCCI: ಇಶಾನ್, ಅಯ್ಯರ್ ಗುತ್ತಿಗೆ ರದ್ದು ಮಾಡುವುದು ನನ್ನ ನಿರ್ಧಾರವಾಗಿರಲಿಲ್ಲ ಎಂದ ಜಯ್ ಶಾ

ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Sandalwood; ಎವಿಡೆನ್ಸ್‌ ಮೇಲೆ ಪ್ರವೀಣ್ ಕಾನ್ಫಿಡೆನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.