ಸಿಟ್ಟಾಗಿ ಪಕ್ಷದ ಕಚೇರಿಗೆ ನಡೆದೇ ಹೋದ ಓಮರ್
Team Udayavani, Jul 14, 2023, 7:41 AM IST
ಶ್ರೀನಗರ: ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರಿಗೆ ಕಣಿವೆ ಪೊಲೀಸರು ಬೆಂಗಾವಲು ವಾಹನ ಹಾಗೂ ಐಟಿಬಿಪಿ ರಕ್ಷಣ ಪಡೆಯನ್ನು ನಿರಾಕರಿಸಿರುವ ಹಿನ್ನೆಲೆಯಲ್ಲಿ ಗುರುವಾರ ಓಮರ್ ತಮ್ಮ ನಿವಾಸದಿಂದ ಪಕ್ಷದ ಕಚೇರಿಗೆ ಕಾಲ್ನಡಿಗೆಯಲ್ಲೇ ತೆರಳಿದ್ದಾರೆ.
1931ರಲ್ಲಿ ಕಾಶ್ಮೀರದ ಮಹಾರಾಜ ಹರಿ ಸಿಂಗ್ನ ನಿರಂಕುಶ ಆಡಳಿತವನ್ನು ಪ್ರಶ್ನಿಸಿ ನಡೆಸಿದ ಹೋರಾಟದಲ್ಲಿ ಮಹಾರಾಜನ ಸೇನೆಯಿಂದ 22 ಕಾಶ್ಮೀರಿಗಳನ್ನು ಹತ್ಯೆಗೈಯ್ಯಲಾಗಿತ್ತು. ಆ ಹುತಾತ್ಮ ಕಾಶ್ಮೀರಿಗಳ ಸ್ಮರಣಾರ್ಥ ಜು.13ರಂದು ಪುಣ್ಯಸ್ಮರಣೆ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ನ್ಯಾಶನಲ್ ಕಾನ್ಫರೆನ್ಸ್ ಪಕ್ಷದ ಉಪಾಧ್ಯಕ್ಷರಾದ ಒಮರ್, ತಮ್ಮ ಪಕ್ಷದ ಪ್ರಧಾನ ಕಚೇರಿಗೆ ತೆರಳಲು ಮುಂದಾಗಿದ್ದರು. ಆದರೆ ಬೆಂಗಾವಲು ಮತ್ತು ರಕ್ಷಣ ಪಡೆ ನೀಡಲು ನಿರಾಕರಿಸಿದ ಹಿನ್ನೆಲೆ ಸ್ವತಃ ತಾವೇ ನಡೆದು ಹೊರಟಿದ್ದಾರೆ. ಬಳಿಕ ಈ ವೀಡಿಯೋವನ್ನೂ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RTO: ಇನ್ನು ಡ್ರೈವಿಂಗ್ ಲೈಸೆನ್ಸ್ ಟೆಸ್ಟ್ಗಾಗಿ ಆರ್ಟಿಒ ಕಚೇರಿಗೆ ಹೋಗ್ಬೇಕಿಲ್ಲ!
Lucknow; ಶಕ್ತಿಯನ್ನು ಮಹಾಶಕ್ತಿ ಆಗಿ ಪರಿವರ್ತಿಸುವೆ: ಮೋದಿ
Election; ದ್ವೇಷ ಕಾರುವ ಪಿಎಂ ಮೋದಿ ರಾಜಕೀಯ ತ್ಯಜಿಸಲಿ: ಖರ್ಗೆ
GalaxEye; ರಾತ್ರಿಯಲ್ಲೂ ಭೂಮಿ ಚಿತ್ರ ಕ್ಲಿಕ್ಕಿಸುವ ಟೆಕ್ನಾಲಜಿ ಪರೀಕ್ಷೆ
Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್ ಕಿಶೋರ್ ಭವಿಷ್ಯ