KYC ಅಪ್ಡೇಟ್ ಹೆಸರಲ್ಲಿ 2.47 ಲಕ್ಷ ರೂ. ವಂಚನೆ
Team Udayavani, Jul 14, 2023, 5:12 AM IST
ಮಂಗಳೂರು: ಬ್ಯಾಂಕ್ ಖಾತೆಯ ಕೆವೈಸಿ ಅಪ್ಡೇಟ್ ಆಗದ ಕಾರಣ ಖಾತೆ ಸ್ಥಗಿತಗೊಳ್ಳಲಿದೆ ಎಂದು ನಂಬಿಸಿ ಹಂತ ಹಂತವಾಗಿ 2,74,749ರೂ. ವಂಚನೆ ಮಾಡಿರುವ ಕುರಿತಂತೆ ಬಗ್ಗೆ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೂರುದಾರರ ಖಾತೆಗೆ ಜು. 12ರಂದು ಅಪರಿಚಿತ ಸಂಖ್ಯೆಯಿಂದ ಕೆವೈಸಿ ಅಪ್ಡೆಟ್ಗೆ ಸಂಬಂಧಿಸಿದ ಮೆಸೇಜ್ ಬಂದಿದೆ. ಸ್ವಲ್ಪ ಸಮಯದ ಬಳಿಕ ಇನ್ನೊಂದು ಸಂಖ್ಯೆಯಿಂದ ಕರೆ ಬಂದಿದ್ದು, ತನ್ನನ್ನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ಕೆವೈಸಿ ಅಪ್ಡೇಟ್ ಮಾಡಬೇಕೆಂದು ಹೇಳಿ ನಂಬಿಸಿದನು. ಬಳಿಕ ಒಟಿಪಿಗಳನ್ನು ಪಡೆದು ಬ್ಯಾಂಕ್ ಖಾತೆಯಿಂದ ಹಂತ ಹಂತವಾಗಿ 2,74,749ರೂ. ಪಡೆದು ವಂಚಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.