ಉಕ್ಕಿ ಹರಿಯುತ್ತಿರುವ ಯಮುನೆ: ಸುಪ್ರೀಂ ಕೋರ್ಟ್, ರಾಜ್ ಘಾಟ್ ಗೂ ತಲುಪಿದ ಪ್ರವಾಹದ ನೀರು
Team Udayavani, Jul 14, 2023, 12:29 PM IST
ನವದೆಹಲಿ: ವರುಣನಾರ್ಭಟಕ್ಕೆ ರಾಷ್ಟ್ರ ರಾಜಧಾನಿ ತತ್ತರಿಸಿ ಹೋಗಿದ್ದು ಉಕ್ಕಿ ಹರಿಯುವ ಯಮುನಾ ನದಿ ಇನ್ನೂ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಪ್ರಮುಖ ನಗರಗಳು ಮುಳುಗಡೆಯಾಗಿದೆ. ಅಷ್ಟು ಮಾತ್ರವಲ್ಲದೆ ನೀರಿನ ಪ್ರಮಾಣ ಸುಪ್ರೀಂ ಕೋರ್ಟ್ ವರೆಗೂ ತಲುಪಿದೆ.
ಉಕ್ಕಿ ಹರಿಯುತ್ತಿರುವ ಯಮುನಾ ನದಿಯ ನೀರು ರಾಷ್ಟ್ರ ರಾಜಧಾನಿಯನ್ನು ಜಲಾವೃತಗೊಳಿಸಿದ್ದರಿಂದ ದೆಹಲಿ ಸರ್ಕಾರ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿದೆ.
ಒಂದು ದಿನದ ಹಿಂದೆಯಷ್ಟೇ ಐತಿಹಾಸಿಕ ಕೆಂಪುಕೋಟೆಗೂ ನುಗ್ಗಿದ ನೀರು ಇಂದು ನಗರದ ಮಧ್ಯಭಾಗದಲ್ಲಿರುವ ಸುಪ್ರೀಂ ಕೋರ್ಟ್, ಹಾಗೂ ರಾಜ್ ಘಾಟ್ ವರೆಗೂ ಬಂದುಬಿಟ್ಟಿದೆ.
ಬೆಳಿಗ್ಗೆ 6 ಗಂಟೆಗೆ ಯಮುನಾ ನೀರಿನ ಮಟ್ಟವು 208.46 ಮೀಟರ್ಗಳಷ್ಟಿತ್ತು, ಗುರುವಾರ ರಾತ್ರಿ 208.66 ಕ್ಕಿಂತ ಸ್ವಲ್ಪ ಕಡಿಮೆಯಾಗಿದೆ. ಇಂದು ನೀರಿನ ಮಟ್ಟ ಕುಸಿಯಲಿದ್ದು, ಮಧ್ಯಾಹ್ನ 1 ಗಂಟೆ ವೇಳೆಗೆ 208.30 ಮೀಟರ್ ತಲುಪಬಹುದು ಎಂದು ಕೇಂದ್ರ ಜಲ ಆಯೋಗ ಮುನ್ಸೂಚನೆ ನೀಡಿದೆ.
ಪ್ರವಾಹದ ನೀರಿನಿಂದ ಐಟಿಓ ಮತ್ತು ರಾಜ್ಘಾಟ್ನಲ್ಲಿರುವ ಪ್ರದೇಶಗಳು ಮುಳುಗಡೆಯಾಗಿದ್ದು. ಅಷ್ಟು ಮಾತ್ರವಲ್ಲದೆ ನಗರದ ಮಧ್ಯ ಭಾಗದಲ್ಲಿರುವ ತಿಲಕ್ ಮಾರ್ಗ್ ಪ್ರದೇಶದಲ್ಲಿರುವ ಸುಪ್ರಿಂ ಕೋರ್ಟ್ಗೂ ಪ್ರವಾಹದ ನೀರು ತಲುಪಿದೆ. ಕೂಡಲೇ ಸಮಸ್ಯೆಯನ್ನು ಬಗೆಹರಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸರಕಾರ ಸೂಚಿಸಿದೆ.
ರಾಷ್ಟ್ರ ರಾಜಧಾನಿಯ ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೂರಿದ್ದು ಜೊತೆಗೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.
ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಅವರು ಫ್ರಾನ್ಸ್ನಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ದೆಹಲಿಯ ಪ್ರವಾಹ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಚಂದ್ರಯಾನ-3 ಯೋಜನೆ ಯಾಕೆ? ಇದರಿಂದ ಭಾರತಕ್ಕೆ ಏನು ಲಾಭ? ಇಲ್ಲಿದೆ ಮಾಹಿತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunsur: ಬಿರುಗಾಳಿ ಮಳೆಗೆ ಹಾರಿಹೋದ ಮನೆ ಮೇಲ್ಚಾವಣಿ, ಬ್ಯಾರನ್ಗೂ ಹಾನಿ
ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್ ವಿದ್ಯಾರ್ಥಿಗಳು ದುರ್ಮರಣ
Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ
Sandalwood: ರಿಷಿ ಖುಷಿ!: ಅಕೌಂಟ್ಗೆ ಮತ್ತೊಂದು ಚಿತ್ರ ತ್ತೊ