Abu Dhabi ಐಐಟಿ ದೆಹಲಿ ಕ್ಯಾಂಪಸ್‌: ಪ್ರಧಾನಿ-ಯುಎಇ ಅಧ್ಯಕ್ಷರ ಸಮ್ಮುಖದಲ್ಲಿ ಒಪ್ಪಂದ


Team Udayavani, Jul 16, 2023, 7:25 AM IST

Abu Dhabi ಐಐಟಿ ದೆಹಲಿ ಕ್ಯಾಂಪಸ್‌: ಪ್ರಧಾನಿ-ಯುಎಇ ಅಧ್ಯಕ್ಷರ ಸಮ್ಮುಖದಲ್ಲಿ ಒಪ್ಪಂದ

ನವದೆಹಲಿ/ಅಬುಧಾಬಿ:ಇನ್ನು ಮುಂದೆ ಯುಎಇನಲ್ಲಿ ಇರುವ ಭಾರತೀಯರಿಗೆ ಮತ್ತು ಆ ದೇಶದ ನಾಗರಿಕರಿಗೆ ದೇಶದ ಪ್ರತಿಷ್ಠ ತಾಂತ್ರಿಕ ಸಂಸ್ಥೆ ಐಐಟಿ ಶಿಕ್ಷಣ ಪಡೆಯುವ ಅವಕಾಶ ಲಭ್ಯವಾಗಲಿದೆ. ಐಐಟಿ ದೆಹಲಿ ಅಬುಧಾಬಿಯಲ್ಲಿ ಕ್ಯಾಂಪಸ್‌ ಸ್ಥಾಪನೆ ಮಾಡುವ ಬಗ್ಗೆ ಕೇಂದ್ರ ಶಿಕ್ಷಣ ಸಚಿವಾಲಯ ಮತ್ತು ಯುಎಇಯ ಶಿಕ್ಷಣ ಮತ್ತು ಜ್ಞಾನ ವಿಭಾಗ (ಎಡಿಇಕೆ) ನಡುವೆ ಒಪ್ಪಂದಕ್ಕೆ ಶನಿವಾರ ಸಹಿ ಹಾಕಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಯುಎಇ ಪ್ರವಾಸದ ವೇಳೆ ಈ ಬಗ್ಗೆ ಅಲ್ಲಿನ ಅಧ್ಯಕ್ಷ ಶೇಖ್‌ ಮೊಹಮ್ಮದ್‌ ಬಿನ್‌ ಝಯೇದ್‌ ಅಲ್‌ ನಹ್ಯಾನ್‌ ಜತೆಗೆ ಮಾತುಕತೆ ನಡೆಸಿದ ಸಂದರ್ಭದಲ್ಲಿ ಈ ಅಂಶ ಪ್ರಸ್ತಾಪವಾಗಿದೆ. ಮುಂದಿನ ವರ್ಷದ ಜನವರಿಯಿಂದ ಸ್ನಾತಕೋತ್ತರ ಪದವಿ, ಮುಂದಿನ ವರ್ಷದ ಸೆಪ್ಟೆಂಬರ್‌ನಿಂದ ಪದವಿ ಕೋರ್ಸ್‌ಗಳು ಶುರುವಾಗಲಿವೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ “ದೇಶದ ಶಿಕ್ಷಣ ವ್ಯವಸ್ಥೆಯನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನ ಇದಾಗಿದೆ. ಪ್ರಧಾನಿಯವರ ಯುಎಇ ಪ್ರವಾಸದ ಅವಧಿಯಲ್ಲಿ ಐಐಟಿ ದೆಹಲಿಯ ಕ್ಯಾಂಪಸ್‌ ಅನ್ನು ಅಬುಧಾಬಿಯಲ್ಲಿಯಲ್ಲಿ ಆರಂಭಿಸಲು ಒಪ್ಪಂದಕ್ಕೆ ಬರಲಾಗಿದೆ. 2 ದೇಶಗಳ ಸ್ನೇಹ ಬಾಂಧವ್ಯಕ್ಕೆ ಇದು ದ್ಯೋತಕ. ಜಾಗತಿಕ ದೃಷ್ಟಿಕೋನದಲ್ಲಿರಾಷ್ಟ್ರೀಯ ಶಿಕ್ಷಣ ನೀತಿಯನ್ನೂ ಪರಿಚಯಿಸಲಾಗಿದೆ’ ಎಂದು ಬರೆದುಕೊಂಡಿದ್ದಾರೆ. ಕಳೆದ ವಾರ ಐಐಟಿ ಮದ್ರಾಸ್‌ ತಾಂಜೇನಿಯಾದ ಝಾಂಝಿಬಾರ್‌ನಲ್ಲಿ ಮೊದಲ ಕ್ಯಾಂಪಸ್‌ ಸ್ಥಾಪಿಸುವ ಬಗ್ಗೆ ಒಪ್ಪಂದ ಮಾಡಿಕೊಂಡಿತ್ತು.

ಪ್ರಧಾನಿ ಬೆಂಬಲ:
ಇದೇ ವೇಳೆ, ಯುಎಇ ಅಧ್ಯಕ್ಷತೆಯ ಹವಾಮಾನ ಬದಲಾವಣೆಯ ಶೃಂಗಕ್ಕೆ ಭಾರತದ ಬೆಂಬಲ ಇದೆ ಎಂದು ಪ್ರಧಾನಿ ಮೋದಿ ಅಧ್ಯಕ್ಷ ಶೇಖ್‌ ಮೊಹಮ್ಮದ್‌ಗೆ ತಿಳಿಸಿದ್ದಾರೆ.

ಪೂರ್ಣ ಸಸ್ಯಾಹಾರಿ ಭೋಜನ:
ಪ್ರಧಾನಿ ಮೋದಿಯವರ ಗೌರವಾರ್ಥ ಯುಎಇ ಸರ್ಕಾರ ಪೂರ್ಣ ಸಸ್ಯಾಹಾರದ ಭೋಜನ ಸಿದ್ಧಪಡಿಸಿತ್ತು. ಸಾವಯವ ಪದ್ಧತಿಯಲ್ಲಿ ಸ್ಥಳೀಯವಾಗಿ ಬೆಳೆದ ಹಣ್ಣುಗಳ ಜತೆಗೆ ಗೋಧಿ ಮತ್ತು ಖರ್ಜೂರದ ಸಲಾಡ್‌, ಗ್ರಿಲ್ಡ್‌ ವೆಜಿಟೆಬಲ್ಸ್‌ ವಿತ್‌ ಮಸಾಲಾ ಸಾಸ್‌ ಸೇರಿದಂತೆ ಹಲವು ಅತ್ಯುತ್ಕೃಷ್ಟ ತಿನಸುಗಳು ಊಟದ ಮೆನುವಿನಲ್ಲಿ ಉಲ್ಲೇಖವಿತ್ತು. ಪ್ರಧಾನಿಯವರಿಗಾಗಿ ವಿಶೇಷವಾಗಿ ಸಿದ್ಧಪಡಿಸಿದ ಅಡುಗೆ ಎಣ್ಣೆಯನ್ನು ಬಳಕೆ ಮಾಡಲಾಗಿತ್ತು.

 

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

Iran President

Iran ಅಧ್ಯಕ್ಷ ಮೃತ್ಯು; ಭಾರತದಾದ್ಯಂತ ಒಂದು ದಿನದ ಶೋಕಾಚರಣೆ

1-wqeqwewq

Goa:ಬೋಟ್ ನಲ್ಲಿ ಅಪಾಯಕ್ಕೆ ಸಿಲುಕಿದ್ದ 26 ಪ್ರವಾಸಿಗರ ರಕ್ಷಣೆ

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

Goa; ಪ್ರವಾಸಿ ತಾಣಗಳಲ್ಲಿ ಈಗ ದೇಶೀಯ ಪ್ರವಾಸಿಗರದ್ದೇ ಹವಾ!

1-weeqwe

Chhattisgarh; ಪಿಕಪ್ ವಾಹನ ಕಂದಕಕ್ಕೆ ಪಲ್ಟಿಯಾಗಿ 18 ಮಂದಿ ದಾರುಣ ಅಂತ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.