ಕನ್ನಡ, ಸಂಸ್ಕೃತಿ ಇಲಾಖೆಗೆ ಹೆಚ್ಚಿನ ಅನುದಾನ ಕೊಡಿ: ರವಿಕುಮಾರ್
Team Udayavani, Jul 18, 2023, 6:36 AM IST
ಬೆಂಗಳೂರು: ಸರಕಾರ ಮಂಡಿಸಿರುವ ಬಜೆಟ್ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದ್ದು, ಹೆಚ್ಚಿನ ಅನುದಾನ ನೀಡುವಂತೆ ಬಿಜೆಪಿಯ ಎನ್. ರವಿಕುಮಾರ್ ಆಗ್ರಹಿಸಿದ್ದಾರೆ.
ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾವಿಸಿದ ಅವರು, ಹೊಸ ಬಜೆಟ್ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಕೇವಲ 237 ಕೋಟಿ ರೂ. ಅನುದಾನ ಮೀಸಲಿಡುವ ಮೂಲಕ ಇಲಾಖೆಯನ್ನು ಸಂಪೂರ್ಣವಾಗಿ ಕಡೆಗಣಿಸಿರುವುದಕ್ಕೆ ನಾಡಿನ ಸಾಂಸ್ಕೃತಿಕ ವಲಯ ತೀವ್ರ ಅಸಮಾಧಾನಗೊಂಡಿದೆ. ನಾಡಿನ ಸಂಸ್ಕೃತಿ ಮತ್ತು ಭಾಷೆಯನ್ನು ಉಳಿಸಿ-ಬೆಳೆಸುವ ಮಹತ್ವದ ಪಾತ್ರ ವಹಿಸಿರುವ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯಾದ್ಯಂತ ಕಾರ್ಯ ನಿರ್ವಹಿಸಬೇಕಿದೆ. ಸರಕಾರ ನಿಗದಿಪಡಿಸಿರುವ ಅನುದಾನದಲ್ಲಿ ಅರ್ಧದಷ್ಟು ವೇತನ ಹಾಗೂ ಸಾರಿಗೆ ವೆಚ್ಚಕ್ಕೆ ಹೋಗುತ್ತದೆ. ಉಳಿದ ಅನುದಾನದಲ್ಲಿ ಇಲಾಖೆಯ ಕಾರ್ಯನಿರ್ವಹಣೆ ಹಾಗೂ ಪ್ರಮುಖ ಕಾರ್ಯಕ್ರಮಗಳ ಜಾರಿಗೆ ಹಣದ ಕೊರತೆ ಉಂಟಾಗಲಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಪ್ರದೇಶ ಗಡಿ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಪುಸ್ತಕ ಪ್ರಾಧಿಕಾರ, ಕುವೆಂಪು ಭಾಷಾ ಭಾರತಿ ಸಹಿತ ಕೆಲವು ಪ್ರಾಧಿಕಾರಗಳು. ಸಾಹಿತ್ಯ, ನಾಟಕ, ಸಂಗೀತ, ನೃತ್ಯ, ಜಾನಪದ, ಶಿಲ್ಪಕಲಾ, ತುಳು, ಲಲಿತಕಲಾ, ಯಕ್ಷಗಾನ, ಅರೆಭಾಷೆ, ಕೊಂಕಣಿ, ಕೊಡವ, ಬ್ಯಾರಿ, ಬಯಲಾಟ, ಲಂಬಾಣಿ ಭಾಷೆ ಸಹಿತ 14 ಅಕಾಡೆಮಿಗಳು, 24 ಪ್ರತಿಷ್ಠಾನಗಳು, 6 ರಂಗಾಯಣಗಳು ಹಾಗೂ 2 ಸಂಶೋಧನ ಕೇಂದ್ರಗಳನ್ನು ಇಲಾಖೆ ಹೊಂದಿದೆ. ಇದಲ್ಲದೆ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. 32 ಜಯಂತಿಗಳನ್ನು ನಡೆಸಲಾಗುತ್ತಿದೆ. ಹೀಗಾಗಿ ಹೆಚ್ಚಿನ ಅನುದಾನದ ಅಗತ್ಯವಿದೆ. 237 ಕೋಟಿ ರೂ. ಮೀಸಲಿಟ್ಟಿದ್ದು, ಅದರಲ್ಲಿ 120-130 ಕೋಟಿ ರೂ. ವೇತನ ಮತ್ತು ಸಾರಿಗೆ ವೆಚ್ಚಕ್ಕೆ ಖರ್ಚಾಗಲಿದೆ.
ಆದ್ದರಿಂದ ರಾಜ್ಯ ಸರಕಾರ ಮೀಸಲಿರಿಸಿದ ಅನುದಾನ ಯಾವುದಕ್ಕೂ ಸಾಕಾಗುವುದಿಲ್ಲ. ಹೆಚ್ಚಿನ ಅನುದಾನ ಕೊಟ್ಟು, ನಾಡು-ನುಡಿ, ಭಾಷೆ-ಸಾಹಿತ್ಯ ಮತ್ತು ಸಂಪ್ರದಾಯ ರಕ್ಷಣೆಗೆ ಮುಂದಾಗಬೇಕು ಎಂದು ರವಿಕುಮಾರ್ ಆಗ್ರಹಿಸಿದರು. ಇದಕ್ಕೆ ಸಂಬಂಧಪಟ್ಟ ಸಚಿವರಿಂದ ವಿವರವಾದ ಉತ್ತರ ಕೊಡಿಸುವುದಾಗಿ ಸಭಾನಾಯಕ ಎನ್.ಎಸ್. ಬೋಸರಾಜ್ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ
Sheep Farming: ಸಹಕಾರ ರಂಗಕ್ಕೂ ಸೈ… ಕೃಷಿ ರಂಗಕ್ಕೂ ಜೈ!
Mysore; ಒಂದು ವರ್ಷದಿಂದ ಪಾವತಿಸಿಲ್ಲ ಮೋದಿ ವಾಸ್ತವ್ಯ ಹೂಡಿದ್ದ ಹೋಟೆಲ್ ಕೊಠಡಿ ಬಾಡಿಗೆ!
King Cobra: ಅಡುಗೆ ಕೋಣೆಯಲ್ಲಿ ಅವಿತು ಕುಳಿತ ದೈತ್ಯ ಕಾಳಿಂಗ ಸರ್ಪ, ಬೆಚ್ಚಿಬಿದ್ದ ಮನೆ ಮಂದಿ
Falls: ಕಾಫಿನಾಡಿನಲ್ಲಿ ಧಾರಾಕಾರ ಮಳೆ… ಮೈದುಂಬಿ ಹರಿಯುತ್ತಿರೋ ಕಲ್ಲತ್ತಿಗಿರಿ ಜಲಪಾತ
MUST WATCH
ಹೊಸ ಸೇರ್ಪಡೆ
Davanagere; ಕಾಂಗ್ರೆಸ್ ಆಡಳಿತದಲ್ಲಿ ಶಿಕ್ಷಣ ಕ್ಷೇತ್ರ ಕಲುಷಿತಗೊಂಡಿದೆ: ಬಿ.ವೈ. ವಿಜಯೇಂದ್ರ
Mammootty: ಎರಡು ವಿಭಿನ್ನ ಕಾಲಘಟ್ಟದ ಸಿನೆಮಾದಲ್ಲಿ ನಟ ಮಮ್ಮೂಟಿ
Divorced? ಮುರಿದು ಬಿತ್ತಾ ಹಾರ್ದಿಕ್- ನತಾಶಾ ಸಂಬಂಧ? 70% ಆಸ್ತಿ ಕಳೆದುಕೊಳ್ತಾರಾ ಪಾಂಡ್ಯ?
Gundlupete: ಕಲ್ಲುಕಟ್ಟೆ ಜಲಾಶಯಕ್ಕೆ ಹಾರಿ ಯುವಕ ಆತ್ಮಹತ್ಯೆ
Traffic Signal: ಬದುಕು ರೂಪಿಸಿದ ಟ್ರಾಫಿಕ್ ಸಿಗ್ನಲ್ಗಳು