ಒಂದೇ ಚಿತ್ರದಲ್ಲಿ ಕರಾವಳಿಯ ‘RRR’: ರಕ್ಷಿತ್‌ ಶೆಟ್ಟಿಯದೇ ಕಥೆ: Raj B Shetty ಹೇಳಿದ್ದೇನು?


Team Udayavani, Jul 18, 2023, 5:46 PM IST

tdy-19

ಬೆಂಗಳೂರು: ಕನ್ನಡ ಸಿನಿಮಾದಲ್ಲಿ ʼಆರ್‌ ಆರ್‌ ಆರ್‌ʼ ಪ್ರತಿಭೆ ಅನೇಕರನ್ನು ಸೆಳೆದಿದೆ. ʼಆರ್‌ ಆರ್‌ ಆರ್‌ʼ ಅಂದರೆ ಜನಪ್ರಿಯ ಸಿನಿಮಾವಲ್ಲ.‌ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ ಮತ್ತು ರಾಜ್ ಬಿ ಶೆಟ್ಟಿ.

ಈ ಮೂವರ ಸಿನಿಮಾಗಳಿಗೆ ಪ್ರತ್ಯೇಕವಾದ ಫ್ಯಾನ್‌ ಬೇಸ್‌ ಗಳಿವೆ. ಮೂವರು ಅಪ್ಪಟ ಕರಾವಳಿ ಪ್ರತಿಭೆಯಾದರೂ ಕರಾವಳಿ ಆಚರಣೆಗಳ ಸುತ್ತ ಸಿನಿಮಾ ಮಾಡಿ ಪ್ಯಾನ್‌ ಇಂಡಿಯಾ ಮೆಚ್ಚವಂತೆ ಮಾಡಿದ್ದಾರೆ. ʼಕಾಂತಾರಾʼ ʼ777ಚಾರ್ಲಿʼ ಹಾಗೂ ʼ ಗರುಡ ಗಮನ ವೃಷಭ ವಾಹನʼ ಈ ಮೂರು ಸಿನಿಮಾಗಳು ಸಿನಿಮಾರಂಗದಲ್ಲಿ ಕಮಾಲ್‌ ಮಾಡಿರುವುದು ಗೊತ್ತೇ ಇದೆ.

ರಕ್ಷಿತ್‌ ಶೆಟ್ಟಿ ಹಾಗೂ ರಿಷಬ್‌ ಶೆಟ್ಟಿ “ತುಘ್ಲಕ್”, “ಉಳಿದವರು ಕಂಡಂತೆ”, “ಕಿರಿಕ್ ಪಾರ್ಟಿ”, “ರಿಕ್ಕಿ” ಮತ್ತು “ಅವನೇ ಶ್ರೀಮನ್ನಾರಾಯಣ” ಸಿನಿಮಾದಲ್ಲಿ ಜೊತೆಯಾಗಿ ಕೆಲಸ ಮಾಡಿದ್ದಾರೆ. ಇನ್ನು ರಿಷಬ್ ಅವರು “ಗರುಡ ಗಮನ ವೃಷಭ ವಾಹನ” ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ರಾಜ್‌ ಬಿ ಶೆಟ್ಟಿ ಅವರೊಂದಿಗೆ ನಟಿಸಿದ್ದಾರೆ. ರಾಜ್‌ ಬಿ ಶೆಟ್ಟಿ ರಿಷಬ್‌ ಅವರ ʼಕಾಂತಾರʼ ಸಿನಿಮಾದ ಭೂತಕೋಲವನ್ನು ಸಂಯೋಜನೆ ಮಾಡಿದ್ದರು. ಇದರೊಂದಿಗೆ ರಾಜ್‌ ಬಿ ಶೆಟ್ಟಿ ರಕ್ಷಿತ್ ಶೆಟ್ಟಿ ಅವರ “777 ಚಾರ್ಲಿ” ಕೆಲ ಭಾಗಗಳನ್ನು ಬರೆದಿದ್ದಾರೆ. ಅದೇ ಚಿತ್ರದಲ್ಲಿ ಒಂದು ಪಾತ್ರವನ್ನೂ ಮಾಡಿದ್ದಾರೆ.

ಇತ್ತೀಚೆಗೆ ರಿಷಬ್‌ ಶೆಟ್ಟಿ ಹಾಗೂ ರಕ್ಷಿತ್‌ ಶೆಟ್ಟಿ ಒಂದೇ ತಟ್ಟೆಯಲ್ಲಿ ಊಟ ಮಾಡಿದ್ದು ವೈರಲ್ ಆಗಿತ್ತು. ಪರಸ್ಪರರ ಚಿತ್ರದಲ್ಲಿ ರಕ್ಷಿತ್‌, ರಿಷಬ್‌ ಹಾಗೂ ರಾಜ್ ಬಿ ಶೆಟ್ಟಿ ಕೆಲಸ ಮಾಡಿದ್ದಾರೆ. ಆದರೆ ಮೂವರು ಜೊತೆಯಾಗಿ ಯಾವುದೇ ಚಿತ್ರದಲ್ಲಿ ಕಾಣಿಸಿಕೊಂಡಿಲ್ಲ.

ʼಟೋಬಿʼ ಸಿನಿಮಾದ ಪ್ರಚಾರದಲ್ಲಿ ಬ್ಯುಸಿಯಾಗಿರುವ ರಾಜ್‌ ಬಿ ಶೆಟ್ಟಿ ಈ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ.

“ರಕ್ಷಿತ್‌ ನಮ್ಮ ಮೂವರಿಗಾಗಿ ಒಂದು ಕಥೆ ಬರೆದಿದ್ದಾರೆ. ಅದು ಪೂರ್ಣಗೊಂಡರೆ ನಾವು ಮೂವರು ಆ ಕಥೆಯಲ್ಲಿರುತ್ತೇವೆ. ಆದರೆ ಕೆಲವೊಂದು ಕಾರಣಗಳಿಂದಾಗಿ ಆ ಯೋಜನೆ ಸದ್ಯಕ್ಕೆ ನಿಂತಿದೆ. ಎಲ್ಲವೂ ಹೊಂದಾಣಿಕೆಯಾದರೆ ಪ್ರೇಕ್ಷಕರು ನಮ್ಮನ್ನು ಒಟ್ಟಿಗೆ ದೊಡ್ಡ ಪರೆದಯಲ್ಲಿ ನೋಡಬಹುದು” ಎಂದು ಹೇಳಿರುವುದಾಗಿ “ಓಟಿಟಿ ಪ್ಲೇ”  ವರದಿ ತಿಳಿಸಿದೆ.

ಸದ್ಯ ಬಾಸಿಲ್‌ ನಿರ್ದೇಶನದ ʼಟೋಬಿʼ ಸಿನಿಮಾದ ಪ್ರಚಾರ ಭರದಿಂದ ಸಾಗುತ್ತಿದ್ದು, ಸಿನಿಮಾದ ಪೋಸ್ಟರ್‌, ಫಸ್ಟ್‌ ಲುಕ್‌ ಸಿಕ್ಕಾಪಟ್ಟೆ ಹೈಪ್‌ ಕ್ರಿಯೇಟ್‌ ಮಾಡಿದೆ. ಆಗಸ್ಟ್‌ 25 ರಂದು ಸಿನಿಮಾ ತೆರೆಗೆ ಬರಲಿದೆ. ಕೆವಿಎನ್ ಪ್ರೊಡಕ್ಷನ್ಸ್ ಕರ್ನಾಟಕದಲ್ಲಿ ಚಿತ್ರವನ್ನು ಪ್ರಸ್ತುತ ಹಾಗೂ ವಿತರಣೆಯನ್ನು ಮಾಡಲಿದೆ.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

sambhavami yuge yuge kannada movie

Kannada Cinema; ರಿಲೀಸ್‌ ಅಖಾಡಕ್ಕೆ ಸಂಭವಾಮಿ ಯುಗೇ ಯುಗೇ..

Rachana Rai is the heroine of Darshan’s film Devil

Devil; ದರ್ಶನ್ ಚಿತ್ರಕ್ಕೆ ನಾಯಕಿಯಾದ ಕರಾವಳಿ ಬೆಡಗಿ

Vikasa parva Kannada movie

Kannada Movie; ಸೆನ್ಸಾರ್ ಪಾಸಾದ ‘ವಿಕಾಸ ಪರ್ವ’

Biography of Mother Teresa in web series

Mother Teresa; ವೆಬ್‌ ಸೀರೀಸ್‌ನಲ್ಲಿ ಮದರ್‌ ತೆರೇಸಾ ಜೀವನ ಚರಿತ್ರೆ

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

Re Release; ಭರ್ಜರಿ ಓಪನಿಂಗ್‌ ಪಡೆದ ಉಪ್ಪಿ ‘ಎ’

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-fff

Geneva Open ಟೆನಿಸ್‌: ಸುಮಿತ್‌ಗೆ ಸೋಲು

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.