ಬರಗಾಲ ಘೋಷಣೆ ಮಾರ್ಗಸೂಚಿ ಬದಲಾವಣೆ ಅತ್ಯಗತ್ಯ


Team Udayavani, Jul 22, 2023, 5:26 AM IST

DROUGHT 2

ರಾಜ್ಯದ ಬಹುತೇಕ ಭಾಗಗಳಲ್ಲಿ ಮುಂಗಾರು ಕೈಕೊಟ್ಟಿದ್ದು, ಇನ್ನೂ ಸರಿಯಾಗಿ ಮಳೆ ಬಂದಿಲ್ಲ. ಇತ್ತೀಚಿಗೆ ಮಹಾರಾಷ್ಟ್ರದಲ್ಲಿ ಮಳೆಯಾಗುತ್ತಿರುವುದರಿಂದ ಬೆಳಗಾವಿ ಸಹಿತ ಸುತ್ತಮುತ್ತಲ ಜಿಲ್ಲೆಗಳಲ್ಲಿ ಒಂದಷ್ಟು ಮಳೆ ಮತ್ತು ಪ್ರವಾಹ ಕಾಣಿಸಿಕೊಂಡಿದೆ. ಒಂದಷ್ಟು ದಿನಗಳ ಹಿಂದೆ ಕರಾವಳಿಯಲ್ಲಿ ಭರ್ಜರಿಯಾಗಿಯೇ ಸುರಿದಿದ್ದ ಮಳೆ ಮತ್ತೆ ಕಾಣಿಸಿಕೊಳ್ಳುತ್ತಿಲ್ಲ. ಈಗ ಅಲ್ಲಿಯೂ ಕಣ್ಣಾಮುಚ್ಚಾಲೆಯಾಡುತ್ತಿದೆ.

ಮುಂಗಾರು ಮಳೆಯ ಈ ಕಣ್ಣಾಮುಚ್ಚಾಲೆಯಿಂದಾಗಿ ರಾಜ್ಯದ ರೈತಾಪಿ ಜನ ಸಂಕಷ್ಟಕ್ಕೀಡಾಗಿದ್ದಾರೆ. ಅಲ್ಲದೆ ಇದು ಜುಲೈ ತಿಂಗಳ ಅಂತ್ಯದ ಸಮೀಪಕ್ಕೆ ಬಂದಿದ್ದು ಇನ್ನೂ ಬಹಳಷ್ಟು ಪ್ರದೇಶದಲ್ಲಿ ಸರಿಯಾಗಿ ಬಿತ್ತನೆಯೂ ಆಗಿಲ್ಲ. ಈ ವಾರದ ಆರಂಭದಲ್ಲಿನ ವರದಿ ಪ್ರಕಾರ ಬೆಳಗಾವಿ, ಚಿತ್ರದುರ್ಗ, ಶಿವಮೊಗ್ಗ, ಬಳ್ಳಾರಿ, ಗದಗ, ಉತ್ತರ ಕನ್ನಡ, ಹಾವೇರಿ, ಬಾಗಲಕೋಟೆ, ವಿಜಯನಗರ, ಮಂಡ್ಯ, ಚಿಕ್ಕಬಳ್ಳಾಪುರ ಸಹಿತ ಹಲವಾರು ಜಿಲ್ಲೆಗಳಲ್ಲಿ ಮಳೆ ಕೊರತೆ ಸಮಸ್ಯೆ ಇದೆ. ಕೆಲವೆಡೆ ಈಗಾಗಲೇ ಬಿತ್ತನೆಯಾಗಿ ಮಳೆಗಾಗಿ ರೈತ ಕಾಯುತ್ತಿದ್ದಾನೆ. ಇನ್ನೂ ಕೆಲವು ದಿನ ಮಳೆ ಬಾರದೇ ಹೋದರೆ, ಬೆಳೆ ಒಣಗುವ ಆತಂಕ ಎದುರಾಗಿದೆ.

ಅಂದರೆ ಬೆಳಗಾವಿಯಲ್ಲಿ ಶೇ.50 ಕೊರತೆ, ಚಿತ್ರದುರ್ಗದಲ್ಲಿ ಶೇ.13, ಶಿವಮೊಗ್ಗದಲ್ಲಿ ಶೇ.48, ಗದಗ ಶೇ.36, ಹಾವೇರಿ ಶೇ.59ರಷ್ಟು ಮಳೆ ಕೊರತೆಯಾಗಿದೆ. ಆದರೆ ಮಳೆ ಕೊರತೆ ಕಾಡುತ್ತಿರುವ ಜಿಲ್ಲೆಗಳ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸುವ ಸಂಬಂಧ ಕೆಲವೊಂದು ನಿಯಮಗಳು ಅಡ್ಡಿಯಾಗಿವೆ. ಈ ಸಂಬಂಧ ಕೇಂದ್ರ ಸರಕಾರಕ್ಕೆ ಪತ್ರ ಬರೆಯುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.

ಅಧಿವೇಶನದಲ್ಲಿಯೇ ಈ ಸಂಬಂಧ ಕೃಷ್ಣ ಬೈರೇಗೌಡರು ಪ್ರಸ್ತಾವಿಸಿದ್ದು, ಕೇಂದ್ರದ ನಿಯಮಗಳಿಂದಾಗಿರುವ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ. ಅಂದರೆ ಕೇಂದ್ರ ಸರಕಾರದ ಬರ ಕೈಪಿಡಿ 2016ರ ಅನ್ವಯ ಬರ ಪೀಡಿತ ಘೋಷಣೆಗೆ ಕೇವಲ ಮಳೆ ಕೊರತೆಯಷ್ಟೆ ಮಾನದಂಡವಾಗು ವುದಿಲ್ಲ. ಹಾಗೆಯೇ ರಾಜ್ಯ ಸರಕಾರಕ್ಕೆ ಬರಪೀಡಿತ ತಾಲೂಕುಗಳಿಗೆ ಹೆಚ್ಚಿನ ಪರಿಹಾರ ಒದಗಿಸಲು ಆಗುತ್ತಿಲ್ಲ ಎಂದು ಹೇಳಿದ್ದಾರೆ.

2016ರಲ್ಲಿ ಕೇಂದ್ರ ಸರಕಾರ ಒಂದು ಮಾರ್ಗಸೂಚಿ ತಂದಿದ್ದು, ಇದು ಕಠಿನವಾಗಿದೆ. ಇದಕ್ಕಿಂತ ಹಿಂದೆ ಇದ್ದ ಮಾರ್ಗಸೂಚಿಗಳಲ್ಲಿ ರಾಜ್ಯ ಸರಕಾರವೇ ಕೆಲವೊಂದು ಮಾರ್ಪಾಡುಗಳನ್ನು ಮಾಡಿಕೊಂಡು ಬರಪೀಡಿತ ಎಂದು ಘೋಷಿಸಬಹುದಾಗಿತ್ತು. ಆದರೆ ಈಗಿನ ನಿಯಮದಂತೆ ಶೇ.60ರಷ್ಟು ಮಳೆ ಕೊರತೆಯಾಗಿರಬೇಕು ಮತ್ತು ಹಿಂದಿನ ಮೂರು ವಾರಗಳ ಕಾಲ ಮಳೆ ಬಂದಿರಲೇಬಾರದು.

ಈ ನಿಯಮಗಳಿಂದಾಗಿ ನಾವು ಯಾವುದೇ ತಾಲೂಕನ್ನು ಬರಪೀಡಿತ ಎಂದು ಘೋಷಿಸಲು ಆಗುವುದಿಲ್ಲ ಎಂದಿರುವ ಕೃಷ್ಣ ಬೈರೇಗೌಡರು ಈ ಸಂಬಂಧ ಕೇಂದ್ರ ಸರಕಾರಕ್ಕೆ ಪತ್ರ ಬರೆದು ಬದಲಾವಣೆ ಮಾಡುವಂತೆ ಕೋರಿಕೊಳ್ಳುವುದಾಗಿ ತಿಳಿಸಿದ್ದಾರೆ. ರೈತರ ಹಿತದೃಷ್ಟಿಯಿಂದ ಹೇಳುವುದಾದರೆ ಇದು ರಾಜ್ಯ ಸರಕಾರದ ಉತ್ತಮ ನಡೆಯಾಗಿದೆ.

ಅತೀ ಶೀಘ್ರದಲ್ಲಿ ಕೇಂದ್ರಕ್ಕೆ ಈ ಸಂಬಂಧ ಪತ್ರ ಬರೆಯಲಿ. ಅಲ್ಲದೆ ರಾಜ್ಯದ ಸಂಸದರು ಮತ್ತು ರಾಜ್ಯದಿಂದ ಆಯ್ಕೆಯಾಗಿ ಕೇಂದ್ರದಲ್ಲಿ ಸಚಿವರಾಗಿರುವವರು ಈ ಸಂಬಂಧ ಗಮನ ಹರಿಸಬೇಕು. ಈಗಾಗಲೇ ಮಳೆ ಕೊರತೆ ಕಾರಣದಿಂದಾಗಿ ಸಮಸ್ಯೆಗೆ ಸಿಲುಕಿರುವ ರೈತಾಪಿ ವರ್ಗಕ್ಕೆ ಇದರಿಂದ ಕಿಂಚಿತ್ತಾದರೂ ಅನುಕೂಲವಾಗುತ್ತದೆ. ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಗಮನಹರಿಸಲಿ.

ಟಾಪ್ ನ್ಯೂಸ್

akhilesh

Kyoto wale ಸೀಟ್ ಸೇರಿ ಯುಪಿಯ ಎಲ್ಲಾ ಕಡೆ ಬಿಜೆಪಿಗೆ ಸೋಲು: ಅಖಿಲೇಶ್

Kaamya Karthikeyan

Kaamya; ನೇಪಾಳ ಭಾಗದಿಂದ ಮೌಂಟ್ ಎವರೆಸ್ಟ್ ಏರಿದ ಕಿರಿಯ ಭಾರತೀಯ ಎಂಬ ಸಾಧನೆ ಮಾಡಿ 16ರ ಬಾಲಕಿ

2

STAR ಸಿನಿಮಾಗಳು ರಿಲೀಸ್‌ಗೆ ರೆಡಿ.. ದ್ವಿತೀಯಾರ್ಧದಲ್ಲಿ ಪುಟಿದೇಳುವುದೇ ಸ್ಯಾಂಡಲ್‌ ವುಡ್?

1-asasa

Bengaluru ನಗರದ ರಸ್ತೆಗಳಲ್ಲಿ 5500 ಗುಂಡಿಗಳು!: ಕೂಡಲೇ ಮುಚ್ಚುವಂತೆ ಆದೇಶ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

Dombivli: ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಭೀಕರ ಸ್ಫೋಟ, ಭಾರೀ ಅಗ್ನಿ ಅವಘಡ

HDD LARGE

Warning!; ತಾಳ್ಮೆ ಪರೀಕ್ಷಿಸಬೇಡ..ಎಲ್ಲಿದ್ದರೂ ಬಾ: ಪ್ರಜ್ವಲ್ ಗೆ ದೇವೇಗೌಡರ ವಾರ್ನಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Polluted Water: ಕಲುಷಿತ ನೀರಿನ ಸಮಸ್ಯೆಗೆ ಸರಕಾರ ಅಂತ್ಯ ಹಾಡಲಿ

Polluted Water: ಕಲುಷಿತ ನೀರಿನ ಸಮಸ್ಯೆಗೆ ಸರಕಾರ ಅಂತ್ಯ ಹಾಡಲಿ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

ಪಿಒಕೆ

Editorial; ಪಿಒಕೆ: ಭುಗಿಲೆದ್ದ ಜನಾಕ್ರೋಶ ಇಕ್ಕಟ್ಟಿಗೆ ಸಿಲುಕಿದ ಪಾಕಿಸ್ಥಾನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

‘ಅನರ್ಥ’ ನಂಬಿ ಬಂದ ಹೊಸಬರು; ಹಾಡು-ಟೀಸರ್‌ ರಿಲೀಸ್‌

‘ಅನರ್ಥ’ ನಂಬಿ ಬಂದ ಹೊಸಬರು; ಹಾಡು-ಟೀಸರ್‌ ರಿಲೀಸ್‌

ಮಜೀರ್ಪಳ್ಳ ನಿವಾಸಿ ನಿಗೂಢ ಸಾವು: ದಫನಗೈದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ

ಮಜೀರ್ಪಳ್ಳ ನಿವಾಸಿ ನಿಗೂಢ ಸಾವು: ದಫನಗೈದ ಮೃತದೇಹ ಹೊರತೆಗೆದು ಮರಣೋತ್ತರ ಪರೀಕ್ಷೆ

akhilesh

Kyoto wale ಸೀಟ್ ಸೇರಿ ಯುಪಿಯ ಎಲ್ಲಾ ಕಡೆ ಬಿಜೆಪಿಗೆ ಸೋಲು: ಅಖಿಲೇಶ್

Kaamya Karthikeyan

Kaamya; ನೇಪಾಳ ಭಾಗದಿಂದ ಮೌಂಟ್ ಎವರೆಸ್ಟ್ ಏರಿದ ಕಿರಿಯ ಭಾರತೀಯ ಎಂಬ ಸಾಧನೆ ಮಾಡಿ 16ರ ಬಾಲಕಿ

3

Kasaragod: ಹೊಸದುರ್ಗ; ಟ್ಯಾಂಕರ್‌ನಿಂದ ಅನಿಲ ಸೋರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.