ಪ್ರವಾಸಿ ತಾಣಗಳಲ್ಲಿ ಜವಾಬ್ದಾರಿಯುತ ವರ್ತನೆ ಇರಲಿ


Team Udayavani, Jul 26, 2023, 5:06 AM IST

SCENERY

ರಾಜ್ಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಬಹುತೇಕ ಜಲಾಶಯಗಳು, ಜಲಪಾತಗಳು, ನದಿಗಳು ಉಕ್ಕಿ ಹರಿಯುತ್ತಿವೆ. ಅದರಲ್ಲೂ ಮಲೆನಾಡಿನ ಸೆರಗಿನಲ್ಲಿರುವ ಕರಾವಳಿ ಭಾಗದ ಪಶ್ಚಿಮ ಘಟ್ಟದಲ್ಲಿ ಪ್ರಕೃತಿ ಸೌಂದರ್ಯ ಮತ್ತಷ್ಟು ಹೆಚ್ಚಾಗಿದ್ದು, ಮಳೆಯ ನಡುವೆಯೂ ಪ್ರವಾಸಿಗರು ದಾಂಗುಡಿ ಇಡುತ್ತಿದ್ದಾರೆ. ಆದರೆ ಕೆಲವೊಂದು ಪ್ರದೇಶಗಳಲ್ಲಿ ಪ್ರವಾಸಿಗರ ಅತಿರೇಕದ ವರ್ತನೆಯಿಂದಾಗಿ ಸಾವು ಸಂಭವಿಸುತ್ತಿದ್ದು, ಬೇಜವಾಬ್ದಾರಿ ವರ್ತನೆಗೆ ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ.

ಜು.23ರಂದು ಕರಾವಳಿಯ ಕೊಲ್ಲೂರು ಸಮೀಪ ಜಲಪಾತವೊಂದರ ಬಳಿಯಲ್ಲಿ ಭದ್ರಾವತಿಯ ಯುವಕನೊಬ್ಬ ಕಾಲುಜಾರಿ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಜತೆಗೆ ಇದ್ದ ಆತನ ಸ್ನೇಹಿತನೇ ಈ ದೃಶ್ಯವನ್ನು ವೀಡಿಯೋ ಮಾಡಿದ್ದು ವೈರಲ್‌ ಆಗಿದೆ. ಈ ಸಂದರ್ಭದಲ್ಲಿ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಅನುಸರಿಸಬೇಕಾದ ಕನಿಷ್ಠ ನಿಯಮಗಳ ಬಗ್ಗೆ ಚರ್ಚೆಯಾಗುತ್ತಿದೆ. ಏಕೆಂದರೆ ಆ ಯುವಕ ಒಂಚೂರು ಎಚ್ಚರಿಕೆ ವಹಿಸಿದ್ದರೂ ಕಾಲು ಜಾರಿ ಬೀಳುತ್ತಿರಲಿಲ್ಲ. ಅಲ್ಲದೆ ಅಷ್ಟು ಮುಂದಕ್ಕೆ ಹೋಗಿ ನಿಲ್ಲುವ ಅಗತ್ಯವೂ ಇರಲಿಲ್ಲ.

ಹಾಗೆಯೇ ಮುಂಬಯಿಯ ಬೀಚ್‌ನ ಬಂಡೆಯೊಂದರ ಮೇಲೆ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿದ್ದ ಜೋಡಿಯೊಂದಕ್ಕೂ ನೀರಿನ ಅಲೆ ಪೆಟ್ಟು ನೀಡಿತ್ತು. ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಬಂದ ಭಾರೀ ಅಲೆಗೆ ಪತ್ನಿ ಕೊಚ್ಚಿ ಹೋಗಿದ್ದಳು. ಅಲ್ಲದೆ ಹಿಂದೆಯೇ ಇದ್ದ ಮಕ್ಕಳು ಈ ಘಟನೆಗೆ ಸಾಕ್ಷಿಯಾಗಿ ಕಣ್ಣೆದುರಲ್ಲೇ ತಮ್ಮ ಅಮ್ಮನ ಕಳೆದುಕೊಂಡಿದ್ದರು. ಈ ಘಟನೆ ಜೂನ್‌ 9ರಂದು ನಡೆದಿದ್ದು, ಕಳೆದ ವಾರವಷ್ಟೇ ವೀಡಿಯೋ ಬಹಿರಂಗವಾಗಿ ವೈರಲ್‌ ಆಗಿತ್ತು.

ಅಷ್ಟೇ ಅಲ್ಲ ಎಲ್ಲಕ್ಕಿಂತ ಪ್ರಮುಖವಾಗಿ ಬೆಳಗಾವಿ ಬಳಿ ಇರುವ ದೂಧ್‌ಸಾಗರ ಜಲಾಶಯದ ಬಳಿ ಬರಬೇಡಿ. ಸದ್ಯ ಭಾರೀ ಮಳೆಯಾಗುತ್ತಿರುವುದರಿಂದ ಅಪಾಯದ ಸ್ಥಿತಿ ಇದೆ ಎಂದು ಅಧಿಕಾರಿಗಳು ಹೇಳಿದ್ದರೂ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಹೋಗಿದ್ದರು. ಈ ಸಂದರ್ಭದಲ್ಲಿ ಕೆಲವರನ್ನು ಅಧಿಕಾರಿಗಳು ಬಸ್ಕಿ ಹೊಡೆಸಿ ಶಿಕ್ಷೆ ನೀಡಿ ವಾಪಸ್‌ ಕಳುಹಿಸಿದ್ದರು. ಮಳೆಗಾಲದಲ್ಲಿ ಅಪಾಯದ ಎಚ್ಚರಿಕೆ ನೀಡಿದರೂ, ಅದನ್ನು ಕಡೆಗಣಿಸಿ ಅಂಥ ಸ್ಥಳಗಳಿಗೆ ಹೋಗುವ ಅಪಾಯವನ್ನು ಪ್ರವಾಸಿಗರು ಮೈಮೇಲೆ ಎಳೆದುಕೊಳ್ಳದಿರುವುದು ವಾಸಿ.

ಇವು ಕೆಲವೇ ಕೆಲವು ಉದಾಹರಣೆಗಳಷ್ಟೇ. ಪ್ರತೀ ಬಾರಿಯ ಮಳೆಗಾಲದಲ್ಲೂ ಇಂಥ ಘಟನೆಗಳು ಮರುಕಳಿಸುತ್ತಲೇ ಇರುತ್ತವೆ. ತುಂಬಿ ಹರಿಯುವ ಸೇತುವೆಗಳ ಮೇಲೆ ಬೈಕ್‌ ಮತ್ತು ಕಾರುಗಳಲ್ಲಿ ಪ್ರಯಾಣ ಮಾಡಲು ಯತ್ನಿಸುವುದು ಅಷ್ಟೇ ಅಲ್ಲ, ಬಸ್‌ಗಳನ್ನೇ ತೆಗೆದುಕೊಂಡು ಹೋಗಿ ಅದರಲ್ಲಿರುವ ಜನರನ್ನು ಅಪಾಯಕ್ಕೆ ತಳ್ಳುವಂಥ ಘಟನೆಗಳು ಕಾಣಸಿಗುತ್ತಿವೆ. ಜೋರಾಗಿ ಹರಿಯುವ ನೀರಿನ ಮುಂದೆ ಶಕ್ತಿ ಪ್ರದರ್ಶನ ಮಾಡುವ ಇಂಥ ಹುಡುಗಾಟಿಕೆಗಳನ್ನು ಕೈಬಿಡದಿದ್ದರೆ ಜೀವಕ್ಕೆ ಅಪಾಯ ಎಂಬುದನ್ನು ಮನಗಾಣಬೇಕು.

ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಕೇವಲ ಸಣ್ಣ ಪುಟ್ಟ ಹುಡುಗರು, ಕಾಲೇಜಿನ ಯುವಕರೇ ಗುಂಪುಕಟ್ಟಿಕೊಂಡು ಪ್ರವಾಸ ಹೋಗುತ್ತಾರೆ. ಇಂಥವರಿಗೂ ಪ್ರವಾಸಿ ತಾಣಗಳಲ್ಲಿ ಅನುಸರಿಸಬೇಕಾದ ಕನಿಷ್ಠ ನಿಯಮಗಳ ಬಗ್ಗೆ ಅರಿವು ಮೂಡಿಸಬೇಕು. ಒಂದು ಸಣ್ಣ ತಪ್ಪು ನಡೆ ಜೀವಕ್ಕೆ ಎರವಾದೀತು ಎಂಬುದನ್ನು ಎಲ್ಲರೂ ಮನಗಂಡು ಜವಾಬ್ದಾರಿಯಿಂದ ವರ್ತಿಸಬೇಕು. ಸರಕಾರವೂ ಈ ನಿಟ್ಟಿನಲ್ಲಿ ಪ್ರವಾಸಿ ತಾಣಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ರೂಪಿಸಬೇಕು.

ಟಾಪ್ ನ್ಯೂಸ್

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

Solo ಎಲ್ಲ ಸೋಲೇ ಇಲ್ಲ… ಒಬ್ಬಂಟಿ ಯಾತ್ರಿಕರ ‌ಡೈರಿ

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

T20 World Cup 2024: ಬಾಂಗ್ಲಾ ವಿರುದ್ಧದ ಅಭ್ಯಾಸ ಪಂದ್ಯಕ್ಕಿಲ್ಲ ವಿರಾಟ್-ಹಾರ್ದಿಕ್

6-vitla

Vitla: ಬೀಗ ಹಾಕಿದ್ದ ಮನೆಯಲ್ಲಿ ಕಳ್ಳರ ಕರಾಮತ್ತು; ಡಿ.ವಿ.ಆರ್ ಕೂಡಾ ಕದ್ದೊಯ್ದರು

rajnath singh

Indian Constitution ಪೀಠಿಕೆಯನ್ನು ಬದಲಾವಣೆ ಮಾಡಿದ್ದು ಕಾಂಗ್ರೆಸ್: ರಾಜನಾಥ್ ಸಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Farmer

842 ರೈತರ ಆತ್ಮಹತ್ಯೆ; ಮನೋಸ್ಥೈರ್ಯ ತುಂಬುವ ಕಾರ್ಯವಾಗಲಿ

Polluted Water: ಕಲುಷಿತ ನೀರಿನ ಸಮಸ್ಯೆಗೆ ಸರಕಾರ ಅಂತ್ಯ ಹಾಡಲಿ

Polluted Water: ಕಲುಷಿತ ನೀರಿನ ಸಮಸ್ಯೆಗೆ ಸರಕಾರ ಅಂತ್ಯ ಹಾಡಲಿ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

Editorial; ಶೈಕ್ಷಣಿಕ ಗೊಂದಲಗಳಿಗೆ ಬೇಕಿದೆ ತುರ್ತು ಪರಿಹಾರ

2

ಎಸ್‌ಎಸ್‌ಎಲ್‌ಸಿ ಗ್ರೇಸ್‌ ಮಾರ್ಕ್ಸ್ ರದ್ದು: ಪ್ರತಿಭಾವಂತರ ಶ್ರಮಕ್ಕೆ ಮನ್ನಣೆ 

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

Editorial; ರೈತರಿಗೆ ಸಕಾಲದಲ್ಲಿ ಹೊಸ ಸಾಲ ಸರಕಾರ ತುರ್ತಾಗಿ ಸ್ಪಂದಿಸಲಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

8-chikkodi

ರಾಜ್ಯಕ್ಕೆ ಬರುತ್ತಿದ್ದ ನೀರನ್ನು ತಡೆ ಹಿಡಿದ ಮಹಾ ಸರ್ಕಾರದ ಕ್ರಮಕ್ಕೆ ರೈತರು ಆಕ್ರೋಶ

12

Jackfruit: ಹಲಸಿನ ಹಣ್ಣಿನ ಬೆಲೆ ದುಬಾರಿ, ರೈತರ ಸಂತಸ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Chikkaballapur: ಇಳುವರಿ ಕುಸಿತ; ಮಾವಿಗೆ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.