ಮಣಿಪುರ: ಎರಡು ಬಸ್ಗಳಿಗೆ ಬೆಂಕಿ
Team Udayavani, Jul 27, 2023, 7:23 AM IST
ಇಂಫಾಲ: ಮಣಿಪುರದ ಕಾಂಗ್ಪೋಗ್ಪಿ ಜಿಲ್ಲೆಯ ಸಪೋರ್ಮಿನಾದಲ್ಲಿ ಭದ್ರತಾ ಪಡೆಗಳ ಎರಡು ಬಸ್ಗಳನ್ನು ಉದ್ರಿಕ್ತರ ಗುಂಪು ಸುಟ್ಟು ಹಾಕಿವೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ದಿಮಾಪುರದಿಂದ ಭದ್ರತಾ ಪಡೆಗಳ ಬಸ್ಗಳು ತೆರಳುತ್ತಿದ್ದಾಗ ಸಪೋರ್ಮಿನಾದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ.
“ಒಂದು ಸಮುದಾಯಕ್ಕೆ ಸೇರಿದ ಗುಂಪಿನವರು ಸೇನೆಯ ಬಸ್ಗಳನ್ನು ತಡೆದರು. ಅಲ್ಲದೇ ಬೇರೆ ಸಮುದಾಯದವರು ಬಸ್ನಲ್ಲಿ ಇದ್ದಾರೆಯೇ ಎಂಬುದನ್ನು ಪರಿಶೀಲಿಸಿದರು. ನಂತರ ಕೆಲವರು ಬಸ್ಗಳಿಗೆ ಬೆಂಕಿ ಹಚ್ಚಿದರು” ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮೇ 3ರ ನಂತರ ಮಣಿಪುರದಲ್ಲಿ ಆರಂಭವಾದ ಜನಾಂಗೀಯ ಹಿಂಸಾಚಾರದಲ್ಲಿ ಇದುವರೆಗೂ 160ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ನೂರಾರು ಮಂದಿ ಗಾಯಗೊಂಡಿದ್ದಾರೆ. ಎಸ್ಟಿ ಸ್ಥಾನಮಾನದ ಬೇಡಿಕೆ ನೀಡಬೇಕೆಂಬ ಮೈತೇಯಿ ಸಮುದಾಯದ ಆಗ್ರಹದ ವಿರುದ್ಧ ಮೇ 3ರಂದು ಮಣಿಪುರದ ವಿವಿಧ ಜಿಲ್ಲೆಗಳಲ್ಲಿ ನಡೆದ ಪ್ರತಿಭಟನಾ ಧರಣಿಯ ನಂತರ ರಾಜ್ಯದಲ್ಲಿ ಹಿಂಸಾಚಾರ ಭುಗಿಲ್ಲೆದಿತು. ರಾಜ್ಯದಲ್ಲಿ ಮೈತೇಯಿ ಸಮುದಾಯದವರು ಶೇ.53ರಷ್ಟಿದ್ದು, ಬಹುತೇಕ ಇಂಫಾಲ ಕಣಿವೆಯಲ್ಲಿ ವಾಸಿಸುತ್ತಾರೆ. ಬುಡಕಟ್ಟು ಸಮುದಾಯಗಳಾದ ಕುಕಿ ಮತ್ತು ನಾಗಾಗಳು ಶೇ.40ರಷ್ಟಿದ್ದು, ಬೆಟ್ಟಗಳಿಂದ ಕೂಡಿದ ಜಿಲ್ಲೆಗಳಲ್ಲಿ ವಾಸಿಸುತ್ತಾರೆ.
ಮಹಿಳೆಯರ ಬೆತ್ತಲೆ ಮೆರವಣಿಗೆ ಅಘಾತಕಾರಿ: ಅಮೆರಿಕ
ಮಣಿಪುರದ ಕಾಂಗ್ಪೋಗ್ಪಿ ಜಿಲ್ಲೆಯಲ್ಲಿ ಪುರುಷರ ಒಂದು ಗುಂಪು ಇಬ್ಬರು ಮಹಿಳೆಯರನ್ನು ನಗ್ನಗೊಳಿಸಿ, ಮೆರವಣಿಗೆ ನಡೆಸಿದ ಘಟನೆಗೆ ಅಮೆರಿಕ ಆಘಾತ ವ್ಯಕ್ತಪಡಿಸಿದೆ. ಈ ಘಟನೆಯು ಮೇ 4ರಂದು ನಡೆದಿದ್ದು, ಜು.19ಕ್ಕೆ ಬೆಳಕಿಗೆ ಬಂದಿತ್ತು.
“ಮಣಿಪುರದಲ್ಲಿ ಇಬ್ಬರು ಮಹಿಳೆಯರ ಮೇಲಿನ ಅಮಾನವೀಯ ದಾಳಿಯ ವಿಡಿಯೋದಿಂದ ನಾವು ಆಶ್ಚರ್ಯ ಮತ್ತು ಆಘಾತಕ್ಕೊಳಗಾಗಿದ್ದೇವೆ. ಈ ಲಿಂಗ ಆಧಾರಿತ ಹಿಂಸಾಚಾರದಲ್ಲಿ ಬದುಕುಳಿದವರಿಗೆ ನಾವು ಸಹಾನುಭೂತಿಯನ್ನು ತಿಳಿಸುತ್ತೇವೆ. ಇವರಿಗೆ ನ್ಯಾಯವನ್ನು ಒದಗಿಸುವ ಭಾರತ ಸರ್ಕಾರದ ಪ್ರಯತ್ನಗಳಿಗೆ ನಾವು ಬೆಂಬಲಿಸುತ್ತೇವೆ” ಎಂದು ಅಮೆರಿಕ ವಿದೇಶಾಂಗ ಸಚಿವಾಲಯದ ಉಪ ವಕ್ತಾರ ವೇದಾಂತ್ ಪಟೇಲ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ
ಪೋರ್ಷೆ ಕಾರು ಓಡಿಸಿ ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತ: ಪ್ರಕರಣ ಸಂಬಂಧ ಬಾಲಕನ ತಂದೆ ಬಂಧನ
Uber ಬಸ್ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!
Delhi ತಾಪ 47 ಡಿಗ್ರಿ: ಶಾಲೆಗಳಿಗೆ ಸುದೀರ್ಘ ರಜೆ
MUST WATCH
ಹೊಸ ಸೇರ್ಪಡೆ
Bidar; ಕಾರು ಅಪಘಾತ; ಅಪಾಯದಿಂದ ಪಾರಾದ ಚನ್ನವೀರ ಶಿವಾಚಾರ್ಯರು
Bidar; ಘಾತುಕ ಶಕ್ತಿಗಳಿಗೆ ಪೊಲೀಸ್ ಠಾಣೆಯಲ್ಲಿ ರಾಜ ಮರ್ಯಾದೆ ಸಿಗುತ್ತಿದೆ: ಬೊಮ್ಮಾಯಿ
Gadag; ಬೈಕ್ ಗೆ ಹಿಂಬದಿಯಿಂದ ಟಿಪ್ಪರ್ ಡಿಕ್ಕಿ; ಬೈಕ್ ಗೆ ಸವಾರನ ಕಾಲು ಕಟ್!
Swindon Borough ಕೌನ್ಸಿಲ್ನ ಮೇಯರ್ ಆಗಿ ಭಾರತೀಯ ಮೂಲದ ಇಮ್ತಿಯಾಜ್ ಶೇಖ್ ಆಯ್ಕೆ
W.Bengal; ಬಿಜೆಪಿ ಅಭ್ಯರ್ಥಿಗೆ 24 ಗಂಟೆ ಕಾಲ ಪ್ರಚಾರ ಮಾಡದಂತೆ ತಡೆ ನೀಡಿದ ಚುಣಾವಣಾ ಆಯೋಗ