Davanagere ಕದ್ದ ಬೈಕ್ ಮಾರಾಟಕ್ಕೆ ಸಹಕಾರ: ನಾಲ್ವರು ದ್ವಿತೀಯ ದರ್ಜೆ ಗುಮಾಸ್ತರ ಬಂಧನ
Team Udayavani, Aug 1, 2023, 8:47 PM IST
ದಾವಣಗೆರೆ: ಕಳ್ಳತನ ಮಾಡಿದ್ದ ಬೈಕ್ಗಳನ್ನು ಮೂಲ ಮಾಲಿಕರ ಗಮನಕ್ಕೆ ತರದೆ ಬೇರೆಯವರಿಗೆ ನೋಂದಣಿಗೆ ಸಹಕರಿಸಿದ್ದ ದಾವಣಗೆರೆಯ ಪ್ರಾದೇಶಿಕ ಸಾರಿಗೆ ಇಲಾಖೆಯ ನಾಲ್ವರು ದ್ವಿತೀಯ ದರ್ಜೆ ಗುಮಾಸ್ತರು ಮತ್ತು ಓರ್ವ ಮಧ್ಯವರ್ತಿಯನ್ನು ಮಂಗಳವಾರ ಬಸವನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಈಚೆಗೆ ಪತ್ತೆಯಾಗಿದ್ದ ಬೈಕ್ ಕಳ್ಳತನಕ್ಕೆ ಸಂಬಂಧಿಸಿದಂತೆ ಹೊನ್ನಾಳಿ ಪೊಲೀಸರು ದಾಖಲೆಗಳ ಪರಿಶೀಲನೆ ನಡೆಸಿದ ಸಂದರ್ಭದಲ್ಲಿ ಬೇರೆಯವರಿಗೆ ನೋಂದಣಿಯಾಗಿರುವುದು ಪತ್ತೆಯಾಗಿದೆ. ದಾವಣಗೆರೆಯ ಸಿಇಎನ್ ಪೊಲೀಸ್ಗೆ ಮಾಹಿತಿ ನೀಡಲಾಗಿತ್ತು.
ಬೈಕ್ಗಳ ಮೂಲ ಮಾಲಿಕರಿಗೆ ಗೊತ್ತಾಗದಂತೆ ಅವರ ಸಹಿಗಳನ್ನು ಪೋರ್ಜರಿ ಮಾಡಿ, ಬೇರೆಯವರಿಗೆ ನೋಂದಣಿ ಮಾಡಿಕೊಟ್ಟಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಾದೇಶಿಕ ಸಾರಿಗೆ ಇಲಾಖೆಯ ನಾಲ್ವರು ದ್ವಿತೀಯ ದರ್ಜೆ ಸಹಾಯಕರನ್ನು ಬಸವನಗರ ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಕೃತ್ಯಕ್ಕೆ ಸಂಬಂಽಸಿದಂತೆ ರಸೂಲ್ ಎಂಬ ಮಧ್ಯವರ್ತಿಯನ್ನ ಸಹ ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು
Davanagere ನೇಹಾ-ಅಂಜಲಿ ಹಂತಕರಿಗೆ ಗಲ್ಲು ಶಿಕ್ಷೆ ವಿಧಿಸಿ; ಮಡಿವಾಳ ಸಮಾಜದ ಪ್ರತಿಭಟನೆ
Davanagere; ಭಾರೀ ಮಳೆಗೆ ನೆಲಕಚ್ಚಿದ ಭತ್ತದ ಬೆಳೆ
Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್
ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?