ಅಂದು ಕುಸಿದಿದ್ದ ಮತ್ತೀಘಟ್ಟ ತೋಟ ಮತ್ತೆ ಕುಸಿತ!


Team Udayavani, Aug 1, 2023, 9:31 PM IST

ಅಂದು ಕುಸಿದಿದ್ದ ಮತ್ತೀಘಟ್ಟ ತೋಟ ಮತ್ತೆ ಕುಸಿತ!

ಶಿರಸಿ: ತಾಲೂಕಿನ ಮತ್ತಿಘಟ್ಟ ಕಲ್ಗದ್ದೆ (ಕೆಳಗಿನಕೇರಿ)ಯಲ್ಲಿ ಮತ್ತೆ ಆತಂಕದ ಸ್ಥಿತಿಯಲ್ಲಿ ರೈತ ಕುಟುಂಬ ಬದುಕುವಂತಾಗಿದೆ. ಕಳೆದ ಎರಡು ವರ್ಷವೂ ಕುಸಿದು ಹೋಗಿದ್ದ ಚಂದ್ರಶೇಖರ ನರಸಿಂಹ ಹೆಗಡೆಯವರ ತೋಟ ಮತ್ತೆ ಈ ಬಾರಿಯೂ ಕುಸಿಯಲಾರಂಭಿಸಿದೆ. ಮತ್ತೆ 25 ಕ್ಕೂ ಹೆಚ್ಚು ಅಡಿಕೆ ಮರ ಮಣ್ಣಿನಡಿ ಸೇರಿದೆ.

ಕಳೆದ ಎರಡು ವರ್ಷಗಳ ಭೂ ಕುಸಿತದಿಂದಾದ ಹಾನಿಗೆ ಪರಿಹಾರ ಇನ್ನೂ ಮರೀಚಿಕೆಯಾಗಿರುವಾಗಲೇ ಮತ್ತೆ ಅಳಿದುಳಿದ ತೋಟವೂ ಕುಸಿಯಲಾರಂಭಿಸಿದೆ. ಅಲ್ಲದೇ ಮತ್ತೆ ಕೆಲ ಭೂ ಪ್ರದೇಶ ಬಾಯಿಬಿಟ್ಟು ನಿಂತಿದೆ.

ಸರ್ಕಾರ ಈ ಬಡರೈತರ ಬದುಕಿಗೆ ದಾರಿತೋರಿಸುವ ಅನಿವಾರ್ಯತೆ ಇದೆ. ಎರಡು ವರ್ಷದ ಹಿಂದೆ ಪ್ರಥಮ ಬಾರಿಗೆ ತೋಟ ಕುಸಿದಾಗ ಮಂತ್ರಿಗಳು, ಶಾಸಕರು, ವಿಧಾನಸಭಾಧ್ಯಕ್ಷರು, ಅಧಿಕಾರಿಗಳು ಭೇಟಿ ನೀಡಿ ವಿಶೇಷ ಪ್ರಕರಣ ಎಂದು ಪರಿಹಾರವನ್ನು ಸರ್ಕಾರದಿಂದ ಕೊಡಿಸುವ ಮಾತನಾಡಿದ್ದರು. ಆದರೆ ಮರು ವರ್ಷ ಮತ್ತೆ ಕುಸಿದರೂ ಈತನಕ ಯಾವುದೇ ಪರಿಹಾರ ಈ ಕುಟುಂಬಕ್ಕೆ ಬಂದಿಲ್ಲ. ಇನ್ನಾದರೂ ಸೂಕ್ತ ಪರಿಹಾರ ಮತ್ತು ಬದಲಿ ಭೂಮಿ ನೀಡುವಂತಾಗಬೇಕೆನ್ನುವದು ಸಂತ್ರಸ್ತರ ಆಗ್ರಹವಾಗಿದೆ. ಅದಕ್ಕೆ ಸರ್ಕಾರ ಸ್ಪಂದಿಸಿ ಅಡಿಕೆ ಬೆಳೆಗಾರರ ಹಿತರಕ್ಷಣೆ ಮಾಡಬೇಕಾಗಿದೆ.

ಜಿಲ್ಲೆಯಲ್ಲಿ ಎರಡು ವರ್ಷದ ಹಿಂದೆ ಅತಿವೃಷ್ಟಿಯಿಂದ ಶಿರಸಿ ಹಾಗೂ ಯಲ್ಲಾಪುರ ತಾಲೂಕಿನಲ್ಲಿ ಭೂ ಕುಸಿತದಿಂದ 50 ಕ್ಕೂ ಹೆಚ್ಚು ರೈತರ100 ಕ್ಕೂ ಹೆಚ್ಚು ಎಕರೆ ಅಡಿಕೆ ತೋಟ ಸಂಪೂರ್ಣ ನಾಶವಾಗಿದ್ದು ಈ ಭೂಮಿಯಲ್ಲಿ ಮತ್ತೆ ತೋಟ ಮಾಡುವುದು ಅಸಾಧ್ಯವಾಗಿದ್ದು ಪರಿಹಾರ ಮತ್ತು ಬದಲಿ ಭೂಮಿ ನೀಡುವ ಅನಿವಾರ್ಯತೆ ಇದೆ. ಆದರೆ ಇವರ್ಯಾರಿಗೂ ಪರಿಹಾರವಾಗಲಿ, ಬದಲಿ ಭೂಮಿಯಾಗಲಿ ಸರ್ಕಾರ ನೀಡದೆ ರೈತರ ಬದುಕಿನೊಂದಿಗೆ ಆಟವಾಡುತ್ತಿದ್ದಂತಿದೆ.

ಜಿಲ್ಲೆಯಲ್ಲಿ ಸುಮಾರು 100 ರಿಂದ 150 ಕೋಟಿ ಪರಿಹಾರ, 150 ಎಕರೆ ಭೂಮಿ ಬೇಕಾಗಲಿದೆ. ಇದರತ್ತ ಸರ್ಕಾರ ವರ್ಷ ಕಳೆದರೂ ಗಮನ ನೀಡಿದಂತೆ ಕಾಣುತ್ತಿಲ್ಲ. ವಿಶೇಷ ಪ್ರಕರಣ ಎಂದು ಈ ರೈತರ ಬದುಕಿಗೆ ದಾರಿಯಾಗಬೇಕಾಗಿದೆ. ಅಡಿಕೆ ತೋಟ ನಾಶವಾದರೆ ಓರ್ವ ಮನುಷ್ಯನ ಜೀವನವೇ ನಶಿಸಿಹೋಗುತ್ತದೆ. ಒಮ್ಮೆ ನಾಶವಾದ ತೋಟ ಮರುನಿರ್ಮಾಣಕ್ಕೆ ಕನಿಷ್ಟ 15 ವರ್ಷ ಹಿಡಿಯಲಿದೆ. ಸ್ವತಂತ್ರ ಬದುಕು ಕಟ್ಟಿಕೊಂಡಿದ್ದ ಮಧ್ಯಮ ವರ್ಗದ ಈ ಕುಟುಂಬಗಳಿಗೆ ಸರ್ಕಾರ ಸಹಾಯ ಮಾಡದಿದ್ದರೆ ಅನಿರೀಕ್ಷಿತ ಸಂಕಷ್ಟದಿಂದ ಕಂಗಾಲಾಗಿರುವ ಕುಟುಂಬ ಮುಂದೆ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಲಿದೆ. ಇನ್ನಾದರೂ ಮಲೆನಾಡ ಅಡಿಕೆ ಬೆಳೆಗಾರರಿಗೆ ಬಂದೊದಗಿದ ಈ ಸಂಕಷ್ಟದಿಂದ ಪಾರುಮಾಡಲು ಸರ್ಕಾರ ಮನಸ್ಸು ಮಾಡಬೇಕಾಗಿದೆ.

ಟಾಪ್ ನ್ಯೂಸ್

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Heavy Rain; ವರುಣನ ಅಬ್ಬರಕ್ಕೆ ತಂಬಾಕು, ಶುಂಠಿ ಬೆಳೆ ಜಲಾವೃತ; ರೈತರ ಆತಂಕ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

Rabkavi-Banhatti; ರೋಹಿಣಿ ಮಳೆ ಒಲಿದರೆ ರೈತನ ಬಾಳೇ ಬಂಗಾರ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-sirsi

Sirsi: ಬಾರದ ಹೈನು ಪ್ರೋತ್ಸಾಹ; ಶೀಘ್ರ ಬಿಡುಗಡೆಗೆ ಒತ್ತಾಯ

Minchu

Banavasi ; ಕ್ರಿಕೆಟ್ ಆಡುತ್ತಿದ್ದ ಬಾಲಕ ಸಿಡಿಲಿಗೆ ಬಲಿ

1-wqewqwqe

Bhatkal;ವೆಂಕಟಾಪುರ ನದಿಯಲ್ಲಿ ಮುಳುಗಿ ಇಬ್ಬರು ಮೃತ್ಯು

1-qwew-eqw-wq

Yellapur; ಶಾಲೆಯ ಮೇಲೆ ಬಿದ್ದ ಬೃಹತ್ ಮರ

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

Ankola: ಅಪ್ರಾಪ್ತ ಬಾಲಕಿಯ ಮೇಲೆ ವಯೋವೃದ್ಧನಿಂದ ಲೈಂಗಿಕ ದೌರ್ಜನ್ಯ; ಪ್ರಕರಣ ದಾಖಲು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

1-qweqwqe

IPL ಅಭಿಷೇಕ್ ಸ್ಫೋಟಕ ಆಟ: ಪಂಜಾಬ್ ವಿರುದ್ಧ ಹೈದರಾಬಾದ್ ಗೆ 4 ವಿಕೆಟ್ ಜಯ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Rain Alert; ಮೇ 21, 22 ರಂದು ಕರಾವಳಿಯಲ್ಲಿ ಬಿರುಸಿನ ಮಳೆ ಸಾಧ್ಯತೆ

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ ಬಲಿಯಾದವು 10ಕುರಿಗಳು!

Dog Attack ಗುಂಡ್ಲುಪೇಟೆ: ನಾಯಿಗಳ ದಾಳಿಗೆ 10 ಕುರಿಗಳು ಸಾವು

1-wqewewqe

Iran ಅಧ್ಯಕ್ಷ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ‘ಹಾರ್ಡ್ ಲ್ಯಾಂಡಿಂಗ್; ರಕ್ಷಣ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.