ಸಂಪಾಜೆ: ಶ್ವಾನ ಮೇಲೆ ಚಿರತೆ ದಾಳಿ
Team Udayavani, Aug 2, 2023, 9:57 PM IST
ಅರಂತೋಡು : ಸಂಪಾಜೆ ಪರಿಸರದಲ್ಲಿ ಚಿರತೆ ಕಾಟ ಶುರುವಾಗಿದೆ. ಮನೆಯ ಮುಂದೆ ಮಲಗಿದ್ದ ನಾಯಿ ಮೇಲೆ ಚಿರತೆ ದಾಳಿ ಮಾಡಿದ್ದು ಸ್ಥಳೀಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.
ಸುಳ್ಯ ತಾಲೂಕಿನ ಸಂಪಾಜೆಯ ಬಂಟೋಡಿಯ ತೇಜೇಶ್ವರ್ಬಂಟೋಡಿ ಅವರ ಮನೆಯ ಎದುರಲ್ಲಿ ಚಿರತೆ ಕಾಣಿಸಿಕೊಂಡಿದೆ.
ಅಂಗಳದಲ್ಲಿದ್ದ ಶ್ವಾನದ ಮೇಲೆ ದಾಳಿ ನಡೆಸಿ ಓಡಿದೆ . ಚಿರತೆ ಬಂದು ಮನೆಯಲ್ಲಿದ್ದ ಶ್ವಾನದ ಮೇಲೆ ದಾಳಿ ಮಾಡಿದೆ.
ಮನೆಯವರು ಕಿರುಚಿಕೊಂಡಾಗ ಅದು ಶಬ್ಧಕ್ಕೆ ಹೆದರಿ ಅಲ್ಲಿಂದ ತಪ್ಪಿಸಿಕೊಂಡು ಓಡಿದೆ.ಬೇರೆಡೆಯೂ ಕೆಲವರಿಗೆ ಚಿರತೆ ಕಾಣಿಸಿಕೊಂಡಿದೆ. ಈ ಬಗ್ಗೆ ನಾವು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದೇವೆ. ಅವರು ಬಂದು ಕ್ಯಾಮೆರಾ ಇರಿಸಿ ಅದರ ಪತ್ತೆಗೆ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.