ಚುನಾವಣಾ ಕಾರ್ಯದಿಂದ ಶಿಕ್ಷಕರಿಗಿಲ್ಲ ಮುಕ್ತಿ
Team Udayavani, Aug 4, 2023, 7:46 AM IST
ಬೆಂಗಳೂರು: ಶಿಕ್ಷಕರಿಗೆ ಚುನಾವಣಾ ಕರ್ತವ್ಯದಿಂದ ಬಿಡುಗಡೆಗೊಳಿಸಲು ಸಾಧ್ಯವಿಲ್ಲ ಎಂಬುದನ್ನು ಸ್ಪಷ್ಟಪಡಿಸಿರುವ ಸರ್ಕಾರ, ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ತೊಡಗಿಸಿಕೊಳ್ಳುವಂತೆ ಆದೇಶಿಸಿದೆ.
ಕೇಂದ್ರ ಚುನಾವಣಾ ಆಯೋಗದ ಮತದಾರರ ಪಟ್ಟಿ ಕೈಪಿಡಿ-2016 ರ ನಿಯಮಗಳ ಪ್ರಕಾರ ಮತಗಟ್ಟೆ ಮಟ್ಟದ ಅಧಿಕಾರಿ(ಬಿಎಲ್ಒ)ಗಳಾಗಿ 13 ವಿವಿಧ ಹುದ್ದೆಗಳ ಸಿಬ್ಬಂದಿಯನ್ನು ನಿಯೋಜಿಸಲು ಅವಕಾಶವಿದ್ದು, ಅದರಲ್ಲಿ ಶಿಕ್ಷಕರ ಹುದ್ದೆಯೂ ಒಂದು.
ಅಲ್ಲದೆ, ಸುಪ್ರೀಂಕೋರ್ಟ್ ಕೂಡ ಈ ಬಗ್ಗೆ ಸ್ಪಷ್ಟ ಆದೇಶಗಳನ್ನು ನೀಡಿದ್ದು, ಚುನಾವಣಾ ಕಾರ್ಯದಲ್ಲಿ ಶಿಕ್ಷಕರನ್ನು ಬಳಸಬಹುದು ಎಂದಿದೆ. ಆದರೆ, ಕೆಲಸವೊಂದಿಷ್ಟು ಷರತ್ತುಗಳಿದ್ದು, ಅವುಗಳನ್ನು ಪೂರೈಸುವಂತೆ ಆದೇಶದಲ್ಲಿದೆ.
ನಿವೃತ್ತಿ ಅಂಚಿನಲ್ಲಿರುವವರು, ದೀರ್ಘಕಾಲಿಕ ಕಾಯಿಲೆ ಹೊಂದಿದವರಿಗೆ ವಿನಾಯಿತಿ: ಯಾವುದೇ ಶಾಲೆಯಲ್ಲಿನ ಶೇ.100ರಷ್ಟು ಎಲ್ಲ ಶಿಕ್ಷಕರನ್ನೂ ನಿಯೋಜಿಸಬಾರದು. ಶಿಕ್ಷಕರನ್ನು ನಿಯೋಜಿಸುವಾಗ ರಜಾ ದಿನಗಳಲ್ಲಿ ಹಾಗೂ ಬೋಧನಾ ಸಮಯವನ್ನು ಹೊರತುಪಡಿಸಿ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬೇಕು. ಮಾರಣಾಂತಿಕ ಅಥವಾ ದೀರ್ಘಕಾಲಿಕ ಕಾಯಿಲೆ ಹೊಂದಿರುವ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು. ಮುಂದಿನ 6 ತಿಂಗಳ ಅವಧಿಯಲ್ಲಿ ಸೇವೆಯಿಂದ ವಯೋನಿವೃತ್ತಿ ಹೊಂದಲಿರುವ ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಬಾರದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ (ಚುನಾವಣೆ) ಇಲಾಖೆಯ ಜಂಟಿ ಮುಖ್ಯ ಚುನಾವಣಾಧಿಕಾರಿ ಎಸ್.ಯೋಗೇಶ್ವರ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ
ಕಾಂಗ್ರೆಸ್ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ಹಾಳು ಮಾಡುತ್ತಿದೆ:ವಿ.ಪ. ಸದಸ್ಯ ಎಸ್.ವಿ. ಸಂಕನೂರ
Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ
ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ
Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Mollywood: 5 ತಿಂಗಳಿನಲ್ಲಿ 1000 ಕೋಟಿಗೂ ಅಧಿಕ ಗಳಿಕೆ: ಈ 3 ಸಿನಿಮಾಗಳ ಕೊಡುಗೆಯೇ ಹೆಚ್ಚು
Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ
Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು
Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್
Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ