BBMP ಯ 45 ಕಡೆ ಲೋಕಾಯುಕ್ತ ದಾಳಿ


Team Udayavani, Aug 3, 2023, 11:16 PM IST

lokayukta

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆಯ 45 ಸ್ಥಳಗಳಲ್ಲಿ ಇರುವ 100ಕ್ಕೂ ಅಧಿಕಾರಿಗಳಿಗೆ ಗುರುವಾರ ಏಕಕಾಲದ ದಾಳಿಯ ಶಾಕ್‌ ಕಾದಿತ್ತು. ಯಾಕೆಂದರೆ ಖುದ್ದು ಲೋಕಾಯುಕ್ತ ನ್ಯಾ| ಬಿ.ಎಸ್‌.ಪಾಟೀಲ್‌ ಅವರೇ ಫೀಲ್ಡ್‌ಗೆ ಇಳಿದಿದ್ದರು. ಜತೆಗೆ ಉಪ ಲೋಕಾ ಯುಕ್ತ ಕೆ.ಎನ್‌. ಫ‌ಣೀಂದ್ರ, ಡಿಜಿಪಿ
ಪ್ರಶಾಂತ್‌ ಕುಮಾರ್‌ ಠಾಕೂರ್‌, ಐಜಿಪಿ ಡಾ| ಎ. ಸುಬ್ರಹ್ಮಣ್ಯೇಶ್ವರ ರಾವ್‌ ಕೂಡ ಇದ್ದರು.

ಕಚೇರಿಗಳಲ್ಲಿ ಕೆಲಸ ಮಾಡಿಸಿ ಕೊಡಲು ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆಯಿಡುತ್ತಿರುವ ಸರಣಿ ಆರೋಪಗಳು ಬಂದಿದ್ದರಿಂದ ಅಧಿಕಾರಿಗಳ ತಂಡ ರಾಜ್ಯದ ರಾಜಧಾನಿಯ 45 ಕಂದಾಯ ಕಚೇರಿಗಳಲ್ಲಿರುವ 100ಕ್ಕೂ ಅಧಿಕ ಕಂದಾಯ ಅಧಿಕಾರಿ (ಆರ್‌ಒ) ಹಾಗೂ ಸಹಾಯಕ ಕಂದಾಯ ಅಧಿಕಾರಿ (ಎಆರ್‌) ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ.
ಸ್ಥಳದಿಂದ ಕೆಲವು ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಲಾಗಿದೆ. ಕೆಲವು ಕಚೇರಿಗಳಲ್ಲಿ ಸಾರ್ವಜನಿಕರಿಂದ ಲಂಚದ ರೂಪದಲ್ಲಿ ಪಡೆದಿದ್ದಾರೆ ಎನ್ನಲಾದ ಕಂತೆ – ಕಂತೆ ನೋಟುಗಳು ಪತ್ತೆಯಾಗಿವೆ. ನಿಗದಿತ ಸಮಯದಲ್ಲಿ ಕಡತ ವಿಲೇವಾರಿ ಮಾಡದಿರುವುದು, ಫ‌ಲಾನುಭವಿಗಳಿಗೆ ವಿವಿಧ ನೆಪವೊಡ್ಡಿ ಸೂಕ್ತ ರೀತಿಯಲ್ಲಿ ಕೆಲಸ ಮಾಡದಿರುವುದು, ದಾಖಲೆಗಳ ನಿರ್ವಹಣೆ ವೈಫ‌ಲ್ಯ ಸಹಿತ ಹಲವು ಅವ್ಯವಹಾರಗಳು ಹಾಗೂ ಲೋಪದೋಷಗಳು ಪತ್ತೆಯಾಗಿವೆ.

ಕಂದಾಯ ಇಲಾಖೆ ಕಚೇರಿಗಳೇ ಯಾಕೆ?
ಬಿಬಿಎಂಪಿ ವ್ಯಾಪ್ತಿಯ ಕಂದಾಯ ಇಲಾಖೆ ಕಚೇರಿಗಳಲ್ಲಿ ಸಾರ್ವಜನಿಕರಿಂದ ಬೇಕಾಬಿಟ್ಟಿಯಾಗಿ ದುಡ್ಡು ವಸೂಲಿ ಮಾಡಲಾಗುತ್ತಿದೆ ಎಂಬ ಬಗ್ಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ಕೆಲ ತಿಂಗಳುಗಳಿಂದ ಹಲವು ದೂರುಗಳು ಬಂದಿದ್ದವು. ಲೋಕಾಯುಕ್ತ ನ್ಯಾ| ಬಿ.ಎಸ್‌.ಪಾಟೀಲ್‌ ತಮ್ಮ ಸಿಬಂದಿಗೆ ಕುರಿತು ಮಾಹಿತಿ ಕಲೆ ಹಾಕಲು ಸೂಚಿಸಿದಾಗ ಕಂದಾಯ ಇಲಾಖೆ ಕಚೇರಿಗಳಲ್ಲಿ ಭಾರೀ ಅವ್ಯವಹಾರ ನಡೆಯುತ್ತಿರುವ ಸುಳಿವು ಸಿಕ್ಕಿತ್ತು. ಕೆಲವು ದಿನಗಳ ಹಿಂದೆ ಲೋಕಾಯುಕ್ತ ಪೊಲೀಸ್‌ ಅಧಿಕಾರಿಗಳೊಂದಿಗೆ ಈ ಕುರಿತು ಸಭೆ ನಡೆಸಿದ ಲೋಕಾಯುಕ್ತರು ಏಕಕಾಲದಲ್ಲಿ ದಾಳಿ ನಡೆಸಲು ಸಿದ್ದತೆ ನಡೆಸಿದ್ದರು. ಅದರಂತೆ ಗುರುವಾರ ದಾಳಿ ನಡೆದಿದೆ.

ದಾಳಿ ನಡೆದ ಕಂದಾಯ ಇಲಾಖೆ
ಗಳಲ್ಲಿ ಅರ್ಜಿ ಸಲ್ಲಿಸಿ ತಿಂಗಳುಗಳೇ ಉರುಳಿದರೂ ಅಧಿಕಾರಿಗಳು, ಸಿಬಂದಿ ಕೈ ಬೆಚ್ಚಗೆ ಮಾಡದಿದ್ದರೆ ಕೆಲಸಗಳು ಆಗುತ್ತಿರಲಿಲ್ಲ. ಈ ಬಗ್ಗೆ ಪ್ರಶ್ನಿಸಿದರೆ ವಿವಿಧ ನೆಪವೊಡ್ಡಿ ಸಾರ್ವಜನಿಕರಿಗೆ ಪೊಳ್ಳು ಭರವಸೆ ಕೊಟ್ಟು ಸಾಗ ಹಾಕುತ್ತಿದ್ದರು. ಇದರಿಂದ ಸಾವಿರಾರು ಫ‌ಲಾನುಭವಿಗಳು ಸಂಕಷ್ಟ ಎದುರಿಸುತ್ತಿದ್ದರು.

ಚಳಿ ಬಿಡಿಸಿದ ಲೋಕಾಯುಕ್ತರು
ನ್ಯಾ| ಬಿ.ಎಸ್‌.ಪಾಟೀಲ್‌ ರಾಜಾಜಿನಗರದ ಕಂದಾಯ ಕಚೇರಿಗೆ ಭೇಟಿ ಕೊಟ್ಟ ವೇಳೆ ಅಧಿಕಾರಿ ಭಾರತಿ ಬಳಿ ಕಡತ ವಿಲೇವಾರಿಗೆ ತಡಮಾಡಿರುವುದನ್ನು ಪ್ರಶ್ನಿಸಿದರು. ಕ್ಯಾಶ್‌ ಡಿಕ್ಲರೇಷನ್‌ ಬುಕ್‌ ಬಗ್ಗೆ ಮಾಹಿತಿ ಕೊಡುವಂತೆ ಸೂಚಿಸಿದಾಗ ಅಲ್ಲಿನ ಅಧಿಕಾರಿಗಳು ಕಕ್ಕಾಬಿಕ್ಕಿಯಾಗಿ ಕೈ ಕಟ್ಟಿ ನಿಂತರು. ಅಧಿಕಾರಿಗಳ ಗೊಂದಲದ ಹೇಳಿಕೆಗೆ ಲೋಕಾಯುಕ್ತರು ಗರಂ ಆದರು. ಖುದ್ದು ಅರ್ಜಿದಾರರಿಗೆ ಕರೆ ಮಾಡಿ ತಾವು ಸಲ್ಲಿಸಿರುವ ಅರ್ಜಿಗಳಿಗೆ ಅಧಿಕಾರಿಗಳು ಯಾವ ರೀತಿ ಸ್ಪಂದಿಸಿದ್ದಾರೆ? ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆಯೇ ಮುಂತಾಗಿ ಪ್ರಶ್ನಿಸಿದರು. ವಿಜಯನಗರ, ಬ್ಯಾಟರಾಯನಪುರದ ಗಾಳಿ ಆಂಜನೇಯ ಸ್ವಾಮಿ ದೇವಾಲಯ ಉಪ ವಿಭಾಗಗಳಲ್ಲೂ ಕಂದಾಯ ಉಪ ವಿಭಾಗ ಕಚೇರಿಯ ಅಧಿಕಾರಿ, ಸಿಬಂದಿಗೆ ಬಿಸಿ ಮುಟ್ಟಿಸಿದ್ದಾರೆ.

ಟಾಪ್ ನ್ಯೂಸ್

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ

Satish Jarkiholi ಫಲಿತಾಂಶ ನಂತರ ಸಂಪುಟ ವಿಸ್ತರಣೆ ಆಗಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

1-xdx

Revanna ಮಧ್ಯಂತರ ನಿರೀಕ್ಷಣಾ ಜಾಮೀನು ಮೇ 20 ರ ವರೆಗೆ ವಿಸ್ತರಿಸಿದ ಕೋರ್ಟ್

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Pen Drive Case:ಮುಂದೆ ಎಲ್ಲ ಸತ್ಯ ಹೊರಗೆ ಬರುತ್ತದೆ: ದೇವರಾಜೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.