1984ರ ಸಿಖ್ ವಿರೋಧಿ ದಂಗೆ; ಕಾಂಗ್ರೆಸ್ ನಾಯಕ ಟೈಟ್ಲರ್ಗೆ ಬಂಧನ ಪೂರ್ವ ಜಾಮೀನು
Team Udayavani, Aug 4, 2023, 4:11 PM IST
ಹೊಸದಿಲ್ಲಿ: 1984ರ ಸಿಖ್ ವಿರೋಧಿ ದಂಗೆ ಕೇಸ್ ನಲ್ಲಿ ಕಾಂಗ್ರೆಸ್ ನಾಯಕ ಜಗದೀಶ್ ಟೈಟ್ಲರ್ ಅವರಿಗೆ ದೆಹಲಿಯ ರೂಸ್ ಅವೆನ್ಯೂ ಕೋರ್ಟ್ ಶುಕ್ರವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಶನಿವಾರ ಅವರು ನ್ಯಾಯಾಲಯಕ್ಕೆ ಹಾಜರಾಗುವ ಮೊದಲು ಜಾಮೀನು ಮಂಜೂರು ಮಾಡಲಾಗಿದೆ. ಪ್ರಕರಣದಲ್ಲಿ ಸಿಬಿಐ ಚಾರ್ಜ್ಶೀಟ್ ಅನ್ನು ನ್ಯಾಯಾಲಯವು ಗಮನಕ್ಕೆ ತೆಗೆದುಕೊಂಡ ನಂತರ ಸಮನ್ಸ್ ನೀಡಲಾಗಿದೆ.
ನ್ಯಾಯಾಲಯದ ನಿರೀಕ್ಷಣಾ ಜಾಮೀನು ಟೈಟ್ಲರ್ರನ್ನು ಬಂಧಿಸಲು ಸಾಧ್ಯವಿಲ್ಲ ಎಂದು ಖಚಿತಪಡಿಸುತ್ತದೆ. 1 ಲಕ್ಷ ಜಾಮೀನು ಬಾಂಡ್ ಮೇಲೆ ಜಾಮೀನು ನೀಡಲಾಗಿದೆ.
ಮೇ 20 ರಂದು ಸಲ್ಲಿಸಲಾದ ಸಿಬಿಐ ಚಾರ್ಜ್ಶೀಟ್ನಲ್ಲಿ, ಟೈಟ್ಲರ್ ಅವರು 1984 ರ ನವೆಂಬರ್ 1 ರಂದು ಪುಲ್ ಬಂಗಾಶ್ ಗುರುದ್ವಾರ, ಆಜಾದ್ ಮಾರ್ಕೆಟ್ನಲ್ಲಿ ಗುಂಪನ್ನು ಪ್ರಚೋದಿಸಿದ್ದರು ಇದರ ಪರಿಣಾಮವಾಗಿ ಗುರುದ್ವಾರವನ್ನು ಸುಟ್ಟುಹಾಕಲಾಗಿತ್ತು, ಘಟನೆಯಲ್ಲಿ ಠಾಕೂರ್ ಸಿಂಗ್, ಬಾದಲ್ ಸಿಂಗ್ ಮತ್ತು ಗುರು ಚರಣ್ ಸಿಂಗ್ ಎಂಬ ಮೂರು ಸಿಖ್ಖರ ಹತ್ಯೆಯಾಗಿತ್ತು ಎಂಬ ಆರೋಪವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರ್ಯಾಣದಲ್ಲಿ ಆರನೇ ಆರೋಪಿ ಬಂಧನ
Tragedy: ಭೀಕರ ರಸ್ತೆ ಅಪಘಾತ… ಒಂದೇ ಕುಟುಂಬದ 6 ಮಂದಿ ಮೃತ್ಯು, ಓರ್ವನ ಸ್ಥಿತಿ ಗಂಭೀರ
ಹೆಚ್ಚು ಟೀ, ಕಾಫಿ ಕುಡಿದರೆ ರಕ್ತಹೀನತೆ ಬಾಧೆ ಗ್ಯಾರಂಟಿ!
Mumbai: ಹೋರ್ಡಿಂಗ್ ಕುಸಿದು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ
China ಯೋಜನೆಗೆ ಭಾರತ ಸೆಡ್ಡು: ಚಬಹಾರ್ ಬಂದರಿಗಾಗಿ ಭಾರತ-ಇರಾನ್ ಅಂಕಿತ
MUST WATCH
ಹೊಸ ಸೇರ್ಪಡೆ
Charmady: ಕತ್ತಲಾಗ್ತಿದ್ದಂತೆ ಹೆದ್ದಾರಿಗೆ ಬಂದು ನಿಲ್ಲುವ ಕಾಡಾನೆ… ಜೀವ ಭಯದಲ್ಲಿ ಸವಾರರು
Day Care Center: ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಡೇ ಕೇರ್ ಕೇಂದ್ರ
Bengaluru: ವಿಪತ್ತು ನಿರ್ವಹಣೆಗೆ 10 ಕೋಟಿ ರೂ.: ತುಷಾರ್
Mumbai: ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರ್ಯಾಣದಲ್ಲಿ ಆರನೇ ಆರೋಪಿ ಬಂಧನ
Mangoes: ಹೊರ ರಾಜ್ಯಗಳ ಮಾವಿನ ಹಣ್ಣಿನ ದರ್ಬಾರ್!