Gadaga: ಹೆಸರು ಹಾಳು ಮಾಡಲು ಬಂದ ಕೊಂಬಿನ ಹುಳು-ಬೆಳೆ ಉಳಿಸಲು ಪರದಾಟ

ಯಂತ್ರ ಕಟಾವಿಗೆ ಬರುವ ಎತ್ತರ ತಳಿಯ ದುಬಾರಿ ಬೀಜ ಬಿತ್ತನೆ ಮಾಡಿದ್ದಾರೆ

Team Udayavani, Aug 8, 2023, 6:09 PM IST

Gadaga: ಹೆಸರು ಹಾಳುಮಾಡಲು ಬಂದ ಕೊಂಬಿನ ಹುಳು-ಬೆಳೆ ಉಳಿಸಲು ಪರದಾಟ

ಲಕ್ಷ್ಮೇಶ್ವರ: ತಾಲೂಕಿನ ರೈತರ ಮುಂಗಾರಿನ ಪ್ರಮುಖ ವಾಣಿಜ್ಯ ಬೆಳೆ ಹೆಸರಿಗೀಗ ಕೊಂಬಿನ ಹುಳು ಕೀಟಬಾಧೆ ಆವರಿಸಿದ್ದು, ಬೆಳೆ ಉಳಿಸಿಕೊಳ್ಳಲು ರೈತರು ಹೆಣಗಾಡುತ್ತಿದ್ದಾರೆ. ಮುಂಗಾರಿನಲ್ಲಿ ಮೊದಲು ರೈತರ ಕೈ ಸೇರುವ ಹೆಸರು ರೈತರ ಆಶಾದಾಯಕ ಬೆಳೆಯಾಗಿದೆ. ಆದರೆ ಪ್ರಸಕ್ತ ಮುಂಗಾರಿನ ಮೊದಲ ಮಳೆಗಳು ಕೈಕೊಟ್ಟಿದ್ದರಿಂದ ಹೆಸರು ಬಿತ್ತನೆ ತಿಂಗಳು ವಿಳಂಬವಾಯಿತು. ಸರ್ಕಾರ ಪ್ರತಿ ಕ್ವಿಂಟಲ್‌ ಹೆಸರಿಗೆ 8,558 ಬೆಂಬಲ ಘೋಷಣೆ ಮಾಡಿದ್ದರಿಂದ ಕಡಿಮೆ ಇಳುವರಿ ಬಂದರೂ ಪರವಾಗಿಲ್ಲ, ಕಡಿಮೆ ಅವಧಿ ಮತ್ತು ಖರ್ಚಿನಿಂದ ಉತ್ತಮ ಬೆಲೆ ಸಿಗುತ್ತದೆಂಬ ಕಾರಣದಿಂದ ತಾಲೂಕಿನಲ್ಲಿ ಹೆಸರು ಬಿತ್ತನೆ ಮಾಡಿದ್ದಾರೆ.

ಆದರೆ ಒಂದು ತಿಂಗಳ ಕಾಲಾವಧಿಯ ಹೆಸರು ಬೆಳೆಗೆ ಸಂಪ್ರದಾಯವೇ ಎನ್ನುವಂತೆ ಹಳದಿ ರೋಗದ ಜತೆಗೆ ಕೀಟಬಾಧೆ ಆವರಿಸಿರುವುದು ರೈತರ ನಿದ್ದೆಗೆಡಿಸಿದೆ. ಕಳೆದ ಒಂದು ವಾರದಿಂದ ಮಳೆ ಬಿಡುವು ಕೊಟ್ಟಿದ್ದರಿಂದ ಕೃಷಿ ಕೆಲಸಗಳು ಏಕಕಾಲಕ್ಕೆ ಪ್ರಾರಂಭವಾಗಿ ಎಡೆ ಹೊಡೆಯಲು, ಕಳೆ ತೆಗೆಯಲು, ಕ್ರಿಮಿನಾಶ ಸಿಂಪಡಣೆ ಮಾಡಲು ಎತ್ತು, ಕೃಷಿ ಕಾರ್ಮಿಕರ ಕೊರತೆ ಕಾಡುತ್ತಿದೆ. ಈ ನಡುವೆಯೂ ಕೀಟಬಾಧೆಗೆ ತುತ್ತಾಗಿರುವ ಬೆಳೆಗಳ ಸಂರಕ್ಷಣೆಗೆ ಯಂತ್ರೋಪಕರಣಗಳಿಗೆ ಮೊರೆ ಹೋಗಿದ್ದಾರೆ. ಇದರಿಂದ ಈ ವರ್ಷವೂ ಖರ್ಚಿಲ್ಲದ ಬೆಳೆಗೆ ಮತ್ತೇ ಹೆಚ್ಚು ಖರ್ಚಿನ ಜತೆಗೆ ಇಳುವರಿ ಕುಂಠಿತವಾಗುವ ಆತಂಕ
ಎದುರಾಗಿದೆ.

ಲಕ್ಷ್ಮೇಶ್ವರ ಸೇರಿ ತಾಲೂಕಿನ ಶಿಗ್ಲಿ, ದೊಡೂxರ, ಸೂರಣಗಿ, ಬಾಲೆಹೊಸೂರ, ಅಕ್ಕಿಗುಂದ, ಬಡ್ನಿ, ಬಟ್ಟೂರ, ಹರದಗಟ್ಟಿ, ಅಡರಕಟ್ಟಿ, ಗೊಜನೂರ ಬಹುತೇಕ ಕಪ್ಪು ಮಣ್ಣಿನ 8,025 ಎಕರೆ ಪ್ರದೇಶದ ಜಮೀನಿನಲ್ಲಿ ಹೆಸರು ಬಿತ್ತನೆಯಾಗಿದೆ. ರೈತ ಸಂಪರ್ಕ ಕೇಂದ್ರ(45 ಕ್ವಿಂಟಲ್‌) ಮತ್ತು ಖಾಸಗಿ ಬೀಜ ಮಾರಾಟ ಕೇಂದ್ರದಲ್ಲಿ ನೂರಾರು ಕ್ವಿಂಟಲ್‌ ಹೆಸರು ಬೀಜ ಮಾರಾಟವಾಗಿದೆ. ಮುಖ್ಯವಾಗಿ ಯಂತ್ರ ಕಟಾವಿಗೆ ಬರುವ ಎತ್ತರ ತಳಿಯ ದುಬಾರಿ ಬೀಜ ಬಿತ್ತನೆ ಮಾಡಿದ್ದಾರೆ. ಆದರೆ ಅದು ರೈತರ ಕೈ ಹಿಡಿದಿಲ್ಲ.

ಕಡಿಮೆ ಖರ್ಚು, ಅಲ್ಪಾವಧಿ, ಉತ್ತಮ ಬೆಲೆಯಿಂದ ಸಾಲಶೂಲ, ಬದುಕಿನ ಜತೆಗೆ ಹಿಂಗಾರಿನ ಕೃಷಿ ಚಟುವಟಿಕೆಗಳಿಗೆ ಹೆಸರು ಬೆಳೆ ಆಸರೆಯಾಗುತ್ತದೆ. ಅಲ್ಲದೇ ಈ ವರ್ಷ ಸರ್ಕಾರ 8,858 ರೂ ಬೆಂಬಲ ಬೆಲೆ ಘೋಷಣೆ ಮತ್ತು ಮುಕ್ತ ಮಾರುಕಟ್ಟೆಯಲ್ಲೂ ಉತ್ತಮ ಬೆಲೆ ಇರುವುದರಿಂದ ತಡವಾದರೂ ಹೆಸರು ಬೆಳೆದಿದ್ದೇವೆ. ಅದಕ್ಕಾಗಿ ಈಗಾಗಲೇ ಎಕರೆಗೆ 10 ಸಾವಿರಕ್ಕಿಂತ ಹೆಚ್ಚು ಖರ್ಚು ಮಾಡಿದ್ದೇವು. ಬೆಳೆಗೆ ರೋಗ ತಪ್ಪಿದ್ದಲ್ಲ ಎಂದು ಗೊತ್ತಿದ್ದರೂ ಈ ವರ್ಷ ಹೇಗಾದರೂ ಸರಿ ಕೃಷಿ ಇಲಾಖೆಯ ಸಲಹೆ-ಸೂಚನೆ ಪಾಲಿಸಿ ಬೆಳೆಯನ್ನು ರೋಗದಿಂದ ಕಾಪಾಡಬೇಕು ಎಂದುಕೊಂಡಿದ್ದೇವೆ.

ಆದರೆ ಹಳದಿ ರೋಗಬಾಧೆ ಕಡಿಮೆ ಇದ್ದರೂ ಕೊಂಬಿನ ಹುಳದ ಬಾಧೆ ಆವರಿಸಿರುವುದು ರೈತರ ಕಷ್ಟಕ್ಕೆ ಕೊನೆಯೇ ಇಲ್ಲದಂತಾಗಿದೆ. ಸರ್ಕಾರ ಮುಂಗಾರಿನ ಬೆಳೆಗೆ ಬೆಳೆವಿಮೆ, ಬೆಳೆಹಾನಿ ಪರಿಹಾರ ಕಲ್ಪಿಸಬೇಕು.
*ಚನ್ನಪ್ಪ ಷಣ್ಮುಕಿ, ರೈತ ಮುಖಂಡ

ಹೆಸರು ಬೆಳೆಗೆ ಅಲ್ಲಲ್ಲಿ ಕೊಂಬಿನಹುಳು ಬಾಧೆ ಆವರಿಸುತ್ತಿದೆ. ಈ ಹಿನ್ನೆಲೆ ರೈತರ ಜಮೀನುಗಳಿಗೆ ಭೇಟಿ ನೀಡಿ ಬೆಳೆ ಪರಿಶೀಲಿಸಿ ಸಲಹೆ-ಸೂಚನೆ ನೀಡುತ್ತಿದ್ದೇವೆ. ಹಸಿರು ಬಣ್ಣದ ಮತ್ತು ದೇಹದ ಹಿಂಭಾಗಲ್ಲಿ ಚೂಪಾದ ಕೊಂಬನ್ನು ಹೊಂದಿರುತ್ತದೆ. ಎಲೆಗಳ ಕೆಳಗಿರುವ ಕೀಟವನ್ನು ಸೂಕ್ಷ್ಮವಾಗಿ ಗಮನಿಸುತ್ತಾ ಪ್ರಾರಂಭದ ಹಂತದಲ್ಲಿಯೇ ಗುರುತಿಸಬೇಕು. ಹೆಸರು, ಉದ್ದು ಬೆಳೆಯಲ್ಲಿ ಹೆಚ್ಚು ಕಂಡುಬರುವ ಈ ಕೀಟ ಎಲೆಯನ್ನೇ ತಿನ್ನುತ್ತದೆ ತೀವ್ರತೆ ಹೆಚ್ಚಾದಂತೆ ನಿಯಂತ್ರಿಸಬೇಕು. ಪ್ರತಿ ಲೀ ನೀರಿಗೆ 4 ಗ್ರಾಂ ಕಾರ್ಬರಿಲ್‌ 50 ಡಬ್ಲೂ.ಪಿ ಅಥವಾ 2 ಮಿ.ಲೀ ಕ್ಲೋರೊಪೈರಿಫಾಸ್‌ 20 ಇ.ಸಿ ಬೆರೆಸಿ ಸಿಂಪಡಿಸಬೇಕು. ನೀರಿನ ಅಭಾವವಿದ್ದಲ್ಲಿ ಪ್ರತಿ ಎಕರೆಗೆ 8.ಕಿಲೋದಂತೆ ಕ್ವಿನಾಲ್‌ಫಾಸ್‌ ಅಥವಾ ಫೆನವಲರೇಟ್‌ ಧೂಳೀಕರಣ ಮಾಡಬೇಕು. ಮುಖ್ಯವಾಗಿ ಮುಂಗಾರಿನ ಬೆಳೆಗಳನ್ನು ಬೆಳೆದರ್ಶಕ ಆ್ಯಪ್‌ನಲ್ಲಿ ದಾಖಲೀಕರಣ ಮಾಡಬೇಕು. ಇದರಿಂದ ಬೆಂಬಲ ಬೆಲೆಯಡಿ ಮಾರಾಟ ಮಾಡಲು, ಬೆಳೆವಿಮೆ ಪಾವತಿಸಲು, ಬೆಳೆವಿಮೆ ಮತ್ತು ಬೆಳೆಹಾನಿ ಪರಿಹಾರ ಪಡೆಯಲು ಅನಕೂಲವಾಗುತ್ತದೆ.
*ಚಂದ್ರಶೇಖರ ನರಸಮ್ಮನವರ, ಕೃಷಿ ಅಧಿಕಾರಿ

ಟಾಪ್ ನ್ಯೂಸ್

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Bengaluru-Mysuru Expressway; 15 ದಿನಗಳ‌ಲ್ಲಿ 12 ಸಾವಿರ ವಾಹನಗಳಿಗೆ ದಂಡ!

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವರಾಜ ಬೊಮ್ಮಾಯಿ

Gadag; ಕಾನೂನು ಸುವ್ಯವಸ್ಥೆ ಹದಗೆಡಲು ಸರ್ಕಾರದ ವ್ಯವಸ್ಥೆಯೇ ಕಾರಣ: ಬಸವರಾಜ ಬೊಮ್ಮಾಯಿ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

Lack of Water: ನೀರಿನ ಅಭಾವ… ಜಿಮ್ಸ್ ವೈದ್ಯಕೀಯ ವಿದ್ಯಾರ್ಥಿಗಳಿಗೆ ರಜೆ

3-mundaragi

Mundargi: ದುರಸ್ತಿ ಸಂದರ್ಭ ವಿದ್ಯುತ್‌ ಶಾಕ್‌ ; ಕೂಲಿಕಾರ ಸಾವು

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

ಮುಂಡರಗಿ-ರಾಜ್ಯ ಸರ್ಕಾರವೂ ಬರ ಪರಿಹಾರ ನೀಡಲಿ: ಶಿವಾನಂದ ಇಟಗಿ

ಗದಗ: ಬಿಸಿಲಿನ ಬೇಗೆಗೆ ಸಿಮ್ಮಿಂಗ್‌ ಫೂಲ್‌ಗೆ ಲಗ್ಗೆ

ಗದಗ: ಬಿಸಿಲಿನ ಬೇಗೆಗೆ ಸ್ವಿಮ್ಮಿಂಗ್‌ ಫೂಲ್‌ಗೆ ಲಗ್ಗೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

PU ಕಂಪ್ಯೂಟರ್‌ ಸೈನ್ಸ್‌, ಸೈಕಾಲಜಿಗೂ ಎನ್‌ಸಿಇಆರ್‌ಟಿ ಪಠ್ಯ

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

ಕೇರಳದಲ್ಲಿ 2 ವಾರದಲ್ಲಿ 2 ಲಕ್ಷ ಮಂದಿಗೆ ಸಾಂಕ್ರಾಮಿಕ ರೋಗ; 10 ಸಾವು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

Hyderabad: ನಟಿ ಪವಿತ್ರ ಜಯರಾಂ ಕಾರು ಅಪಘಾತದಲ್ಲಿ ಗಾಯಗೊಂಡಿದ್ದ, ಗೆಳೆಯ ಚಂದು ಆತ್ಮಹತ್ಯೆ

lರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

ರಾಜ್ಯದಲ್ಲಿ 12 ವರ್ಷಗಳಲ್ಲಿ 881ಸಾವು! ಸಿಡಿಲಾಘಾತದಿಂದ ಸಾವು ಬೆಳಗಾವಿ,ಬೀದರ್‌ನಲ್ಲೇ ಹೆಚ್ಚು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.