Gangavathi: ಪ್ರಭಾರಿ ಪ್ರಾಚಾರ್ಯರ ಹುದ್ದೆಗಾಗಿ ಮಸಲತ್ತು; ಹದಗೆಟ್ಟ ಶೈಕ್ಷಣಿಕ ವ್ಯವಸ್ಥೆ

ಪಾಠ ಪ್ರವಚನಗಳ ಬದಲಿಗೆ ಹುದ್ದೆಗಳ ಚರ್ಚೆಯಲ್ಲಿ ಬಹುತೇಕ ಪ್ರಾಧ್ಯಾಪಕರು

Team Udayavani, Aug 11, 2023, 11:03 AM IST

5-gangavathi

ಗಂಗಾವತಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಉನ್ನತ ಶಿಕ್ಷಣಕ್ಕೆ ಸರಕಾರ ಆದ್ಯತೆ ನೀಡಿ ಸ್ನಾತಕ-ಸ್ನಾತಕೋತ್ತರ ಕೋರ್ಸ್ ಗಳಿಗೆ ಪ್ರೋತ್ಸಾಹಿಸಿ ತಾಲೂಕಿಗೊಂದರಂತೆ ಪದವಿ ಮಹಾವಿದ್ಯಾಲಯಗಳನ್ನು ಆರಂಭಿಸಲಾಗಿದೆ.

ಸರಕಾರದ ಉದ್ದೇಶಕ್ಕೆ ವಿರುದ್ಧವಾಗಿ ಸ್ಥಳೀಯ ಕೊಲ್ಲಿನಾಗೇಶ್ವರರಾವ್ ಸರಕಾರಿ ಮಹಾವಿದ್ಯಾಲಯದ ಕೆಲ ಪ್ರಾಧ್ಯಾಪಕರು ಪ್ರಭಾರಿ ಪ್ರಾಚಾರ್ಯರ ಹುದ್ದೆ ಪಡೆಯಲು ಮಸಲತ್ತು ನಡೆಸಿ ಕಾಲೇಜಿನ ಶೈಕ್ಷಣಿಕ ವಾತಾವರಣ ಕೆಡಲು ಕಾರಣವಾಗುತ್ತಿದ್ದು, ವಿದ್ಯಾರ್ಥಿಗಳ, ಪಾಲಕರ ಮತ್ತು ವಿದ್ಯಾರ್ಥಿ ಸಂಘಟನೆಗಳ ಆಕ್ರೋಶಕ್ಕೆ ಗುರಿಯಾಗಿದೆ.

ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿರುವ ಶಾಸಕರು ಕೂಡಲೇ ಕಾಲೇಜಿನಲ್ಲಿ ಸಭೆ ನಡೆಸಿ ಪಾಠ ಪ್ರವಚನಗಳಿಗೆ ಆದ್ಯತೆ ನೀಡದೇ ಹುದ್ದೆಗಳಿಗೆ ಆಸೆ ಪಡುವ ಪ್ರಾಧ್ಯಾಪಕರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.

40 ವರ್ಷಗಳ ಇತಿಹಾಸವಿರುವ ಕೊಲ್ಲಿನಾಗೇಶ್ವರರಾವ್ ಸರಕಾರಿ ಮಹಾವಿದ್ಯಾಲಯದಲ್ಲಿ ಖಾಯಂ ಪ್ರಾಚಾರ್ಯರು ಇಲ್ಲದೇ ಇರುವುದರಿಂದ ಕಳೆದ 20 ವರ್ಷಗಳಿಂದ ಪ್ರಭಾರಿ ಪ್ರಾಚಾರ್ಯರು ಆಡಳಿತ ನಡೆಸುತ್ತಿದ್ದರು.

ಇದರಿಂದ ಕಾಲೇಜಿನಲ್ಲಿ ಗೊಂದಲಗಳು ಸೃಷ್ಠಿಯಾಗಿ ಶೈಕ್ಷಣಿಕ ವಾತಾವರಣ ಕೆಟ್ಟು ಹಣದ ಅವ್ಯವಹಾರ ನಡೆದಿರುವ ದೂರುಗಳಿವೆ. ಇಲ್ಲಿ ಬಿಎ, ಬಿಕಾಂ, ಬಿಎಸ್ಸಿ, ಬಿಬಿಎ ಮತ್ತು ಸ್ನಾತಕೋತ್ತರ ಕೋರ್ಸ್ ಗಳಾದ ಎಂಎ, ಎಂಕಾಂ ನಲ್ಲಿ ಹಲವು ವಿಭಾಗಗಳಿದ್ದು, ಒಟ್ಟು 3 ಸಾವಿರ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಖಾಯಂ ಪ್ರಾಧ್ಯಾಪಕರು 20 ಜನರಿದ್ದು, ಬಹುತೇಕ ಅತಿಥಿ ಉಪನ್ಯಾಸಕರಿಂದ ಕಾಲೇಜಿನ ಪಾಠ ಪ್ರವಚನಗಳು ನಡೆಯುತ್ತಿವೆ.

ಪ್ರಭಾರದ ಗೊಂದಲ: ಎಲ್ಲಿ ಖಾಯಂ ಪ್ರಾಚಾರ್ಯರು ಇರುವುದಿಲ್ಲವೋ ಅಲ್ಲಿ ಸ್ಥಳೀಯರ ಶಾಸಕರು ಹೇಳುವ ಅರ್ಹ ಪ್ರಾಧ್ಯಾಪಕರು ಪ್ರಭಾರಿ ಪ್ರಾಚಾರ್ಯರಾಗಿ ಕಾರ್ಯ ನಿರ್ವಹಿಸುತ್ತಾರೆ.

ಇಲ್ಲಿಗೆ ವರ್ಗಾವಾಗಿ ಬೆಂಗಳೂರು ಭಾಗದ ಪ್ರಾಚಾರ್ಯರು ಆಗಮಿಸಿ ಎರಡು ಮೂರು ತಿಂಗಳಲ್ಲಿ ವಾಪಸ್ ಹೋಗುವುದರಿಂದ ಪ್ರಾಚಾರ್ಯರ ಹುದ್ದೆ ಖಾಲಿ ಇರುತ್ತದೆ. ಕಾಲೇಜಿನಲ್ಲಿ ಅಭಿವೃದ್ಧಿ ಕಾರ್ಯಗಳು ಸೇರಿ ಪೂರಕ ಶೈಕ್ಷಣಿಕ ವಾತಾವರಣ ನಿರ್ಮಾಣಕ್ಕೆ ಸರಕಾರ ಸ್ಥಳೀಯ ಶಾಸಕರನ್ನೊಳಗೊಂಡ ಕಾಲೇಜು ಅಭಿವೃದ್ಧಿ ಸಮಿತಿ(ಸಿಡಿಸಿ) ರಚನೆ ಮಾಡುತ್ತದೆ.

ಸರಕಾರದ ನಿಯಮಗಳಂತೆ ಪಠ್ಯ ಪ್ರವಚನಗಳು ನಡೆಯುತ್ತವೆ. ಸಿಡಿಸಿ ಸೂಚನೆಯಂತೆ ಸರಕಾರದ ನಿಯಮಗಳಿಗೆ ಅನುಗುಣವಾಗಿ ಕಾಲೇಜಿನಲ್ಲಿ ಮೂಲಸೌಕರ್ಯಗಳು, ವಿದ್ಯಾರ್ಥಿಗಳ ಬೇಕು ಬೇಡಿಕೆಗಳಿಗೆ ಸ್ಪಂದಿಸಲಾಗುತ್ತದೆ.

ಕಳೆದ 20 ವರ್ಷಗಳಿಂದ ಈ ಕಾಲೇಜಿನಲ್ಲಿ ಖಾಯಂ ಪ್ರಾಚಾರ್ಯರು ಇಲ್ಲದಿರುವುದರಿಂದ ಪ್ರಾಧ್ಯಾಪಕರಲ್ಲಿ ಹಲವು ಗುಂಪುಗಳಾಗಿ ಇಡೀ ಕಾಲೇಜಿನ ಶೈಕ್ಷಣಿಕ ವಾತಾವರಣ ಕೆಟ್ಟುಹೋಗಿದೆ ಎಂಬ ಆರೋಪ ವ್ಯಾಪಕವಾಗಿದೆ.

ಸದ್ಯ ಹಿರಿಯ ಪ್ರಾಧ್ಯಾಪಕರಾಗಿದ್ದ ಜಗದೇವಿ ಕಲಶೆಟ್ಟಿ ಆರೋಗ್ಯ ಮತ್ತಿತರ ಕಾರಣ ನೀಡಿ ಡಾ.ಜಾಜಿ ದೇವೆಂದ್ರಪ್ಪ ಎನ್ನುವ ಕನ್ನಡ ಪ್ರಾಧ್ಯಾಪಕರಿಗೆ ಪ್ರಾಚಾರ್ಯರ ಪ್ರಭಾರಿ ನೀಡಿದ್ದು,  ಗೊಂದಲಕ್ಕೆ ಕಾರಣವಾಗಿದೆ.

ಸರಕಾರದ ನಿಯಮ ಹಾಗೂ ಪ್ರೋಟೋಕಾಲ್ ಉಲ್ಲಂಘನೆಯಾಗಿದ್ದು, ಶಾಸಕರು ಮಧ್ಯೆ ಪ್ರವೇಶ ಮಾಡುವಂತೆ ಕೆಲ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ. ಖಾಯಂ ಪ್ರಾಚಾರ್ಯರು ಇಲ್ಲದ ಸಂದರ್ಭದಲ್ಲಿ ನಿಯಮದಂತೆ ಸ್ಥಳೀಯ ಶಾಸಕರು ಕಾಲೇಜಿನ ಅಧ್ಯಕ್ಷರಾಗಿದ್ದು ಅರ್ಹರಿಗೆ ನಿಯಮದಂತೆ ಪ್ರಾಚಾರ್ಯರ ಹುದ್ದೆ  ಪ್ರಭಾರ ವಹಿಸಬೇಕು.

ಪ್ರೋಟೋಕಾಲ್ ಮತ್ತು ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ಪ್ರಾಚಾರ್ಯರ ಹುದ್ದೆ ಪ್ರಭಾರವನ್ನು ವಹಿಸಲಾಗಿದೆ. ತಾವು ಬೆಂಗಳೂರು ಪ್ರವಾಸದಲ್ಲಿದ್ದು ಗಂಗಾವತಿಗೆ ಆಗಮಿಸಿದ ತಕ್ಷಣ ಕಾಲೇಜಿನಲ್ಲಿ ಸಭೆ ನಡೆಸಿ ಅರ್ಹರಿಗೆ ಪ್ರಭಾರ ವಹಿಸಲಾಗುತ್ತದೆ ಎಂದು ದೂರವಾಣಿ ಕರೆಯ ಮೂಲಕ ಹೇಳಿದರೂ ಈ ಹಿಂದೆ ಇದ್ದ ಪ್ರಭಾರ ಪ್ರಾಚಾರ್ಯರು ನಿರ್ಲಕ್ಷಿಸಿ ಡಾ.ಜಾಜಿ ದೇವೆಂದ್ರಪ್ಪ ಎನ್ನುವವರಿಗೆ ಪ್ರಾಚಾರ್ಯರ ಹುದ್ದೆ ಪ್ರಭಾರ ವಹಿಸಲಾಗಿದ್ದು, ಅವಸರದಲ್ಲಿ ಖಜಾನೆ ಮತ್ತು ಬ್ಯಾಂಕುಗಳಲ್ಲಿ ಸಹಿ ಬದಲಾವಣೆಯೂ ಆಗಿದ್ದು ಇದು  ಶಾಸಕರ ಆದೇಶ ಉಲ್ಲಂಘನೆ ಮತ್ತು ಅಧಿಕಾರದ ಹಕ್ಕು ಚ್ಯುತಿಯಾಗಿದ್ದು, ಈ ಕುರಿತು ಸರಕಾರಕ್ಕೆ ಪತ್ರ ಬರೆಯಲಾಗುತ್ತದೆ. ಪುನಃ ಸಭೆ ನಡೆಸಿ ಕಾಲೇಜು ಶೈಕ್ಷಣಿಕ ವಾತಾವರಣ ಕೆಡದಂತೆ ಕ್ರಮ ವಹಿಸಲಾಗುತ್ತದೆ. ಕಾಲೇಜಿಗೆ ಕೋಟ್ಯಾಂತರ ರೂ.ಗಳ ಅನುದಾನ ಬರುತ್ತಿದ್ದು ಎಲ್ಲರ ವಿಶ್ವಾಸದೊಂದಿಗೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಕಾಲೇಜಿನಲ್ಲಿ ನಡೆದಿರುವ ಘಟನೆಗಳ ಕುರಿತು ಉನ್ನತ ಶಿಕ್ಷಣ ಸಚಿವರು ಹಾಗೂ ಸರಕಾರ ಗಮನಕ್ಕೆ ತರಲಾಗುತ್ತದೆ. -ಗಾಲಿ ಜನಾರ್ದನರೆಡ್ಡಿ ಶಾಸಕರು ಹಾಗೂ ಅಧ್ಯಕ್ಷರು ಕಾಲೇಜು ಅಭಿವೃದ್ಧಿ ಸಮಿತಿ

ಕೆ.ನಿಂಗಜ್ಜ

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

Gangavati; ಕಿಷ್ಕಿಂಧಾ ಅಂಜನಾದ್ರಿ ಹುಂಡಿಯಲ್ಲಿ 30.21 ಲಕ್ಷ ರೂ.ಸಂಗ್ರಹ

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.