Pollution water: ಮುಧೋಳ ಮಹಾರಾಣಿ ಕೆರೆಗೆ ಕಲುಷಿತ ನೀರು

ಜಾಲಿಕಂಟಿ ತೆರವುಗೊಳಿಸಿ ನೀರು ಸರಾಗವಾಗಿ ಹರಿದುಹೋಗಲು ಅನುವು ಮಾಡಿಕೊಡಬೇಕು

Team Udayavani, Aug 11, 2023, 2:18 PM IST

Pollution water: ಮುಧೋಳ ಮಹಾರಾಣಿ ಕೆರೆಗೆ ಕಲುಷಿತ ನೀರು

ಮುಧೋಳ: ನಗರದ ಜೀವನಾಡಿ ಮಹಾರಾಣಿ ಕೆರೆಗೆ ಪೂರೈಕೆಯಾಗುವ ನೀರು ಹರಿದು ಬರುವ ಕಾಲುವೆಯಲ್ಲಿ ಸಂಗ್ರಹವಾಗುತ್ತಿರುವ ತ್ಯಾಜ್ಯ ನಗರ ನಿವಾಸಿಗಳಲ್ಲಿ ಸಾಂಕ್ರಾಮಿಕ ರೋಗದ ಆತಂಕ ಹುಟ್ಟುಹಾಕುತ್ತಿದ್ದು, ಕಾಲುವೆ ಸ್ವಚ್ಛತೆಗೆ ಮುಂದಾಗದ ಅಧಿಕಾರಿಗಳ ಕ್ರಮಕ್ಕೆ ಸಾರ್ವಜನಿಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ನಗರದ ಸರಿಸುಮಾರು 50 ಸಾವಿರ ಜನಸಂಖ್ಯೆಗೆ ನಿತ್ಯ ಬಳಕೆಗೆ ಸದ್ಯ ಈ ಕೆರೆಯ ನೀರನ್ನೇ ಪೂರೈಕೆ ಮಾಡಲಾಗುತ್ತಿದೆ. ಆದರೆ ಘಟಪ್ರಭಾ ನದಿಯಿಂದ ಕೆರೆಗೆ ನೀರು ಹರಿದು ಬರಲು ಮಾಡಿರುವ ಕಾಲುವೆ ಘನತ್ಯಾಜ್ಯ ಎಸೆಯುವ ತಿಪ್ಪೆಗುಂಡಿಯಂತಾಗಿರುವುದರಿಂದ ಕೆರೆಯ ನೀರು ಮಲಿನಗೊಂಡು ಸಾರ್ವಜನಿಕರಲ್ಲಿ ರೋಗದ ಭೀತಿಯನ್ನು ಹುಟ್ಟುಹಾಕಿದೆ.

ಕಾಲುವೆ ಅಕ್ಕಪಕ್ಕ ಘನತ್ಯಾಜ್ಯ: ಮಂಟೂರು ರಸ್ತೆಯ ಬಳಿಯಿರುವ ಮುಖ್ಯ ಕಾಲುವೆಯಿಂದ ಕೆರೆಗೆ ಸಣ್ಣ ಕಾಲುವೆ ನಿರ್ಮಿಸಲಾಗಿದೆ. ಅದೇ ರೀತಿ ಮಂಡಬಸಪ್ಪನ ದೇವಸ್ಥಾನದ ಪಕ್ಕದಲ್ಲಿರುವ ಮುಖ್ಯ ಕಾಲುವೆಯಿಂದ ಮತ್ತೂಂದು ಸಣ್ಣ ಕಾಲುವೆಯನ್ನು ನಿರ್ಮಿಸಲಾಗಿದೆ. ಸದ್ಯ ಈ ಎರಡೂ ಕಾಲುವೆಯಿಂದ ಘಟಪ್ರಭಾ ನದಿ ನೀರನ್ನು ಮಹಾರಾಣಿ ಕೆರೆಗೆ ಹರಿಸಲಾಗುತ್ತದೆ. ಎರಡೂ ಸಣ್ಣ ಕಾಲುವೆಗಳು ನಗರದ ಪ್ರಮುಖ ಬಡಾವಣೆ ಪಕ್ಕದಲ್ಲಿ ಹಾದು ಹೋಗಿರುವ ಕಾರಣ ಸಾರ್ವಜನಿಕರು ಕಾಲುವೆ ಅಕ್ಕಪಕ್ಕದಲ್ಲಿಯೇ ಘನತ್ಯಾಜ್ಯ ಹಾಕುತ್ತಿದ್ದಾರೆ. ಇದರಿಂದಾಗಿ ಕಾಲುವೆ ಅಕ್ಕಪಕ್ಕ ದುರ್ವಾಸನೆ ಬೀರುತ್ತಿದೆ. ಇಲ್ಲಿಯ ನೀರೇ ಕೆರೆಯಲ್ಲಿ ಸಂಗ್ರಹಗೊಳ್ಳುವುದರಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎಂಬುದು ಸಾರ್ವಜನಿಕ ವಾದವಾಗಿದೆ.

ಗಿಡಗಂಟಿಗಳ ಬೀಡು: ಇನ್ನು ಅಂದಾಜು 1 ಕಿ.ಮೀ. ವರೆಗೆ ಇರುವ ಕಾಲುವೆ ಅಕ್ಕಪಕ್ಕದಲ್ಲಿ ಜಾಲಿಕಂಟಿ ಗಿಡಗಂಟಿ ಹೆಚ್ಚಿನ ಪ್ರಮಾಣದಲ್ಲಿ ಬೆಳದುಕೊಂಡಿದೆ. ಸಂಬಂಧಿಸಿದ ಅಧಿಕಾರಿಗಳು ಕಾಲ ಕಾಲಕ್ಕೆ ಕಾಲುವೆ ಸ್ವಚ್ಛಗೊಳಿಸದ ಕಾರಣ ಕಾಲುವೆ ಇಕ್ಕೆಲಗಳಲ್ಲಿ ಕಸಕಡ್ಡಿಯೇ ತುಂಬಿಕೊಂಡಿದೆ. ಕಸವು ಕಾಲುವೆಯಲ್ಲಿ ಬಿದ್ದು ನೀರನ್ನು ಮುಂದಕ್ಕೆ ಹರಿಬಿಡದ ಕಾರಣ ನೀರು ನಿಂತಲ್ಲಿಯೇ ನಿಂತು ಮಲಿನಗೊಂಡು ಸೊಳ್ಳಗಳ ಉತ್ಪತ್ತಿಗೂ ಕಾರಣವಾಗುತ್ತಿದೆ. ಕಾಲುವೆ ಪಕ್ಕ ಬೆಳೆದಿರುವ ಜಾಲಿಕಂಟಿಯನ್ನು ಕಂಡೂ ಕಾಣದವರಂತೆ ಅಧಿ ಕಾರಿಗಳು ವರ್ತಿಸುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಕಾಲುವೆ
ಇಕ್ಕೆಲುಗಳಲ್ಲಿರುವ ಜಾಲಿಕಂಟಿ ತೆರವುಗೊಳಿಸಿ ನೀರು ಸರಾಗವಾಗಿ ಹರಿದುಹೋಗಲು ಅನುವು ಮಾಡಿಕೊಡಬೇಕು ಎಂಬುದು ಸ್ಥಳೀಯರ ಆಗ್ರಹ.

ಭಯ ಉಟ್ಟಿಸುವ ವೈದ್ಯಕೀಯ ತ್ಯಾಜ್ಯ: ಕಾಲುವೆ ಕೆಲ ಭಾಗದಲ್ಲಿ ವೈದ್ಯಕೀಯ ತ್ಯಾಜ್ಯವನ್ನು ಸುರಿದಿರುವುದು ಸಾರ್ವಜನಿಕರ ಆತಂಕವನ್ನು ಹೆಚ್ಚುವಂತೆ ಮಾಡಿದೆ. ವೈದ್ಯಕೀಯ ತ್ಯಾಜ್ಯ ನೀರಿನೊಂದಿಗೆ ಬೆರೆತು ಸಾಂಕ್ರಾಮಿಕ ರೋಗ ಉಲ್ಬಣಿಸುವ ಪರಿಸ್ಥಿತಿ ಇದ್ದು ಸಂಬಂ ಧಿಸಿದ ಅಧಿಕಾರಿಗಳು ಕಾಲುವೆ ಸ್ವತ್ಛತೆಗೆ ಕ್ರಮ ವಹಿಸಿಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದಾರೆ. ಕೆರೆಯಲ್ಲಿನ ನೀರು ತಿಂಗಳುಗಟ್ಟಲೆ ಸಂಗ್ರಹಗೊಳ್ಳುವುದರಿಂದ ಅದು ಮಲಿನಗೊಳ್ಳುವ ಸಂಭವ ಹೆಚ್ಚಿರುತ್ತದೆ. ಹರಿದು ಬರುವ ನೀರು ಶುದ್ಧವಾಗಿದ್ದರೆ ಮಾತ್ರ ಸಾರ್ವಜನಿಕ ಬಳಕೆಗೆ ಯೋಗ್ಯ. ಆದರೆ ತ್ಯಾಜ್ಯದೊಂದಿಗೆ ಬೆರೆತು ಬರುವ ನೀರಿನಿಂದ ರೋಗ ಹರಡುವ ಸಂಭವ ಹೆಚ್ಚಿದ್ದು ಅಧಿಕಾರಿಗಳು ಅನಾಹುತ ಸಂಭವಿಸುವ ಮುನ್ನವೇ ಎಚ್ಚೆತ್ತು ಕಾಲುವೆಯನ್ನು ಸ್ವತ್ಛಗೊಳಿಸಿ ಅಕ್ಕಪಕ್ಕದಲ್ಲಿ ಕಸ ಹಾಕದಂತೆ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕು.

ಸ್ಪಷ್ಟತೆ ಇಲ್ಲ: ಇನ್ನು ಕಾಲುವೆಗೆ ಸಂಬಂಧಿಸಿದಂತೆ ಜಿಎಲ್‌ ಬಿಸಿ ಹಾಗೂ ನಗರಸಭೆ ಅಧಿಕಾರಿಗಳಲ್ಲಿ ಸ್ಪಷ್ಟತೆಯೇ ಇಲ್ಲ. ಕಾಲುವೆ ಸ್ವಚ್ಛತೆ ಬಗ್ಗೆ ಜಿಎಲ್‌ಬಿಸಿ ಅಧಿಕಾರಿಗಳನ್ನು ಪ್ರಶ್ನಿಸಿದರೆ ನಗರವ್ಯಾಪ್ತಿಯೊಳಗಿರುವುದರಿಂದ ಸ್ವಚ್ಚತಾ ಕಾರ್ಯ ನಗರಸಭೆ ಅಧಿಕಾರಿಗಳಿಗೆ ಸಂಬಂಧಪ ಡುತ್ತದೆ ಎನ್ನುತ್ತಾರೆ. ಇನ್ನು ನಗರಸಭೆ ಅಧಿಕಾರಿಗಳನ್ನು ಪ್ರಶ್ನಿಸಿದರೆ ಅದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ, ನೀರಾವರಿ ಇಲಾಖೆಗೆ ಸಂಬಂಧಿಸುತ್ತದೆ ಎಂದು ಹಾರಿಕೆ ಉತ್ತರ ಕೊಡುತ್ತಾರೆ. ಒಟ್ಟಿನಲ್ಲಿ ಅಧಿಕಾರಿಗಳ ನಮನ್ವಯತೆ ಕೊರತೆ ಮಧ್ಯೆ ಕಾಲುವೆ ತಿಪ್ಪೆಗುಂಡಿಯಂತಾಗಿರುವುದು ದುರ್ದೈವವೆ ಸರಿ.

ಕಾಲುವೆ ನಮ್ಮ ವ್ಯಾಪ್ತಿಗೆ ಬರುವುದೇ ಎಂಬುದನ್ನು ಪರಿಶೀಲಿಸಿ ಸ್ವಚ್ಛತಾ ಕಾರ್ಯ ಕೈಗೊಳ್ಳುತ್ತೇವೆ. ಸ್ಥಳ ಪರಿಶೀಲನೆ ಬಳಿಕ ಸ್ವಚ್ಛ ತೆಗೆ ಮುಂದಾಗುತ್ತೇವೆ.
*ಶಿವಪ್ಪ ಅಂಬಿಗೇರ ನಗರಸಭೆ ಪೌರಾಯುಕ್ತ

ಗೋವಿಂದಪ್ಪ ತಳವಾರ

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

1-pV

Bagalkote; ಅಬ್ಬರದ ಮಳೆ: ಸಿಡಿಲು ಬಡಿದು ಯುವಕ ಸಾವು

1-eqwewqeqw

Bagalkote; ಕಾರಿಗೆ ಬೆಂಕಿ ಹೊತ್ತಿಕೊಂಡು ವ್ಯಕ್ತಿ ಸಜೀವ ದಹನ!

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.