World Elephant Day: ಕಾಡಾನೆಗಳ ಮೇಲೆ ದ್ವೇಷ ಸಾಧನೆ:ಎ.ಟಿ.ಪೂವಯ್ಯ ವಿಷಾದ


Team Udayavani, Aug 12, 2023, 10:55 PM IST

1-qwewqe

ಮಡಿಕೇರಿ : ಕೊಡಗು ಜಿಲ್ಲೆಯ ಹಲವೆಡೆ ಕಾಡಾನೆಗಳ ಮೇಲೆ ದ್ವೇಷ ಸಾಧನೆ ಆಗುತ್ತಿದ್ದು ವನ್ಯಜೀವಿಗಳ ಹತ್ಯೆಗಳು ನಡೆಯುವುದು ಕಂಡು ಬಂದಿದೆ. ಇದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ.ಪೂವಯ್ಯ ತಿಳಿಸಿದ್ದಾರೆ.

ಅವರು ಕುಶಾಲನಗರದ ಸಮೀಪದ ಹಾರಂಗಿ ಆನೆ ಶಿಬಿರದಲ್ಲಿ ನಡೆದ ಆನೆ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಆನೆಗಳು ಪರಿಸರದ ಭಾಗವಾಗಿದ್ದು, ಪ್ರಕೃತಿಯ ಸಂರಕ್ಷಣೆ ಆದಲ್ಲಿ ಮಾತ್ರ ಮಾನವನ ಉಳಿವುಸಾಧ್ಯ ಎಂದರು. ದೇಶದಲ್ಲಿ ಆನೆಗಳ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದ್ದು ರಾಜ್ಯದಲ್ಲಿ 6 ಸಾವಿರಕ್ಕೂ ಅಧಿಕ ಆನೆಗಳಿದ್ದು ಜಿಲ್ಲೆಯಲ್ಲಿ ಕೂಡ ಆನೆಗಳ ಸಂಖ್ಯೆ ಏರಿಕೆ ಕಂಡು ಬಂದಿದೆ. ಆನೆ ಮಾನವ ಸಂಘರ್ಷಕ್ಕೆ ನಾವುಗಳೇ ಪರಿಹಾರ ಹುಡುಕಬೇಕಾಗಿದೆ. ಅವುಗಳ ಸಂರಕ್ಷಣೆ ನಮ್ಮಿಂದಲೇ ಆಗಬೇಕಾಗಿದೆ ಎಂದರು.

ಈ ಸಂದರ್ಭ ಮಾತನಾಡಿದ ವನ್ಯಜೀವಿ ತಜ್ಞರಾದ ಡಾ ಚಿಟ್ಟಿಯಪ್ಪ, ಆನೆಗಳ ಆಹಾರ, ಓಡಾಡುವ ಪ್ರದೇಶಗಳ ಕೊರತೆ ಹಾಗೂ ಪ್ರಾಕೃತಿಕ ಪರಿಸರ ನಾಶ ಪ್ರಸಕ್ತ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ. ಅರಣ್ಯ ನಾಶ ಕಾಡಿನಲ್ಲಿ ಕಂಡು ಬರುವ ಕಾಡ್ಗಿಚ್ಚು ಮತ್ತು ಆನೆಗಳು ವಲಸೆ ತೆರಳುವ ಸಂದರ್ಭ ಆಗುವ ಆಗುವ ಅಡ್ಡಿ ಆತಂಕಗಳು ಆನೆ- ಮಾನವ ಸಂಘರ್ಷಕ್ಕೆ ಪ್ರಮುಖ ಕಾರಣವಾಗಿದೆ ಎಂದು ತಿಳಿಸಿದರು.
ಕಾಡಾನೆಗಳಿಗೆ ಪ್ರತಿನಿತ್ಯ ಅಂದಾಜು 350 ಕೆಜಿ ಪ್ರಮಾಣದ ಆಹಾರ, ನೀರು ಮತ್ತು ಅವುಗಳ ಓಡಾಟಕ್ಕೆ ಅಗತ್ಯವಿರುವ 50 ರಿಂದ 60 ಕಿಲೋಮೀಟರ್ ಸುತ್ತಳತೆಯ ಅರಣ್ಯದ ಅಗತ್ಯತೆ ಇದೆ ಎಂದರು.

ಆನೆ ಸೂಕ್ಷ್ಮ ಪ್ರಾಣಿಯಾಗಿದ್ದು ಅದರ ಸಂರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕಾಗಿದೆ ಎಂದರು. ಇದೇ ಸಂದರ್ಭ ಮಾತನಾಡಿದ ಅವರು ಶಿಬಿರದಲ್ಲಿರುವ ಎಲ್ಲಾ ಆನೆಗಳು ಆರೋಗ್ಯಕರವಾಗಿದೆ ಎಂದು ಪ್ರತಿಕ್ರಿಯೆ ವ್ಯಕ್ತಪಡಿಸಿದರು.

ಆನೆ ದಿನಾಚರಣೆ ಅಂಗವಾಗಿ ಹಾರಂಗಿ ಶಿಬಿರದಲ್ಲಿದ್ದ ವಿಕ್ರಮ, ಕರ್ಣ, ವಿಕ್ರಮ, ರಾಮ, ಈಶ್ವರ, ಲಕ್ಷ್ಮಣ, ಏಕದಂತ ಆನೆಗಳಿಗೆ ಅಧಿಕಾರಿ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹಾಗೂ ಪ್ರವಾಸಿಗರು ಕಬ್ಬು ಬಾಳೆಹಣ್ಣು ಹಲಸು ಬಾಳೆಗೊನೆ ಹಲವು ರೀತಿಯ ತರಕಾರಿಗಳನ್ನು ನೀಡಲಾಯಿತು.

ಈ ಸಂದರ್ಭ ಕೂಡಿಗೆ ಸೈನಿಕ ಶಾಲೆಯ ವಿದ್ಯಾರ್ಥಿಗಳಿಗೆ ವನ್ಯಜೀವಿ ತಜ್ಞರಾದ ಡಾ ಚಿಟ್ಟಿಯಪ್ಪ ಆನೆಗಳ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಸೋಮವಾರಪೇಟೆ ಅರಣ್ಯ ಸಹಾಯಕ ಸಂರಕ್ಷಣಾಧಿಕಾರಿ ಎ. ಎ ಗೋಪಾಲ್, ಕುಶಾಲನಗರ ವಲಯ ಅರಣ್ಯಾಧಿಕಾರಿ ಕೆ ವಿ ಶಿವರಾಮ್, ವನ್ಯಜೀವಿ ವಲಯದ ಅಧಿಕಾರಿಗಳಾದ ವಿನೋದ್ ಬಾಬು, ಕೊಟ್ರೇಶ್, ಉಪವಲಯ ಅರಣ್ಯ ಅಧಿಕಾರಿಗಳಾದ ಅನಿಲ್ ಡಿಸೋಜಾ, ರಂಜನ್, ದೇವಯ್ಯ, ವಿಲಾಸ್,, ಶ್ರವಣ್ ಕುಮಾರ್, ಚೇತನ್ ಮಾವುತರು ಕವಾಡಿಗರು ಮತ್ತು ಸಿಬ್ಬಂದಿಗಳು ಇದ್ದರು. ಆನೆ ದಿನಾಚರಣೆ ಅಂಗವಾಗಿ ಶಿಬಿರದ ಆನೆಗಳನ್ನು ಸಿಂಗರಿಸಲಾಗಿತ್ತು.

ಟಾಪ್ ನ್ಯೂಸ್

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-kasaragodu

Parkನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ; ಕೇಂದ್ರ ವಿ.ವಿ.ಯ ವಿವಾದಿತ ಅಧ್ಯಾಪಕನ ಸೆರೆ

23-mulleria

Mulleria: 4.76 ಕೋಟಿ ರೂ. ವಂಚನೆ ಪ್ರಕರಣ; ಆರೋಪಿ ಬೆಂಗಳೂರಿನಲ್ಲಿರುವ ಶಂಕೆ

22-harangi

Madikeri: ಹಾರಂಗಿ ನಾಲೆ ಸಮೀಪ ವ್ಯಕ್ತಿಯ ಶವ ಪತ್ತೆ

19-madikeri

Madikeri: ಕಾಡೆಮ್ಮೆ ದಾಳಿ: ಗಾಯ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

Madikeri ಮೇಲುಸೇತುವೆ ಕಾಮಗಾರಿ ಪೂರ್ಣ; ಇನ್ನು ಪ್ರವಾಹದ ಭೀತಿ ಇಲ್ಲ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

Arecanut ಚಾಲಿ ಅಡಿಕೆ ಧಾರಣೆ ಏರಿಕೆ; 500 ರೂ. ಹೊಸ್ತಿಲಿನಲ್ಲಿ ಸಿಂಗಲ್‌, ಡಬ್ಬಲ್‌ ಚೋಲ್‌

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

ರಸ್ತೆ ಬದಿ ತ್ಯಾಜ್ಯ ರಾಶಿ ಬೀಳದಂತೆ ಕ್ರಮ ಕೈಗೊಳ್ಳಿ : ಪಿಡಿಒಗಳಿಗೆ ಜಿ.ಪಂ. ಸಿಇಒ ಸೂಚನೆ

4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

Rain 4 ದಿನ ಎಲ್ಲೋ ಅಲರ್ಟ್‌; ಸಿಡಿಲಿನಿಂದ ಕೂಡಿದ ಮಳೆ ಸಾಧ್ಯತೆ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

ಒಂದೇ ಮಳೆಗೆ ತುಂಬಿ ಹರಿದ ಮೃತ್ಯುಂಜಯ ನದಿ

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Wind-Rain: ವಿವಿಧೆಡೆ ಉರುಳಿ ಬಿದ್ದ ಮರಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.