Sale of Property: ಆಸ್ತಿ ಮಾರಾಟದಿಂದ ಬಂದ ಹಣದ ವಿಚಾರದಲ್ಲಿ ಮನಸ್ತಾಪ, ಕೊಲೆಯಲ್ಲಿ ಅಂತ್ಯ
ಘಟನೆಯ ಬಳಿಕ ಆರೋಪಿ ಪೊಲೀಸ್ ಠಾಣೆಗೆ ಶರಣು
Team Udayavani, Aug 14, 2023, 8:00 AM IST
ಚಿಕ್ಕಮಗಳೂರು: ಆಸ್ತಿ ಮಾರಾಟದಿಂದ ಬಂದ ಹಣದ ವಿಚಾರದಲ್ಲಿ ನಡೆದ ಮನಸ್ತಾಪ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆಸ್ತಿ ಮಾರಾಟ ಮಾಡಲು ಮಧ್ಯಸ್ಥಿಕೆ ವಹಿಸಿದ್ದ ಕಾರ್ತಿಕ್ (45)ಕೊಲೆಯಾದ ವ್ಯಕ್ತಿ. ಮಧುಗುಂಡಿ ಗ್ರಾಮದ ನಿವಾಸಿ ಸಂತೋಷ್ ಕೊಲೆ ಮಾಡಿದ ಆರೋಪಿ.
ಘಟನೆಯ ವಿವರ:
ಮಧುಗುಂಡಿ ಗ್ರಾಮದ ನಿವಾಸಿ ಸಂತೋಷ್ ರಾತ್ರಿ ಕುಡಿದ ಮತ್ತಿನಲ್ಲಿ ಆಸ್ತಿ ಮಾರಾಟ ಮಾಡಿದ ಹಣದ ವಿಚಾರದಲ್ಲಿ ಮಾತುಕತೆಗೆ ಬಂದಿದ್ದ ಕಾರ್ತಿಕ್ ಎಂಬಾತನನ್ನು ಮನೆಯೊಳಗಡೆ ಮಚ್ಚಿನಿಂದ ಹಲ್ಲೆ ನಡೆಸಿದ್ದ, ಆತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಹಲ್ಲೆ ಮಾಡುವ ಸಮಯ ಬಿಡಿಸಲು ಬಂದ ಸಂತೋಷ್ ನ ತಂದೆ ಬಾಸ್ಕರ ಗೌಡ (70 ವರ್ಷ) ಮತ್ತು ತಾಯಿ ಪ್ರೇಮ (52 ವರ್ಷ) ರವರಿಗೂ ಸಂತೋಷ್ ಮಚ್ಚಿನಿಂದ ಹಲ್ಲೆ ನಡೆಸಿದ್ದು ಗಾಯಗೊಂಡ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ. ಘಟನೆ ನಡೆದ ಬಳಿಕ ಆರೋಪಿ ಸಂತೋಷ್ ಬಾಳೂರು ಪೊಲೀಸ್ ಠಾಣೆಗೆ ತಾನಾಗಿಯೇ ಬಂದು ಶರಣಾಗಿದ್ದಾನೆ.
ಮೃತ ಕಾರ್ತಿಕ್ ಭಾಸ್ಕರ್ ಗೌಡ ರವರ ಜಮೀನನ್ನು ಬೆಂಗಳೂರು ಮೂಲದ ಉದ್ಯಮಿಗೆ ಮಾರಾಟ ಮಾಡಲು ವ್ಯಾಪಾರ ಮಾಡಿಕೊಟ್ಟಿದ್ದು, ಅದರ ಮುಂಗಡವಾಗಿ ಬಂದ 12 ಲಕ್ಷ ರೂ. ಹಣ ಕೊಡಿಸಿದ್ದು, ಅ ಹಣವನ್ನು ಭಾಸ್ಕರ್ ಗೌಡ ಅವರ ಮೊದಲ ಮಗ ಶಿವು ಕುಮಾರ್ ತೆಗೆದುಕೊಂಡು ಹೋಗಿದ್ದಾನೆ. ಈ ವಿಚಾರದಲ್ಲಿ ಮನಸ್ತಾಪಗೊಂಡ ಸಂತೋಷ್ ಕಾರ್ತಿಕ್ ನನ್ನು ಕೊಲೆ ಮಾಡಿರುವ ಸಾದ್ಯತೆ ಇದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗುಂಡೇಟಿನಿಂದ ಯುವಕ ಸಾವು: ಹೆಚ್ಚಿದ ಅನುಮಾನ
Chikkamagaluru: ಸರ್ಕಾರಿ ಜಾಗಕ್ಕೆ ಎರಡು ಸಮುದಾಯಗಳ ನಡುವೆ ಮಾರಾಮಾರಿ
Kaduru; ನಿಂತಿದ್ದ ಲಾರಿಗೆ ಟಿಟಿ ಢಿಕ್ಕಿ: ಓರ್ವ ಸಾವು, ಹಲವರಿಗೆ ಗಾಯ
Chikkamagaluru; ಮಲೆನಾಡಿಗರಲ್ಲಿ ಮಂದಹಾಸ ಮೂಡಿಸಿದ ಮಳೆರಾಯ
ಶಿವಮೊಗ್ಗದಿಂದ ಮೈಸೂರಿಗೆ ಬರುತ್ತಿದ್ದ ಐರಾವತ ಬಸ್ ಬೆಂಕಿಗಾಹುತಿ… ತಪ್ಪಿದ ಭಾರಿ ದುರಂತ
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ
Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ
Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ
Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ
ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್