Tirthahalli; ಜನ ಬೀದಿಗಿಳಿದು ಚಾಟಿ ತೆಗೆದುಕೊಳ್ಳಬೇಕು : ಆರಗ ಜ್ಞಾನೇಂದ್ರ


Team Udayavani, Aug 14, 2023, 4:08 PM IST

1—–adasd-a

ತೀರ್ಥಹಳ್ಳಿ : ಬಿಟ್ಟಿ ಭಾಗ್ಯ ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿದ್ದು ಅಧಿಕಾರಕ್ಕೆ ಬಂದ ಮೇಲೆ ಸರ್ಕಾರ ನೆಡೆಸಲು ಆಗುತ್ತಿಲ್ಲ. ಹಾಗಾಗಿ ಬಾಯಿಮಾತಿನಲ್ಲಿ ಅಧಿಕಾರಿಗಳಿಗೆ ವಿದ್ಯುತ್ ನಿಲ್ಲಿಸಲು ಹೇಳಿದ್ದಾರೆ ಇದರಿಂದ ಹಲವರಿಗೆ ತೊಂದರೆ ಆಗುತ್ತಿದೆ ಎಂದು ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸೋಮವಾರ ಪಟ್ಟಣದ ತಾಲೂಕು ಕಚೇರಿ ಎದುರು ಪ್ರತಿಭಟನೆ ನೆಡೆಸಿ ಮಾತನಾಡಿ ಗಂಟೆ ಗಟ್ಟಲೆ ಲೋಡ್ ಶೇಡ್ಡಿಂಗ್ ಮಾಡುತ್ತಿದ್ದು ಇದರಿಂದ ವಿದ್ಯಾರ್ಥಿಗಳಿಗೆ, ವರ್ಕ್ ಶಾಪ್ ಮಾಲಕರಿಗೆ, ಹಿಟ್ಟಿನ ಅಂಗಡಿಯವರಿಗೆ ಕೆಲಸ ನಿಲ್ಲಿಸುವ ಕೆಲಸ ಸರ್ಕಾರ ಮಾಡುತ್ತಿದೆ. ಈ ರಾಜ್ಯದ ಆರ್ಥಿಕತೆ ದುಸ್ಥಿತಿಗೆ ಬರುತ್ತಿದೆ. 200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿ ವಿದ್ಯುತ್ ಕಡಿತಗೊಳಿಸಿದರೆ ಉಚಿತ ವಿದ್ಯುತ್ ಕೊಡುವುದೇನು ಎಂದು ಪ್ರೆಶ್ನೆ ಮಾಡಿದರು.

ಮಹಿಳೆಯರಿಗೆ ಬಸ್ ನಲ್ಲಿ ಉಚಿತ ಎಂದರು. ಕಳೆದ ತಿಂಗಳು 720 ಕೋಟಿ ಕೆ ಎಸ್ ಆರ್ ಟಿ ಸಿ ಗೆ ಕಟ್ಟಬೇಕು.120ಕೋಟಿ ಕಟ್ಟಿದ್ದಾರೆ.ಮುಂದಿನ ತಿಂಗಳಿನಿಂದ ಬಸ್ ಗಳಿಗೆ ಡೀಸೆಲ್ ಇಲ್ಲ. ನೌಕರರಿಗೆ ಸಂಬಳ ಕೊಡಲು ಆಗುವುದಿಲ್ಲ. ಇನ್ನೆರಡು ತಿಂಗಳು ಕಳೆದರೆ ಮೆಸ್ಕಾಂ ನಲ್ಲಿ ಕೆಲಸ ಮಾಡುವ ನೌಕರರಿಗೂ ಸಂಬಳ ಕೊಡಲು ಆಗುವುದಿಲ್ಲ. ಇಡೀ ದೇಶದಲ್ಲಿಯೇ ಕರ್ನಾಟಕದಲ್ಲಿ ಕಾಂಗ್ರೆಸ್ ಬಂದಿದ್ದು ಹೆಮ್ಮೆಯ ಸಂಗತಿ ಎನ್ನುತ್ತಾರೆ ಆದರೆ ಅವರ ಮುಂದಿನ ಗುರಿ ರಾಜ್ಯದ ಜನರಿಗೆ ಒಳ್ಳೆಯದು ಮಾಡುವುದಲ್ಲ ಲೋಕಸಭಾ ಚುನಾವಣೆ ಗೆಲ್ಲುವುದು ಎಂದರು.

ಇವರನ್ನು ಪ್ರಕೃತಿ ಕೂಡ ವಿರೋಧಿಸುತ್ತದೆ. ಎಲ್ಲರೂ ಯಾವಾಗಲು ಹೇಳುತ್ತಿರುತ್ತಾರೆ. ಸಿದ್ದರಾಮಯ್ಯ ಸರ್ಕಾರ ಬಂದಾಗ ಬರ. ಯಡಿಯೂರಪ್ಪ ಸರ್ಕಾರ ಬಂದಾಗ ಅತಿವೃಷ್ಟಿ, ನೆರೆ, ಸಮೃದ್ಧಿ. ಯಾಕೆ ಎಂದರೆ ಕಾಂಗ್ರೆಸ್ ನವರು ಮಾಡುವ ಅನ್ಯಾಯಕ್ಕೆ ಪ್ರಕೃತಿ ಕೂಡ ಸಿಟ್ಟಾಗಿದೆ. ಈಗ ಆಗಸ್ಟ್ ತಿಂಗಳಲ್ಲಿ ಮೇ ತಿಂಗಳ ಹಾಗೆ ಆಗಿದೆ. ಗದ್ದೆ ನಾಟಿ ಮಾಡಲು ಆಗುತ್ತಿಲ್ಲ. ನೀರಿಲ್ಲ, ವಿದ್ಯುತ್ ಇಲ್ಲ, ಸರ್ಕಾರ ನೆಡೆಸಲು ಆಗದಿದ್ದರೆ ಜನರ ಬಳಿ ಕ್ಷಮೆ ಕೇಳಿ ಹೋಗಬೇಕು. ಸರ್ಕಾರ ಹೀಗೆ ನೆಡೆಯೋದು ಹಾಗಾಗಿ ಜನ ಬೀದಿಗಿಳಿದು ಚಾಟಿ ತೆಗೆದುಕೊಳ್ಳಬೇಕು ಎಂದು ಆಕ್ರೋಶ ಭರಿತರಾಗಿ ಮಾತನಾಡಿದರು.

ನಮ್ಮ ಸರ್ಕಾರ ಇರುವಾಗ ಕಾರ್ ಇದ್ದವರಿಗೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗಿತ್ತು ಆದರೆ ಆಗ ನಾನೇ ಇದು ಆಗುವುದಿಲ್ಲ ಎಂದು ಹೇಳಿದ್ದೆ. ಸಣ್ಣ ಪುಟ್ಟ ಕೆಲಸ ಮಾಡುವವರು ಕಾರ್ ತೆಗೆದುಕೊಂಡಿರುತ್ತಾರೆ. ಅಂತವರ ಬಿಪಿಎಲ್ ಕಾರ್ಡ್ ರದ್ದು ಮಾಡಿದರೆ ಆ ಕುಟುಂಬದ ಕಥೆ ಏನು? ಹಾಗಾಗಿ ನಮ್ಮ ಸರ್ಕಾರ ಕೊಡಲೇ ಆ ಆದೇಶ ವಾಪಾಸ್ ತೆಗೆದುಕೊಂಡಿತ್ತು. ಕಾರ್ ತೆಗೆದುಕೊಂಡು ಬಾಡಿಗೆ ಹೊಡೆಯುವವರು ಇದ್ದಾರೆ. ಅವರಿಗೆ 2 ದಿನಕ್ಕೂ ಬಾಡಿಗೆ ಸಿಗಲ್ಲ ಅಂತವರ ಕುಟುಂಬದ ಕಥೆ ಏನಾಗುತ್ತೆ? ಬಡವರ ಅನ್ನವನ್ನು ಕಸಿಯುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಾಲೆಕೊಪ್ಪ ರಾಮಚಂದ್ರ, ಬಾಳೆಬೈಲು ರಾಘವೇಂದ್ರ, ಸಂದೇಶ್ ಜವಳಿ, ಕಾಸರವಳ್ಳಿ ಶ್ರೀನಿವಾಸ, ಸುಮಾ ರಾಮಚಂದ್ರ, ನಾಗರಾಜ್ ಶೆಟ್ಟಿ, ಕುಕ್ಕೆ ಪ್ರಶಾಂತ್ ಸೇರಿದಂತೆ ಅನೇಕ ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

Prajwal ಎಲ್ಲಿದ್ದೀಯಪ್ಪಾ? ಬಂದುಬಿಡು: ಎಚ್‌ಡಿಕೆ

1-ub

Uber ಬಸ್‌ಗಳು ದಿಲ್ಲಿಯ ರಸ್ತೆಯಲ್ಲಿ ಓಡಲಿದೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

ಅವ್ಯವಸ್ಥೆ… ಕಾಶಿಯಲ್ಲಿ ಕಾಲು ಸಂಕ- ಬಟ್ಟೆ ಒಗೆಯುವ ಕಲ್ಲಾಗಿದೆ ಕೆಳದಿ ಸಾಮ್ರಾಜ್ಯದ ಶಾಸನ

1-wrerwer

Shivamogga:ಮಳೆ ಬಂತೆಂದು ಖುಷಿಪಡುತ್ತಿದ್ದ ರೈಲು ಪ್ರಯಾಣಿಕರಿಂದಲೇ ಹಿಡಿಶಾಪ!

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

Shimoga; ಪ್ಲಾಸ್ಟಿಕ್ ನುಂಗಿದ್ದ ಹಾವು ರಕ್ಷಣೆ

ayanuru-Manjunath

BJPಯಲ್ಲಿ ನನಗೆ ಅನ್ಯಾಯವಾದಾಗ ರಘುಪತಿ ಭಟ್ ಸ್ಪರ್ಧೆ ಬೇಡ ಅಂದಿದ್ದರು: ಆಯನೂರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

1-adsadasdas

IPL ಮೊದಲ ಕ್ವಾಲಿಫೈಯರ್‌ ಇಂದು; ಕೆಕೆಆರ್‌-ಹೈದರಾಬಾದ್‌ ಬಿಗ್‌ ಹಿಟ್ಟರ್ ಫೈಟ್‌

1-raisi

Iran ತೀವ್ರಗಾಮಿ ಅಧ್ಯಕ್ಷ ಕಟ್ಟರ್‌ ಸಂಪ್ರದಾಯವಾದಿ ರೈಸಿ ಸಾವಿನ ಸುತ್ತ ನಾನಾ ಕತೆ

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

ಮೇಲ್ಮನೆಯಲ್ಲೂ ಕಾಂಗ್ರೆಸ್‌ಗೆ ಬಹುಮತ?

1-wewew

Dubai; 12 ವರ್ಷದ ಯತ್ನ: 8 ಕೋಟಿ ರೂ. ಗೆದ್ದ ಭಾರತೀಯ ಮಹಿಳೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.