ಬ್ರಿಟಿಷರ ವಿರುದ್ಧ ಚಳವಳಿ; ಕರಾವಳಿಯ ಮೊದಲ ದಂಪತಿ; ತಾಯಿ ಮಡಿಲಿಗೆ ಮಗುವನ್ನೊಪ್ಪಿಸಿ ಜೈಲಿಗೆ!

ಪೊಲೀಸರು ಅವರನ್ನು ಬಂಧಿಸಿ ವೆಲ್ಲೂರು ಜೈಲಿಗೆ ಕಳುಹಿಸಿದರು. 6 ತಿಂಗಳು ಜೈಲಿನಲ್ಲಿದ್ದರು.

Team Udayavani, Aug 15, 2023, 11:27 AM IST

ಬ್ರಿಟಿಷರ ವಿರುದ್ಧ ಚಳವಳಿ; ಕರಾವಳಿಯ ಮೊದಲ ದಂಪತಿ; ತಾಯಿ ಮಡಿಲಿಗೆ ಮಗುವನ್ನೊಪ್ಪಿಸಿ ಜೈಲಿಗೆ!

ಕಾರ್ಕಳ: ಬ್ರಿಟಿಷರ ವಿರುದ್ಧದ ಚಳವಳಿಯಲ್ಲಿ ಭಾಗವಹಿಸಿದ ಕರಾವಳಿ ಜಿಲ್ಲೆಯ ಮೊದಲ ದಂಪತಿಯೆಂಬ ಹೆಗ್ಗಳಿಕೆ ಕಾರ್ಕಳದ ಎಂ.ಡಿ. ಅಧಿಕಾರಿ- ಕಮಲಾವತಿ ದಂಪತಿಯದ್ದು. ಮಗುವಿಗೆ ಒಂದು ವರ್ಷವಿರುವಾಗಲೇ ತಮ್ಮ ತಾಯಿಯ ಮಡಿಲಿಗೆ ಮಗುವನ್ನು ಒಪ್ಪಿಸಿ ಜೈಲು ಸೇರಿದ್ದರು ಹೋರಾಟಗಾರ್ತಿ ಕಮಲಾವತಿಯವರು.

ಹುಟ್ಟಿದ್ದು 1921ರಲ್ಲಿ. ಪುತ್ತೂರು ಪಡುಕುಡೂರು ಬೀಡು ನಿವಾಸಿ ಅಂತಪ್ಪ ಕೊಂಡೆ. ತಾಯಿ ಪುತ್ತೂರು ಪಡಾಯೂರುಗುತ್ತು ನಿವಾಸಿ ಚೆಲುವಮ್ಮ. ಕಲಿತದ್ದು ಪುತ್ತೂರಿನಲ್ಲಿ ಎಂಟನೇ ತರಗತಿ. 17ನೇ ವಯಸ್ಸಿನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮುದ್ರಾಡಿ ಬೀಡು ನಿವಾಸಿ ಎಂ. ಧರ್ಮರಾಜ (ಎಂ.ಡಿ.) ಅಧಿಕಾರಿ ಅವರ ಜತೆ ವಿವಾಹ. 18ನೇ ವಯಸ್ಸಿನಲ್ಲಿ ಗಂಡು ಮಗುವಿಗೆ ಜನ್ಮ. ಎಂ.ಡಿ. ಅಧಿಕಾರಿ ಗಾಂಧೀಜಿ ಜತೆಗೆ ದೂರವಾಣಿಯಲ್ಲಿ ಒಮ್ಮೆ ಸತ್ಯಾಗ್ರಹದ ಕುರಿತು ಮಾತನಾಡುತ್ತಿದ್ದಾಗ, ಮಹಿಳೆಯರೂ ಭಾಗವಹಿಸಬೇಕು ಎಂದಿದ್ದನ್ನು ಕೇಳಿಸಿಕೊಂಡ ಕಮಲಾವತಿ ಪುತ್ತೂರಿನಲ್ಲೇ ಮಹಿಳಾ ಸಂಘಟನೆ ಹುಟ್ಟು ಹಾಕಿ ಹೋರಾಟಕ್ಕೆ ಇಳಿದರು. ಪೊಲೀಸರು ಅವರನ್ನು ಬಂಧಿಸಿ ವೆಲ್ಲೂರು ಜೈಲಿಗೆ ಕಳುಹಿಸಿದರು. 6 ತಿಂಗಳು ಜೈಲಿನಲ್ಲಿದ್ದರು.

ಎಂ.ಡಿ. ಅಧಿಕಾರಿ ಕಾರ್ಕಳ ತಾಲೂಕಿನ ಮುದ್ರಾಡಿಯಲ್ಲಿ 1913 ಆ. 1ರಂದು ಜನನ. ಸೂಡಿ ಭೋಜಪ್ಪ ಹೆಗ್ಗಡೆ ಮತ್ತು ಶಿವದೇವಿ ದಂಪತಿಯ ಪುತ್ರ. ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದ ಅವರು 1942ರಲ್ಲಿ ಮಂಗಳೂರಿನಲ್ಲಿ ನಡೆದ ಸಭೆಯಲ್ಲಿ ಭಾಷಣ ಮಾಡಿ ಪೊಲೀಸರ ಲಾಠಿ ಏಟು ತಿಂದಿದ್ದರು. ತಲೆಗೆ ಬಲವಾದ ಗಾಯಗಳಾಗಿದ್ದವು. ಪ್ರಜ್ಞೆ ತಪ್ಪಿತು.

ಬಿಟ್ಟರೇ ಈಗಲೇ ಮೈದಾನಕ್ಕೆ ಹೋಗುವೆ
ಲಾಠಿ ಏಟು ತಿಂದ ಎಂ.ಡಿ. ಅಧಿಕಾರಿಯವರಿಗೆ ಪ್ರಜ್ಞೆ ಮರಳಿದಾಗ ಚಿಕಿತ್ಸೆ ನೀಡಿದ ವೈದ್ಯರು, ಮರಳಿ ಮೈದಾನಕ್ಕೆ ಹೋಗುತ್ತೀರಾ ಎಂದು ಕೇಳಿದ್ದರಂತೆ. “ನೀವು ಬಿಟ್ಟರೆ ಈಗಲೇ ಹೋಗುವೆ’ ಎಂದಿದ್ದರಂತೆ ಅವರು. ಚೇತರಿಸಿಕೊಂಡ ಅಧಿಕಾರಿಯವರನ್ನು ಮತ್ತೆ ಬಂಧಿಸಿ ಬಳ್ಳಾರಿ ಜೈಲಿಗೆ ಕಳುಹಿಸಲಾಯಿತು. ಒಂದು ವರ್ಷ ಕಠಿನ ಶಿಕ್ಷೆ ಅನುಭವಿಸಿದ್ದರು. ಅನಂತರದ ದಿನಗಳಲ್ಲಿ ಕೇಂದ್ರ ಸರಕಾರ ಸ್ವಾತಂತ್ರ್ಯ ಹೋರಾಟಗಾರರಿಗೆ ಕೊಡಮಾಡಿದ ಗೌರವಧನವನ್ನು ದೇಶಭಕ್ತಿಯಿಂದ ನಿರಾಕರಿಸಿದ್ದ ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರರು ಇವರು.

ಟಾಪ್ ನ್ಯೂಸ್

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.