1934ರಲ್ಲಿ ಕುಂದಾಪುರಕ್ಕೆ ಭೇಟಿ ನೀಡಿದ ಗಾಂಧೀಜಿ; ಸಾತಂತ್ರ್ಯ ಹೋರಾಟದ ಸ್ಥಳಗಳು: ಅಂದು ಇಂದು

ಕುಂದಾಪುರದ ಕೋಟೆ ಬಾಗಿಲಲ್ಲಿ ಉಗಿ ಹಡಗಿನ ಮೂಲಕ ಕಾರವಾರದತ್ತ ಪ್ರಯಾಣ ಬೆಳೆಸಿದರು

Team Udayavani, Aug 15, 2023, 11:40 AM IST

1934ರಲ್ಲಿ ಕುಂದಾಪುರಕ್ಕೆ ಭೇಟಿ ನೀಡಿದ ಗಾಂಧೀಜಿ; ಸಾತಂತ್ರ್ಯ ಹೋರಾಟದ ಸ್ಥಳಗಳು: ಅಂದು ಇಂದು

ಕುಂದಾಪುರ: 1934ರ ಫೆ. 24-25ರಂದು ಅಂದಿನ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದ ಸಂದರ್ಭದಲ್ಲಿ ಮಹಾತ್ಮಾ ಗಾಂಧೀಜಿ ಕುಂದಾಪುರಕ್ಕೆ ಭೇಟಿ ನೀಡಿದ್ದರು. ಫೆ. 25ರ ರಾತ್ರಿ 8 ಗಂಟೆ ಸುಮಾರಿಗೆ ಕುಂದಾಪುರಕ್ಕೆ ಆಗಮಿಸಿದ್ದ ಗಾಂಧೀಜಿಯವರು ಇಲ್ಲಿನ ನರಿಬ್ಯಾಣ (ನರಿಬೇಣ- ಈಗ ಅದುವೇ ಗಾಂಧಿ ಮೈದಾನವಾಗಿದೆ) ಮೈದಾನದಲ್ಲಿ ಸಾವಿರಾರು ಜನರು ಸೇರಿದ್ದ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದ್ದರು. ಆಗ 80 ವರ್ಷದ ಹಿರಿಯ ಮುತ್ಸದ್ಧಿ ಮಂಜಯ್ಯ ಶೇರಿಗಾರ್‌, ಖಿಲಾಫತ್‌ ಮತ್ತಿತರ ಪ್ರಮುಖರಿದ್ದರು. ಅಲ್ಲಿ ಸೇರಿದ್ದ ಜನರು ಸ್ವಯಂಪ್ರೇರಿತರಾಗಿ ಹರಿಜನ ನಿಧಿ ಹಾಗೂ ಭೂಕಂಪ ನಿಧಿಗೆ ತಮ್ಮ ದೇಣಿಗೆ ನೀಡಿದ್ದರು. ಆ ಸಭೆಯ ಕೊನೆಯಲ್ಲಿ ಕೊಟ್ಟ ಉಡುಗೊರೆಗಳನ್ನೆಲ್ಲ ಹರಾಜು ಹಾಕಿದಾಗ ಬಂದ ಹಣ 400 ರೂ. ಅದನ್ನು ಸಹ ನಿಧಿಗೆ ಸಮರ್ಪಣೆ ಮಾಡಲಾಗಿತ್ತು.

ಆ ದಿನ ರಾತ್ರಿ ನರಿಬ್ಯಾಣ ಮೈದಾನದ ಬಲಭಾಗದಲ್ಲೇ ಇದ್ದ ಸ್ವಾತಂತ್ರ್ಯ ಹೋರಾಟಗಾರ ಗೋಪಾಲಕೃಷ್ಣ ಕಾಮತ್‌ ಅವರ ಮನೆಯಲ್ಲಿ ಗಾಂಧಿ ವಾಸ್ತವ್ಯ ಹೂಡಿದ್ದರು. ಆ ಮನೆಯನ್ನೀಗ ಶಾಂತಿ ನಿಕೇತನ ಎಂದು ಕರೆಯಲಾಗುತ್ತಿದೆ. ಅದೀಗ ಶಾಂತಿನಿಕೇತನ ವಾರ್ಡ್‌ ಆಗಿದೆ. ಫೆ. 26ರಂದು ಗಾಂಧೀಜಿಯವರ ವಾರದ ಮೌನ ದಿನ. ಆ ದಿನ ಅವರು ಯಾರೊಂದಿಗೂ
ಮಾತನಾಡುತ್ತಿರಲಿಲ್ಲ. ಇಡೀ ದಿನವನ್ನು ಅವರು ಕುಂದಾಪುರದಲ್ಲಿ ಮೌನವಾಗಿಯೇ ಕಳೆದರು. ಮರುದಿನ ಬೆಳಗ್ಗೆ ಕುಂದಾಪುರದ ಕೋಟೆ ಬಾಗಿಲಲ್ಲಿ ಉಗಿ ಹಡಗಿನ ಮೂಲಕ ಕಾರವಾರದತ್ತ ಪ್ರಯಾಣ ಬೆಳೆಸಿದರು. ಗಾಂಧಿಯವರ ಕುಂದಾಪುರ ಭೇಟಿ ಇಲ್ಲಿನ ಜನಸಾಮಾನ್ಯರ ಮೇಲೆ ಬಹುದೊಡ್ಡ ಪರಿಣಾಮವನ್ನು ಬೀರಿದ್ದಲ್ಲದೆ, ಸ್ವಾತಂತ್ರ್ಯ ಹೋರಾಟ ಸಂಘಟನಾತ್ಮಕ ಸ್ವರೂಪವು ಪಡೆದುಕೊಳ್ಳಲು ಕಾರಣವಾಯಿತು

ಸಾತಂತ್ರ್ಯ ಹೋರಾಟದ ಸ್ಥಳಗಳು: ಅಂದು ಇಂದು
ಕುಂದಾಪುರ: ಪುರಸಭೆಯ 23 ವಾರ್ಡ್‌  ಗಳಲ್ಲಿ ಶಾಂತಿ ನಿಕೇತನವೂ ಒಂದು. ಶಾಸ್ತ್ರೀ ವೃತ್ತದಿಂದ ಸರ್ವಿಸ್‌ ರಸ್ತೆಯಲ್ಲಿ ಸಾಗುವಾಗ ಶಾಂತಿನಿ ಕೇತನ ಎಂಬ ಕಬ್ಬಿಣದ ಸ್ವಾಗತ ಕಮಾನು ಸಿಗುತ್ತದೆ. ಅದರ ಬುಡದಲ್ಲೇ “ಶಾಂತಿ ನಿಕೇತನ ಗಾಂಧಿ ನೆಹರೂ ನಿಲಯ 1934, 1937′ ಎಂದಿದೆ. ಶಾಂತಿನಿಕೇತನ ಎಂಬ ಮನೆಯಲ್ಲಿ ಗಾಂಧಿ ತಂಗಿದ್ದರು. ನೆಹರೂ ಮತ್ತು ಇಂದಿರಾ ಗಾಂಧಿ ಇದೇ ಮನೆಯಲ್ಲಿ ಉಳಿದಿದ್ದ ರಂತೆ. 1934ರ ಫೆ. 25ರ ರಾತ್ರಿ 8ಕ್ಕೆ ಕುಂದಾಪುರ ತಲುಪಿದ್ದ ಗಾಂಧಿ ಸಾಹುಕಾರ್‌ ಮಂಜಯ್ಯ
ಶೇರಿಗಾರ್‌ ಅಧ್ಯಕ್ಷತೆಯ ಸಭೆಯಲ್ಲಿ ಅಸ್ಪೃಶ್ಯತೆ ವಿರುದ್ಧ ಬಗ್ಗೆ ಭಾಷಣ ಮಾಡಿದ್ದರು.

ಬಳಿಕ ತಮಗೆ ಬಂದ ಉಡುಗೊರೆಗಳನ್ನು ಹರಾಜು ಹಾಕಿ 400 ರೂ.ಗಳನ್ನು ಬಿಹಾರದ ಅತಿವೃಷ್ಟಿ ಪರಿಹಾರ ನಿಧಿಗೆ ಸಂಗ್ರಹಿಸಿದ್ದರು. ರಾತ್ರಿ ನಾರಾಯಣ ಕಾಮತ್‌ರ ಶಾಂತಿನಿಕೇತನದಲ್ಲಿ ಉಳಿದು, ಫೆ. 26ರಂದು ಮುಂಜಾನೆ ಪ್ರಾರ್ಥನಾ ಸಭೆಯಲ್ಲಿ ಭಾಗವಹಿಸಿದ್ದರು. ಬಳಿಕ ಇಡೀ ದಿನ ಮೌನವ್ರತ ಆಚರಿಸಿದ್ದರು. ಮರು ದಿನ ಗಂಗೊಳ್ಳಿಗೆ ತೆರಳಿ “ದಯಾವತಿ’ ಎಂಬ ಉಗಿ ಹಡಗಿನಲ್ಲಿ ಕಾರವಾರಕ್ಕೆ ಹೋದರು. ಶಾಂತಿ ನಿಕೇತನದಲ್ಲಿ ನಾರಾಯಣ ಕಾಮತರ ಪುತ್ರ ಗೋಪಾಲಕೃಷ್ಣ ಕಾಮತ್‌ ವಾಸವಿದ್ದರು. 1960ರಲ್ಲಿ ಗಾಂಧೀಜಿ ನೆನಪಿನಲ್ಲಿ ಸ್ವಾಗತ ಕಮಾನು ರಚಿಸಿ ರಸ್ತೆಗೆ ಶಾಂತಿನಿಕೇತನ ಎಂಬ ಹೆಸರು ಇಡಲಾಯಿತು. ಕೆಲವು ವರ್ಷಗಳ ಹಿಂದೆ ಈ ಜಾಗವನ್ನು ಸುರೇಶ್‌ ಬೆಟ್ಟಿನ್‌ ಖರೀದಿಸಿದ್ದಾರೆ. ಈಗ ಹಳೆಯ ಮನೆ ಇಲ್ಲ. ಒಟ್ಟು ಕುರುಹಾಗಿ
ಸ್ವಾಗತ ಕಮಾನು ಮಾತ್ರ ಇದೆ.

ನರಿಬೇಣ ಎನ್ನಲಾಗುತ್ತಿದ್ದ ಈಗಿನ ಗಾಂಧಿ, ನೆಹರೂ ಮೈದಾನದಲ್ಲಿ ಉಪ್ಪಿನ ಸತ್ಯಾಗ್ರಹವೂ ಸೇರಿದಂತೆ ಸ್ವಾತಂತ್ರ್ಯದ ಹೋರಾಟಗಳು ನಡೆದಿವೆ. 60-70 ವರ್ಷಗಳ ಹಿಂದಿನ ರೇಡಿಯೋ ಕೇಂದ್ರ ಈಗಲೂ ಇದೆ. ಮಾಸ್ತಿಕಟ್ಟೆ ಎಂಬಲ್ಲಿ ಹೋರಾಟದ ರೂಪರೇಖೆ ತಯಾರಾಗುತ್ತಿದ್ದವು.

ಟಾಪ್ ನ್ಯೂಸ್

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

T20 World Cup; Dwayne Bravo is the Afghanistan bowling consultant

T20 World Cup; ಡ್ವೇನ್‌ಬ್ರಾವೊ ಅಫ್ಘಾನ್‌ ಬೌಲಿಂಗ್‌ ಸಲಹೆಗಾರ

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

Molakalmuru ಆಸ್ಪತ್ರೆಯಲ್ಲಿ ಮೊಂಬತ್ತಿಯಲ್ಲಿ ಚಿಕಿತ್ಸೆ!

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ

ಕಾಂಗ್ರೆಸ್‌ಗೆ 5 ಸ್ಥಾನದಲ್ಲಿ ಗೆಲುವು: ರಾಮಲಿಂಗಾ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

Uppunda ಅಪರಿಚಿತ ವಾಹನ ಢಿಕ್ಕಿ; ಕೂಲಿ ಕಾರ್ಮಿಕ ಸಾವು

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Siddapura ಪುಸಲಾಯಿಸಿ ವಿದ್ಯಾರ್ಥಿನಿ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

Byndoor ಟಿ.ಸಿ. ವಿಷಯ: ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

MAHE

MAHE ಟೈಮ್ಸ್‌ ಉನ್ನತ ಶಿಕ್ಷಣ ಯುವ ವಿ.ವಿ. ಶ್ರೇಯಾಂಕ: ಮಾಹೆಗೆ 175ನೇ ಸ್ಥಾನ

ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

IPL 2024; ಸ್ಟಾರ್ಕ್‌ ಸುಂಟರಗಾಳಿ ; ಕೋಲ್ಕತಾ ಫೈನಲ್‌ ಸವಾರಿ

puPU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

PU ಪರೀಕ್ಷೆ-2: ವಿಜ್ಞಾನ ವಿದ್ಯಾರ್ಥಿಗಳದ್ದೇ ಸಿಂಹಪಾಲು

T20 World Cup: McGurk is Australia’s reserve player

T20 World Cup: ಮೆಕ್‌ಗರ್ಕ್‌ ಆಸ್ಟ್ರೇಲಿಯದ ಮೀಸಲು ಆಟಗಾರ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

ಸಾಲ ಮರುಪಾವತಿ ಮಾಡದಿದ್ದಕ್ಕೆ ಪತ್ನಿ, ಪುತ್ರನಿಗೆ ಗೃಹ ಬಂಧನ: ರೈತ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.