Mudhol ವಿವಿಧ ಪ್ರಕರಣ; ಲಕ್ಷಾಂತರ ಮೌಲ್ಯದ ವಸ್ತು ವಶ; ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಸಿಬ್ಬಂದಿಗೆ ಡಿವೈಎಸ್ಪಿ ಬಹುಮಾನ ಘೋಷಣೆ

Team Udayavani, Aug 16, 2023, 8:12 PM IST

Mudhol ವಿವಿಧ ಪ್ರಕರಣ; ಲಕ್ಷಾಂತರ ಮೌಲ್ಯದ ವಸ್ತು ವಶ; ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ

ಮುಧೋಳ: ವಿವಿಧ ಪ್ರಕರಣ ಭೇದಿಸುವಲ್ಲಿ ಯಶಸ್ವಿಯಾದ ನಗರದ ಪೊಲೀಸರು ಬರೋಬ್ಬರಿ 24,58,400 ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಡಿವೈಎಸ್ಪಿ ಶಾಂತವೀರ ಈ. ತಿಳಿಸಿದರು.
ನಗರದ ಆರಕ್ಷಕ ವೃತ್ತ ನಿರೀಕ್ಷಕ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾಹಿತಿ ಹಂಚಿಕೊಂಡರು.

ಸಕ್ಕರೆ ಲಾರಿ ವಶ: ನಿರಾಣಿ ಕಾರ್ಖಾನೆಯಲ್ಲಿನ ಸಕ್ಕರೆ ತುಂಬಿಕೊಂಡು ನಿಗದಿತ ಸ್ಥಳಕ್ಕೆ ಸಾಗಿಸದೆ ಚಾಲಕ ಸಕ್ಕರೆಯನ್ನು ಬೇರೆಡೆ ಸಾಗಿಸಿದ್ದ. ಈ ಬಗ್ಗೆ ಕೆಲ ದಿನಗಳ ಹಿಂದೆ ನಗರದ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ಜಾಡು ಹಿಡಿದು ಹೊರಟ ಪೊಲೀಸರು ಹಾವೇರಿ ಜಿಲ್ಲೆಯ ಶಿಶುವಿನಾಳ ಗ್ರಾಮದ ವಿಜಯ ದಳವಾಯಿ, ಧಾರವಾಡ ಜಿಲ್ಲೆಯ ಯಲಿವಾಳ ಗ್ರಾಮದ ಸತೀಶ ಚಂದ್ರಶೇಖರಗೌಡ ಪಾಟೀಲ, ಹಾವೇರಿ ಜಿಲ್ಲೆಯ ದೇವಗಿರಿಯ ದೇವರಾಜ ಕಟ್ಲಾವರ ಹಾಗೂ ಧಾರವಾಡ ಜಿಲ್ಲೆಯ ಅಣ್ಣಿಗೇರಿಯ ಮಹ್ಮದಅಲಿ ಅಗಸಿಬಾಗಿಲ ಅವರನ್ನು ಬಂ ಧಿಸಿದ್ದಾರೆ. ಬಂಧಿತರಿಂದ ಅಂದಾಜು 10,83,600 ಮೌಲ್ಯದ 600 ಸಕ್ಕರೆ ತುಂಬಿದ ಬ್ಯಾಗ್‌ ಹಾಗೂ 10 ಲಕ್ಷ ರೂ. ಮೌಲ್ಯದ ಲಾರಿ ವಶಪಡಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಚಿನ್ನಾಭರಣ ವಶ: ತಾಲೂಕಿನ ಸೋರಗಾಂವ ಗ್ರಾಮದ ಭಾಗವ್ವ ಯರಗುದ್ರಿ ಅವರ ಮನೆಯಲ್ಲಿ ನಡೆದ ಕಳ್ಳತನದ ಬಗ್ಗೆ ಕೇವಲ 24 ಗಂಟೆಗಳ ಹಿಂದೆ ಪ್ರಕರಣ ದಾಖಲಾಗಿತ್ತು. ತನಿಖೆ ಆರಂಭಿಸಿದ್ದ ಪೊಲೀಸರು ಪ್ರಕರಣಕ್ಕೆ ಸಂಬಂ ಧಿಸಿದಂತೆ ಪದ್ಮಾ ಹುಲಗನ್ನವರ ಎಂಬ ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 2,54,800 ರೂ. ಮೌಲ್ಯದ 67 ಗ್ರಾಂ. ಚಿನ್ನಾಭರಣ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

14 ಮೊಬೈಲ್‌ ಪತ್ತೆ: ಪೊಲೀಸ್‌ ಇಲಾಖೆ ಇತ್ತೀಚೆಗೆ ಪರಿಚಯಿಸಿದ ಸಿಈಐ ಪೋರ್ಟಲ್‌ ನೆರವಿನಿಂದ 1,20,000 ರೂ. ಮೌಲ್ಯದ ಒಟ್ಟು 14 ಮೊಬೈಲ್‌ ವಶಪಡಿಸಿಕೊಂಡು ಮೊಬೈಲ್‌ ಕಳೆದುಕೊಂಡವರಿಗೆ ಹಸ್ತಾಂತರಿಸಲಾಗಿದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಯಪ್ರಕಾಶ, ಹೆಚ್ಚುವರಿ ಪೊಲೀಸ್‌ ಅಧೀಕ್ಷಕ ಪ್ರಸನ್ನ ದೇಸಾಯಿ, ಡಿವೈಎಸ್ಪಿ ಶಾಂತವೀರ ಈ. ಮಾರ್ಗದರ್ಶನದಲ್ಲಿ ಸಿಪಿಐ ಮಹಾದೇವ ಶಿರಹಟ್ಟಿ ನೇತೃತ್ವದ ತನಿಖಾ ತಂಡದಲ್ಲಿ ಪಿಎಸೈಗಳಾದ ಅಜಿತಕುಮಾರ ಹೊಸಮನಿ, ಕೆ.ಬಿ. ಮಾಂಗ ಪೊಲೀಸ್‌ ಸಿಬ್ಬಂದಿ ರಂಗನಾಥ ಕಟಗೇರಿ, ಶ್ರೀಶೈಲ ಕೆಸರಗೊಪ್ಪ, ಮನೋಹರ ಕುರಿ, ಭೀರಪ್ಪ ಕುರಿ, ಹನಮಂತ ಮಾದರ, ಮಾರುತಿ ದಳವಾಯಿ, ದಾದಾಪೀರ ಅತ್ರಾವತ, ಸುನೀಲ ಐದಮನಿ, ಶ್ರೀಕಾಂತ ಬೆನಕಟ್ಟಿ, ಸುರೇಶ ಭದ್ರಶೆಟ್ಟಿ ಭಾಗಿಯಾಗಿದ್ದರು. ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವ ಡಿವೈಎಸ್ಪಿ ಸಿಬ್ಬಂದಿಗೆ ಬಹುಮಾನ ಘೋಷಿಸಿದರು.

ಟಾಪ್ ನ್ಯೂಸ್

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

prahlad-joshi

Congress ಪಕ್ಷದಿಂದ ಅಂಬೇಡ್ಕರ್‌ಗೆ ಅಗೌರವ: ಸಚಿವ ಜೋಶಿ ಆರೋಪ

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ

Naturals Ice Cream; ರಘುನಂದನ ಕಾಮತ್‌ ಪಂಚಭೂತಗಳಲ್ಲಿ ಲೀನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

3-mahalingapur

Mahalingpur: ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ

1-qweqwewqe

Rabkavi Banhatti: ಪ್ರಾಚೀನ ದೇವಸ್ಥಾನಕ್ಕೆ ಬೇಕಿದೆ ರಕ್ಷಣೆ

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

ಆನ್‌ಲೈನ್‌ ವಂಚನೆ: 6 ವರ್ಷದಲ್ಲಿ 4 ಕೋಟಿ ರೂ. ಕಳೆದುಕೊಂಡ ವಿದ್ಯಾವಂತರು!

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

Online ವಂಚಕರಿದ್ದಾರೆ ಹುಷಾರ್‌..!”ಉದಯವಾಣಿ’ ಇಂದಿನಿಂದ ಸರಣಿ ವರದಿ ಆರಂಭಿಸಿದೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.