Highway Service Road: ಸ್ಥಳೀಯರಿಗೆ ಶಾಪವಾದ ಹೆದ್ದಾರಿ ಸರ್ವಿಸ್‌ ರಸ್ತೆ


Team Udayavani, Aug 22, 2023, 2:51 PM IST

tdy-15

ಮಂಡ್ಯ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಸರ್ವಿಸ್‌ ರಸ್ತೆಯು ಗ್ರಾಮಗಳು ಹಾಗೂ ಜನವಸತಿ ಪ್ರದೇಶಗಳು ಸೇರಿದಂತೆ ಸ್ಥಳೀಯರಿಗೆ ಶಾಪವಾಗಿ ಪರಿಣಮಿಸಿದೆ. 6 ಪಥದ ಹೈವೇ ರಸ್ತೆ ನಿರ್ಮಾಣದಲ್ಲಿ ವಹಿ ದಷ್ಟು ಮುತು ವರ್ಜಿ ಸರ್ವಿಸ್‌ ರಸ್ತೆ ನಿರ್ಮಾಣ ದಲ್ಲಿ ತೋರದ ಹಿನ್ನೆಲೆ ಯಲ್ಲಿ ಸರ್ವಿಸ್‌ ರಸ್ತೆ ಸಂಚಾರ ಜೀವಭಯ ಹುಟ್ಟಿ ಸುವಂತಾಗಿದೆ.

ಹೆದ್ದಾರಿಯ 2 ಕಡೆ ತಲಾ ದ್ವಿಪಥ ರಸ್ತೆ ನಿರ್ಮಾಣ ಮಾಡಲಾಗಿದೆ. ಗ್ರಾಮಮಿತಿಗಳಲ್ಲಿ ಪಾದಚಾರಿ ರಸ್ತೆ ನಿರ್ಮಿಸದೆ ಮಹಿಳೆಯರು, ಮಕ್ಕಳು, ವೃದ್ಧರು ಸೇರಿದಂತೆ ಜಾನುವಾರು ಗಳ ಓಡಾಟ ದುಸ್ತರವಾಗಿದೆ. ಶಾಲೆ, ಅಸ್ಪತ್ರೆ, ಹೊಲಗದ್ದೆಗಳಿಗೆ ನಡೆದುಕೊಂಡು ಹೋಗಲು ಪಾದಚಾರಿ ರಸ್ತೆ ಅಗತ್ಯದ ಕುರಿತು ಆಗ್ರಹ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದರೂ ಪ್ರಾ ಕಾರ ಮೌನ ವಹಿಸಿದೆ.

ಸರ್ವಿಸ್‌ ರಸ್ತೆಯುದ್ದಕ್ಕೂ ಒಂದೇ ಒಂದು ಪ್ರಯಾಣಿಕರ ತಂಗುದಾಣವಿಲ್ಲ. ಪ್ರಯಾಣಿಕರು ಮಳೆ ಗಾಳಿ, ಬಿಸಿಲಿನಲ್ಲಿ ನಿಂತು ವಾಹನಗಳಿಗೆ ಕಾಯಬೇಕಾದ ಅನಿವಾರ್ಯತೆ ಬಂದೊದಗಿದೆ. ಅವೈಜಾnನಿಕ ರಸ್ತೆ ನಿರ್ಮಾಣ ಮಾಡಿರುವ ಹಿನ್ನೆಲೆಯಲ್ಲಿ ಮಳೆ ನೀರು ರಸ್ತೆಯಲ್ಲಿ ನಿಲ್ಲುವ ಸೂಚನೆ ಅರಿತ ಹೈವೇ ಕಾಮಗಾರಿ ಡಿಬಿಎಲ್‌ ಕಂಪನಿ ರಸ್ತೆಯಲ್ಲೇ ಕಿಂಡಿ ನಿರ್ಮಿಸಿದೆ. ಪಾದಚಾರಿಗಳು ಕಿಂಡಿಯಲ್ಲಿ ಕಾಲು ಹಾಕಿದರೆ ಮುರಿಯುವುದಂತೂ ಪಕ್ಕವಾಗಿದೆ. ಸರ್ವಿಸ್‌ ರಸ್ತೆಯಲ್ಲಿ ಏಕಮುಖ ಸಂಚಾರ ವ್ಯವಸ್ಥೆ ಇದ್ದರೂ ಅಂಡರ್‌ ಪಾಸ್‌ಗೆ ತೆರಳಲು ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ಸಂಖ್ಯೆ ನಿತ್ಯ ಹೆಚ್ಚುತ್ತಿದ್ದು, ಇದರ ಪರಿಣಾಮ ಅಪಘಾತ ನಿತ್ಯ ಸಾಮಾನ್ಯವಾಗಿದೆ.

ಸರ್ವಿಸ್‌ ರಸ್ತೆಯಲ್ಲಿ ಅವೈಜ್ಞಾನಿಕ ರಸ್ತೆ ಉಬ್ಬು ನಿರ್ಮಾಣ:

ಸರ್ವಿಸ್‌ ರಸ್ತೆಯುದ್ದಕ್ಕೂ ಸಂಚಾರ ನಿಯಮ ಪಾಲನೆ ನಿಟ್ಟಿನಲ್ಲಿ ನಿರ್ಮಿಸಿರುವ ರಸ್ತೆ ಉಬ್ಬುಗಳಂತೂ ಅವೈಜ್ಞಾನಿಕವಾಗಿದ್ದು, ಸ್ವಲ್ಪ ಯಾಮಾರಿದರೆ ವಾಹನದ ಜೊತೆಗೆ ಸವಾರರ ಜೀವಕ್ಕೂ ಕುತ್ತು ಬರುವಂತಿದೆ. ರಸ್ತೆ ಉಬ್ಬು ನಿರ್ಮಾಣ ಮಾಡಿದ್ದರೂ ಅದಕ್ಕೆ ತಕ್ಕಂತೆ ಸೂಚನಾ ಫಲಕ ಅಳವಡಿಸದೆ ಸವಾರರು ವೇಗವಾಗಿ ಬಂದು ಉಬ್ಬು ಹತ್ತಿಸಿ ಬೀಳುವ ಪ್ರಸಂಗಗಳು ಹೆಚ್ಚಾಗಿದೆ.

ಅಪಾಯಕಾರಿಯಾದ ಸರ್ವಿಸ್‌ ರಸ್ತೆಯ ಸಂಚಾರ: ಆಕ್ರೋಶ: 

ಸರ್ವಿಸ್‌ ರಸ್ತೆ ನಿರ್ಮಾಣವಾಗಿ ವರ್ಷ ಕಳೆದರೂ ಕೆಲವು ಕಡೆ ರಸ್ತೆ ಬದಿ, ಕಾಲುವೆ, ಕೆರೆಕಟ್ಟೆಗಳಿಗೆ ತಡೆಗೋಡೆ ನಿರ್ಮಿಸಲು ಮುಂದಾಗದಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಬೂದನೂರು ಬಳಿ ಕೆರೆ, ಕಾಲುವೆ, ಗುಂಡಿಗಳಿಗೆ ಸರಿಯಾದ ಭದ್ರತೆ ಒದಗಿಸಿಲ್ಲ. ಇದರಿಂದ ರಾತ್ರಿ ವೇಳೆ ಸಂಚಾರ ದುಸ್ತರವಾಗಿದೆ. ಇನ್ನೂ ಹೈವೇ ಪ್ರಾ ಕಾರ ಕೇಂದ್ರದಿಂದ 150 ಕೋಟಿ ರೂ. ಅನುದಾನ ಬರಲಿದ್ದು, ಬಳಿಕ ಕಾಮಗಾರಿ ಮಾಡುವುದಾಗಿ ತಿಳಿಸಿದೆ. ಆದರೆ ಯಾವಾಗ ಅನುದಾನ ಬರುತ್ತದೆಯೋ ಗೊತ್ತಿಲ್ಲ. ಇದರಿಂದ ಕಾಮಗಾರಿ ಮಾಡುವ ಸೂಚನೆಯೂ ಗೋಚರಿಸುತ್ತಿಲ್ಲ. ಅಲ್ಲಿಯ ವರೆಗೂ ಮುಂಜಾಗ್ರತೆಯಾಗಿ ಸರ್ವಿಸ್‌ ರಸ್ತೆಗೆ ಭದ್ರತೆ ಒದಗಿಸಬೇಕು. ಇಲ್ಲದಿದ್ದರೆ ಮುಂದೆ ಪ್ರಾಣಹಾನಿಯಾಗುವ ಸಾಧ್ಯತೆ ಹೆಚ್ಚಿದೆ.

ರಸ್ತೆಯ ಬಹುತೇಕ ಕಡೆ  ಪೂರ್ಣ ಗೊಳ್ಳದ ಕಾಮಗಾರಿ:

ಸರ್ವಿಸ್‌ ರಸ್ತೆಯ ಬಹುತೇಕ ಕಡೆ ಚರಂಡಿ ಕಾಮಗಾರಿ ಪೂರ್ಣಗೊಂಡಿಲ್ಲ. ಚರಂಡಿ ಸ್ಥಳೀಯ ಕೆರೆ ಕಟ್ಟೆ ಕಾಲುವೆಗಳಿಗೆ ಸಂಪರ್ಕ ಕಲ್ಪಿಸಲಾಗಿದೆ. ಪರಿಣಾಮ ಪರಿಸರ ಮಾಲಿನ್ಯ ಹೆಚ್ಚುವ ಆತಂಕ ಸೃಷ್ಟಿಯಾಗಿದೆ. ಆದರೆ ಹೆದ್ದಾರಿ ಪ್ರಾ ಧಿಕಾರದವರು ಕಾಮಗಾರಿ ನಿಲ್ಲಿಸಿದ್ದಾರೆ. ಹೆದ್ದಾಗಿ ಕಾಮಗಾರಿಗೆ ಆಗಮಿಸಿ ಅಲ್ಲಲ್ಲಿ ವಾಸ ಮಾಡುತ್ತಿದ್ದ ಕಾರ್ಮಿಕರು ಸಹ ಜಾಗ ಖಾಲಿ ಮಾಡಿದ್ದಾರೆ. ಇದರಿಂದ ಮುಂದೆ ಅಲ್ಲಲ್ಲಿ ಉಳಿದಿರುವ ಕಾಮಗಾರಿ ನಡೆಯುವುದು ಅನುಮಾನವಾಗಿದೆ.

-ಎಚ್‌.ಶಿವರಾಜು

 

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಕ್ಕರೆ ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Sugar ಕಾರ್ಖಾನೆಗಳಿಗೆ ಈಗ ಕಬ್ಬು “ಬರ’! ನೀರಿನ ಕೊರತೆಯಿಂದ ಬೆಳೆಯದ ಕಬ್ಬು

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

Ambulance ಸಕಾಲಕ್ಕೆ ಬಂದಿದ್ದರೆ ನಟಿ ಬದುಕುತ್ತಿದ್ದರು: ಸ್ನೇಹಿತ

ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

HD ಕುಮಾರಸ್ವಾಮಿಗೂ ರೇವಣ್ಣ ಸ್ಥಿತಿಯೇ ಬರಲಿದೆ: ಕಾಂಗ್ರೆಸ್‌ ಶಾಸಕ ಉದಯ್‌

11-mandya

Protest: ಕೆರಗೋಡು ಹನುಮ ಧ್ವಜ ವಿವಾದ; ಜೆಡಿಎಸ್, ಭಜರಂಗದಳ, ವಿ.ಹಿಂ.ಪ. ಪ್ರತಿಭಟನೆ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.