Hanur: ನಿರ್ಮಿಸಿ ವರ್ಷ ಕಳೆಯುವುದರೊಳಗೆ ಕಿರುಸೇತುವೆ ಶಿಥಿಲ


Team Udayavani, Aug 26, 2023, 3:23 PM IST

tdy-12

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಪಂನ ನರೇಗಾ ಯೋಜನೆಯಡಿ 10 ಲಕ್ಷ ರೂ.ನಲ್ಲಿ ನಿರ್ಮಿಸಿದ್ದ ಕಿರುಸೇತುವೆ ವರ್ಷ ಕಳೆಯುವುದರಲ್ಲೇ ಶಿಥಿಲಗೊಂಡಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.

ಗ್ರಾಪಂ ವ್ಯಾಪ್ತಿಯ ಕಡಬೂರ್‌ ವಾರ್ಡ್‌ಗೆ ಒಳಪಡುವ ಕೊಂಬೈ ನಗರ ವ್ಯಾಪ್ತಿಯ ಸೀಫ‌ನಿ ಕೋಡಿ ಹೊಳೆಗೆ ಹಾದುಹೋಗುವ ಮಾರ್ಗ ಮಧ್ಯದಲ್ಲಿ ನಾಥನ್‌ ಎಂಬುವರ ಮನೆ ಸಮೀಪ 10 ಲಕ್ಷ ರೂ.ನಲ್ಲಿ ಸೇತುವೆ ನಿರ್ಮಿಸಿ, ನಾಮಫ‌ಲಕ ಹಾಕಲಾಗಿದೆ. ಈ ಫ‌ಲಕದಲ್ಲಿ ಕೇವಲ ಅಂದಾಜು ವೆಚ್ಚ, ಸೃಜಿಸಲಾದ ಮಾನವ ದಿನ ನಮೂದಿಸಲಾಗಿದೆಯೇ ಹೊರತು? ಅಂತಿಮವಾಗಿ ಕಾಮಗಾರಿಗೆ ತಗುಲಿದ ವೆಚ್ಚ? ಕೂಲಿ ಪಾವತಿ ನಮೂದಿಸಿಲ್ಲ. ಈ ಬಗ್ಗೆ ಸ್ಪಷ್ಟ ಮಾಹಿತಿ ನೀಡುವಂತೆ ಸಂಬಂಧಪಟ್ಟ ಗ್ರಾಪಂಗೆ ನಿಯಮಾನುಸಾರ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದರೂ ಸಕಾಲದಲ್ಲಿ ಮಾಹಿತಿ ಒದಗಿಸದೆ ನಿರ್ಲಕ್ಷ್ಯ ಮಾಡಲಾಗಿದೆ ಎಂದು ಜನರು ದೂರಿದ್ದಾರೆ.

ಅವ್ಯವಹಾರ ಆರೋಪ: ಗ್ರಾಪಂನಿಂದ ಕೈಗೊಂಡಿರುವ ಕಾಮಗಾರಿ ಸಂಪೂರ್ಣ ಅವೈಜ್ಞಾನಿಕ, ಅವ್ಯವಹಾರದಿಂದ ಕೂಡಿದೆ. ಸೇತುವೆ ನಿರ್ಮಿಸಿದ ವರ್ಷದಲ್ಲೇ ಮೇಲ್ಭಾಗ ಬಿರುಕು ಬಿಟ್ಟಿದ್ದು, ಗುಂಡಿ ಬಿದ್ದಿದೆ. ಕಾಮಗಾರಿಯನ್ನು ಯಂತ್ರಗಳ ಸಹಾಯದಿಂದ ಮಾಡಲಾಗಿದೆ. ಡೀಸಿ, ಪಂಚಾಯತ್‌ ರಾಜ್‌ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಲು ಗ್ರಾಮಸ್ಥರು ದೂರು ಸಲ್ಲಿಸಿದ್ದಾರೆ.

ಪಿಡಿಒ ವಿರುದ್ಧ ಕ್ರಮಕ್ಕೆ ಆಗ್ರಹ:  ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ವಿವಿಧ ಇಲಾಖಾ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ ಜಿಲ್ಲಾಧಿಕಾರಿಯನ್ನು ಹೂಗ್ಯಂ, ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯ ಜನರು ಪಿಡಿಒ ಬಾಲಗಂಗಾಧರ್‌ ವಿರುದ್ಧ ದೂರು ಸಲ್ಲಿಸಿದ್ದಾರೆ.

ಪಿಡಿಒ ಮೂಲಸ್ಥಾನ ದಿನ್ನಳ್ಳಿ. ಆದರೂ, ಮಾರ್ಟಳ್ಳಿ, ಹೂಗ್ಯಂ ಗ್ರಾಪಂನಲ್ಲಿ ಪ್ರಭಾರ ಅಧಿಕಾರಿಯಾಗಿದ್ದಾರೆ. ಸರಿಯಾಗಿ ಕಚೇರಿಗೂ ಬಾರದೆ ಹೂಗ್ಯಂ ಜನರು ಕೇಳಿದರೆ ಮಾರ್ಟಳ್ಳಿಯಲ್ಲಿ ಇದ್ದೇನೆ, ಮಾರ್ಟಳ್ಳಿಯವರು ಕೇಳಿದ್ರೆ ಹೂಗ್ಯಂನಲ್ಲಿ ಇದ್ದೇನೆ ಎಂದು ಸಬೂಬು ನೀಡುತ್ತಾರೆ.

ಹನೂರು ಪಟ್ಟಣದಲ್ಲಿ ವಾಸವಿರುವ ಇವರು, ಬಡಜನರಿಂದ ಲಂಚಕ್ಕಾಗಿ ಬೇಡಿಕೆ ಇಡುತ್ತಿದ್ದು, ಪ್ರತಿ ಕಾಮಗಾರಿಯ ಅನುಮೋದನೆಗೆ ಶೇ.5, ಸಾಮಗ್ರಿ ಸರಬರಾಜು ಬಿಲ್‌ ಪಾವತಿಸಲು ಶೇ.52 ಹಣಕ್ಕಾಗಿ ಬೇಡಿಕೆ ಇಡುತ್ತಾರೆ. ಇವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಡೀಸಿಗೆ ನೀಡಿರುವ ದೂರಿನಲ್ಲಿ ಜನ ಆರೋಪಿಸಿದ್ದಾರೆ. ಈ ಕುರಿತು ಸ್ಪಷ್ಟನೆ ಕೇಳಲು ಪಿಡಿಒ ಬಾಲಗಂಗಾಧರ್‌ ಮೊಬೈಲ್‌ ನಂಬರ್‌ಗೆ ಕಾಲ್‌ ಮಾಡಿದ್ರೂ ಸ್ವೀಕರಿಸಿಲ್ಲ.

ಕಿರುಸೇತುವೆ ನಿರ್ಮಾಣ ಕಾಮಗಾರಿಯ ಮಾಹಿತಿ ಕೇಳಿದರೆ ನೀಡುತ್ತಿಲ್ಲ. ಕಾಮಗಾರಿ ಅವೈಜ್ಞಾನಿಕವಾಗಿದೆ, ಅವ್ಯವಹಾರ ನಡೆದಿರುವ ಸಾಧ್ಯತೆ ಇದೆ. ಇಂತಹ ಹಲವು ಕಾಮಗಾರಿಗಳು ಮಾರ್ಟಳ್ಳಿ ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ. ಈ ಬಗ್ಗೆ ಉನ್ನತಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು.-ಪೌಲ್‌ರಾಜ್‌, ಕಡಬೂರು ನಿವಾಸಿ 

-ವಿನೋದ್‌ ಎನ್‌.ಗೌಡ

ಟಾಪ್ ನ್ಯೂಸ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

1-qwewe

Odisha ಜನರು ನಿಂದನೀಯ ಭಾಷೆ ಮೆಚ್ಚಿಕೊಳ್ಳುವುದಿಲ್ಲ:ಬಿಜೆಪಿಗೆ ಪಟ್ನಾಯಕ್ ತಿರುಗೇಟು

6-rabakavi

Rabkavi Banhatti: ಶತಮಾನದ ಸೋಮವಾರಪೇಟೆ ಸಮಸ್ತ ದೈವ ಮಂಡಳಿಯ ಗರಡಿ ಮನೆ

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು

Ramanagara: ಈಜಲು ಹೋಗಿ‌ದ್ದ ಮೂವರು ಮಕ್ಕಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeqwqew

Gundlupete: ಕೊಳೆತ ಸ್ಥಿತಿಯಲ್ಲಿ ಹುಲಿಯ ಮೃತ ದೇಹ ಪತ್ತೆ

1-wqewqe

Gundlupete; ಓವರ್ ಟೇಕ್ ಭರದಲ್ಲಿ ಅಪಘಾತ: ಬೈಕ್ ಸವಾರ ಮೃತ್ಯು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-qwewqewqe

Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್

ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ: ಬೇಳೂರು

Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ

20

Sandalwood: ದರ್ಶನ್‌ ʼಡೆವಿಲ್‌ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್‌ ಪೋಸ್ಟರ್‌ ಔಟ್

1——-qweweqw

Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ

satish jarakiholi

Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.