Anand Mahindra; ಪ್ರಜ್ಞಾನಂದ್ ಪೋಷಕರಿಗೆ ಆನಂದ್ ಮಹೀಂದ್ರಾ ಎಲೆಕ್ಟ್ರಿಕ್ ಕಾರು ಉಡುಗೊರೆ
ನಿಮ್ಮ ಕ್ರಿಯಾಶೀಲಾ ಮನೋಭಾವ ನಿಜಕ್ಕೂ ಸ್ಫೂರ್ತಿದಾಯಕವಾಗಿದೆ.
Team Udayavani, Aug 28, 2023, 6:01 PM IST
ನವದೆಹಲಿ: ಯುವ ಪ್ರತಿಭೆಗಳನ್ನು ಗುರುತಿಸುವುದು ಹಾಗೂ ಅವರನ್ನು ಪ್ರೋತ್ಸಾಹಿಸುವ ಉದ್ಯಮಿ ಆನಂದ್ ಮಹೀಂದ್ರಾ ಅವರು ಯುವ ಚೆಸ್ ಆಟಗಾರ ಆರ್.ಪ್ರಜ್ಞಾನಂದ ಪೋಷಕರಿಗೆ ಎಲೆಕ್ಟ್ರಿಕ್ ಕಾರನ್ನು ಉಡುಗೊರೆಯಾಗಿ ನೀಡಲು ನಿರ್ಧರಿಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್ ನಲ್ಲಿ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ:Kasaragod ವಿಷ ಸೇವನೆ : ತಾಯಿ ಮತ್ತು ಇಬ್ಬರು ಮಕ್ಕಳ ಸ್ಥಿತಿ ಗಂಭೀರ
ಇತ್ತೀಚೆಗೆ ಮುಕ್ತಾಯಗೊಂಡಿದ್ದ ವಿಶ್ವ ಚೆಸ್ ಪಂದ್ಯಾವಳಿಯ ಫೈನಲ್ ಟೈ ಬೇಕರ್ ಸ್ಪರ್ಧೆಯಲ್ಲಿ ಭಾರತದ ಆರ್. ಪ್ರಜ್ಞಾನಂದ ರನ್ನರ್ ಅಪ್ ಆಗಿ ಪಂದ್ಯವನ್ನು ಮುಕ್ತಾಯಗೊಳಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರಜ್ಞಾನಂದ ಅವರಿಗೆ ಥಾರ್ ಕಾರನ್ನು ಉದ್ಯಮಿ ಆನಂದ್ ಮಹೀಂದ್ರಾ ಅವರು ಉಡುಗೊರೆಯಾಗಿ ನೀಡಬೇಕೆಂದು ಹಲವರು ಟ್ವೀಟರ್ ನಲ್ಲಿ ಒತ್ತಾಯಿಸಿದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದಾಗಿದೆ.
ಈ ಟ್ವೀಟ್ ಗೆ ಪ್ರತಿಕ್ರಿಯಿಸಿದ್ದ ಆನಂದ್ ಮಹೀಂದ್ರಾ ಅವರು, ನಿಮ್ಮ ಭಾವನೆಯನ್ನು ನಾನು ಗೌರವಿಸುತ್ತೇನೆ. ನಿಮ್ಮಂತೆ ಹಲವಾರು ಮಂದಿ ಪ್ರಜ್ಞಾನಂದ್ ಅವರಿಗೆ ಕಾರನ್ನು ಉಡುಗೊರೆಯಾಗಿ ಕೊಡಬೇಕೆಂದು ಒತ್ತಾಯಿಸಿದ್ದಾರೆ. ಆದರೆ ನನ್ನಲ್ಲಿ ಮತ್ತೊಂದು ಐಡಿಯಾ ಇದೆ. ಮಕ್ಕಳ ಪ್ರತಿಭೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪ್ರಜ್ಞಾನಂದ ಪೋಷಕರನ್ನು ಪ್ರೋತ್ಸಾಹಿಸಲು ಬಯಸುತ್ತೇನೆ. ಈ ನಿಟ್ಟಿನಲ್ಲಿ ನಾನು ಪ್ರಜ್ಞಾನಂದ ಪೋಷಕರಿಗೆ XUV400 ಎಲೆಕ್ಟ್ರಿಕ್ ವಾಹನ ಉಡುಗೊರೆಯಾಗಿ ಕೊಡಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.
Appreciate your sentiment, Krishlay, & many, like you, have been urging me to gift a Thar to @rpragchess
But I have another idea …
I would like to encourage parents to introduce their children to Chess & support them as they pursue this cerebral game (despite the surge in… https://t.co/oYeDeRNhyh pic.twitter.com/IlFIcqJIjm— anand mahindra (@anandmahindra) August 28, 2023
“ನಿಮ್ಮ ಕ್ರಿಯಾಶೀಲಾ ಮನೋಭಾವ ನಿಜಕ್ಕೂ ಸ್ಫೂರ್ತಿದಾಯಕವಾಗಿದೆ. ಪ್ರಜ್ಞಾನಂದ ಅವರಿಗೆ ಥಾರ್ ಉಡುಗೊರೆಯನ್ನಾಗಿ ನೀಡಬೇಕೆಂಬ ಹಲವರ ಸಲಹೆಗೆ, ನಿಮ್ಮ ಪರ್ಯಾಯ ಐಡಿಯಾ ಶ್ಲಾಘನೀಯವಾದದ್ದು” ಎಂದು ಟ್ವೀಟ್ ಬಳಕೆದಾರರೊಬ್ಬರು ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: 1 ಗಂಟೆಯಲ್ಲಿ 1,123 ಮರಗಳನ್ನು ಅಪ್ಪಿಕೊಂಡು ಗಿನ್ನೆಸ್ ವಿಶ್ವ ದಾಖಲೆ ಬರೆದ ಯುವಕ
Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ
ಕ್ರಿಕೆಟ್ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು
BJP; ತೇಜಸ್ವಿ ಸೂರ್ಯ ನವರಾತ್ರಿಯ ಮುನ್ನಾದಿನ ಮೀನು ತಿನ್ನುತ್ತಾರೆ!: ಕಂಗನಾ ಭಾಷಣ ವೈರಲ್
Mumbai: 45 ದಿನದಲ್ಲಿ 300 ಐಸ್ಕ್ರೀಂ ಆರ್ಡರ್ ಮಾಡಿದ!