Vijayapura: ಪತ್ನಿಯ ಅಕ್ರಮ ಸಂಬಂಧ; ಪತಿಯ ಬರ್ಬರ ಹತ್ಯೆ

6 ತಿಂಗಳ ಬಳಿಕ ಪ್ರಕರಣ ಪತ್ತೆ : ಪತ್ನಿ, ಆಕೆಯ ಪ್ರಿಯಕರನ ಬಂಧನ

Team Udayavani, Aug 28, 2023, 11:04 PM IST

love birds

ವಿಜಯಪುರ : ತನ್ನ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ತನ್ನ ಪ್ರಿಯಕರನೊಂದಿಗೆ ವ್ಯವಸ್ಥಿತ ಸಂಚು ರೂಪಿಸಿ ಹತ್ಯೆ ಮಾಡಿದ ಪ್ರಕರಣವನ್ನು 6 ತಿಂಗಳ ಬಳಿಕ ಪೊಲೀಸರು ಬೇಧಿಸಿದ್ದಾರೆ.

ಬಸವನಬಾಗೇವಾಡಿ ಪಟ್ಟಣದಲ್ಲಿ ಕಳೆದ ಫೆಬ್ರವರಿ 23 ರಂದು ಮಧ್ಯರಾತ್ರಿ 11-30 ರ ಸುಮಾರಿಗೆ ಜಕರಾಯ ದಳವಾಯಿ ಎಂಬ ವ್ಯಕ್ತಿಯ ಹತ್ಯೆಯಾಗಿತ್ತು. ಜಕರಾಯನ ಪತ್ನಿ ಜಯಶ್ರೀ (34) ಹಾಗೂ ಆಕೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಡೋಂಗ್ರಿಸಾಬ್ ಬೊಮ್ಮನಹಳ್ಳಿ (38) ಇಬ್ಬರೂ ವ್ಯವಸ್ಥಿತ ಸಂಚು ರೂಪಿಸಿ, ಹತ್ಯೆ ಮಾಡಿ, ಶವವನ್ನು ಸುಟ್ಟು ಹಾಕಿ, ಸಾಕ್ಷಿ ನಾಶ ಪಡಿಸಿದ್ದರು.

ಕಾಣೆಯಾದ ಮಗನ ಕುರಿತು ಅನುಮಾನಗೊಂಡ ಜಕರಾಯನ ತಂದೆ ಭೀಮರಾಯ ಆ.25 ರಂದು ಬಸವನಬಾಗೇವಾಡಿ ಪೊಲೀಸರಿಗೆ ದೂರು ನೀಡಿದ್ದರು. ಹತ್ಯೆಯಾದ ವ್ಯಕ್ತಿಯ ಕುರಿತು ಯಾವ ಸುಳಿವೂ ಇರಲಿಲ್ಲ. ಆದರೂ ಪೊಲೀಸರು ಶಂಕಿತ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ಸಂಚು ರೂಪಿಸಿ ಹತ್ಯೆ ಮಾಡಿ, ಸಾಕ್ಷಿ ನಾಶ ಮಾಡಿರುವುದು ಬೆಳಕಿಗೆ ಬಂದಿದೆ.

ಬಸವನಬಾಗೇವಾಡಿ ಮೂಲದ ಡೋಂಗ್ರೀಸಾಬ್ ಮದುವೆ ಇತರೆ ಸಮಾರಂಭಗಳಿಗೆ ಅಡುಗೆ ಮಾಡುವ ಗುತ್ತಿಗೆ ಪಡೆಯುತ್ತಿದ್ದ. ವಿಜಯಪುರ ತಾಲೂಕಿನ ಹೆಗಡಿಹಾಳ ಮೂಲದ ಬಸವನಬಾಗೇವಾಡಿ ಪಟ್ದಣದಲ್ಲಿ ವಾಸವಿದ್ದ ಜಕರಾಯನ ಪತ್ನಿ ಜಯಶ್ರೀ ಅಡುಗೆ ಕೆಲಸಕ್ಕೆ ಹೋಗುತ್ತಿದ್ದಳು.

ಈ ಹಂತದಲ್ಲಿ ಜಯಶ್ರೀ ಹಾಗೂ ಡೊಂಡ್ರೀಸಾಬ್ ಇವರ ಮಧ್ಯೆ ಅನೈಕ ಸಂಬಂಧ ಬೆಸೆದಿದೆ. ಈ ವಿಷಯ ಜಕರಾಯನಿಗೆ ಗೊತ್ತಾಗಿ ಡೋಂಗ್ರಿಸಾಬ್‍ನ ಸಹವಾಸ ಬಿಡುವಂತೆ ಪತ್ನಿ ಜಯಶ್ರೀಗೆ ಬುದ್ದಿವಾದ ಹೇಳಿದ್ದಾನೆ. ಆದರೆ ಪತಿಯ ಬುದ್ದಿ ಮಾತಿಗೆ ಬಗ್ಗದ ಜಯಶ್ರೀ ಪತಿಯನ್ನೇ ಹತ್ಯೆ ಮಾಡುವ ಸಂಚು ರೂಪಿಸಿದ್ದಾಳೆ.

ಫೆ.23 ರಂದು ರಾತ್ರಿ 11-50ಕ್ಕೆ ಪತಿ ಮನೆಗೆ ಬರುತ್ತಲೇ ಜಯಶ್ರೀ ಮಾಹಿತಿ ನೀಡಿದಂತೆ ಡೋಂಗ್ರೀಸಾಬ್ ಮನೆಗೆ ಬಂದಿದ್ದಾನೆ. ಪತಿಯನ್ನು ಜಯಶ್ರೀ ಬಿಗಿಯಾಗಿ ಹಿಡಿಯುತ್ತಲೇ ಡೋಂಗ್ರಿಸಾಬ್ ಕೊಡಲಿಯಿಂದ ಜಕರಾಯನನ್ನು ಹೊಡೆದು ಹತ್ಯೆ ಮಾಡಿದ್ದಾನೆ.

ಬಳಿಕ ಶವವನ್ನು ಹೊದಿಕೆಯಲ್ಲಿ ಕಟ್ಟಿಕೊಂಡು ದ್ವಿಚಕ್ರ ವಾಹನದಲ್ಲಿ ಲಾವಣಿ ಯಮನಪ್ಪ ಅವಟಿ ಎಂಬವರ ಜಮೀನಿಲ್ಲಿ ಮೊದಲೇ ಸಂಗ್ರಹಿಸಿ ಇರಿಸಿದ ಕಟ್ಟಿಗೆಯಲ್ಲಿ ಹಾಕಿ ಬೆಂಕಿಹಚ್ಚಿ ಬಂದಿದ್ದಾರೆ. ಆದರೆ ಶವ ಸರಿಯಾಗಿ ಸುಡದ ಕಾರಣ ಫೆ.25 ರಂದು ಮತ್ತಷ್ಟು ಕಟ್ಟಿಗೆ ಹಾಕಿ ಶವನ್ನು ಸುಟ್ಟು ಉಳಿದ ಬೂದಿ ಹಾಗೂ ಕಟ್ಟಿಗೆಯನ್ನು ಪಕ್ಕದಲ್ಲಿದ್ದ ಭಾವಿಗೆ ಎಸೆದಿದ್ದಾರೆ.

ಅಲ್ಲದೇ ಜಕರಾಯನ ಎಟಿಎಂ ಕಾರ್ಡ್, ಪಾನ್ ಕಾರ್ಡ್, ವಾಹನ ಚಾಲನಾ ಪರವಾನಿಗೆ ಪತ್ರ, ಪಾಸ್‍ಪೋರ್ಟ್ ಅಳತೆಯ ಫೋಟೋ, ಕೊಲೆಗೆ ಬಳಸಿದ ಕೊಡಲಿ ಎಲ್ಲವನ್ನೂ ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ, ಇಟ್ಟಿಗೆಯನ್ನು ಇಟ್ಟು ಬಾವಿಗೆ ಎಸೆದು ಸಾಕ್ಷಿ ನಾಶಮಾಡಿ ಬಂದಿದ್ದಾರೆ.

ತನ್ನ ತಂದೆ ಕಾಣೆಯಾದ ಕುರಿತು ಮಗಳು ಪದೇ ಪದೇ ಕೇಳು ಆರಂಭಿಸಿದಾ, ಜಕರಾಯನ ತಂದೆ ಭೀಮರಾಯ ಪೊಲೀಸರಿಗೆ ದೂರು ನೀಡಿದ್ದಾರೆ. ಇದನ್ನು ಆಧರಿಸಿ ಆರೋಪಿಗಳನ್ನು ಬಂಧಿಸಿ, ವಿಚಾರಣೇ ನಡೆಸಿದಾಗ ಅಕ್ರಮ ಸಂಬಂಧ ಹಾಗೂ ಸಾಕ್ಷಿ ನಾಶ ಪಡಿಸಿದ ವ್ಯವಸ್ಥಿತ ಸಂಚಿನ ಹತ್ಯೆ ಪ್ರಕರಣವನ್ನು ಪೊಲೀಸರು ಬೇಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗ್ರಾಮೀಣ ಉಪ ವಿಭಾಗದ ಡಿಎಸ್ಪಿ ಜಿ.ಎಚ್.ತಳಕಟ್ಟಿ, ಸಿಪಿಐ ಆರ್.ಎಸ್.ಜಾನರ, ಪಿಎಸ್‍ಐ ವಿನೋನ ಪೂಜಾರಿ, ಆರ್.ಎ.ದಿನ್ನಿ ಅವರ ನೇತೃತ್ವದಲ್ಲಿ ತನಿಖಾ ತಂಡ ಇಲಾಖೆಗೆ ಸವಾಲಾಗಿದ್ದ ಇಡೀ ಪ್ರಕರಣವನ್ನು ಪತ್ತೆ ಹಚ್ಚಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಎಸ್ಪಿ ಆನಂದಕುಮಾರ ತಿಳಿಸಿದ್ದಾರೆ.

ಟಾಪ್ ನ್ಯೂಸ್

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.