Politics ; ಮೌಲ್ಯಾಧಾರಿತ ರಾಜಕಾರಣದ ರೂವಾರಿ ರಾಮಕೃಷ್ಣ ಹೆಗಡೆ

ಆ.29 ಮಾಜಿ ಮುಖ್ಯಮಂತ್ರಿ ದಿ|ರಾಮಕೃಷ್ಣ ಹೆಗಡೆಯವರ ಜನ್ಮದಿನ

Team Udayavani, Aug 28, 2023, 11:17 PM IST

1-qwwqew

ರಾಮಕೃಷ್ಣ ಹೆಗಡೆ ಅವರ ಮೌಲ್ಯಗಳು-ಚಿಂತನೆಗಳನ್ನು ಯುವ ಪೀಳಿಗೆಗೆ ತಿಳಿಸಲು ಅಧ್ಯಯನ ಪೀಠ ಸ್ಥಾಪನೆಯಾಗಬೇಕಿದೆ. ಇದಕ್ಕೆ ಸರಕಾರ ಇಚ್ಛಾಶಕ್ತಿ ತೋರಬೇಕು..

ದಿಕ್ಕು-ದೆಸೆಯಿಲ್ಲದ ಇಂದಿನ ರಾಜಕಾರಣವನ್ನು ಕಂಡಾಗ ಮೌಲ್ಯಾಧಾರಿತ ರಾಜಕಾರಣ ನಡೆಸಿದ ಮಾಜಿ ಮುಖ್ಯಮಂತ್ರಿ ದಿ|ರಾಮಕೃಷ್ಣ ಹೆಗಡೆ ಸದಾ ನೆನಪಾಗುತ್ತಾರೆ. ಸಿಎಂ ಆಗಿದ್ದಾಗ ಇಡೀ ದೇಶವೇ ಕರ್ನಾಟಕದ ಕಡೆ ನಿಬ್ಬೆರಗಾಗಿ ನೋಡುವಂತೆ ಸೊಗಸಾದ ಆಡಳಿತ ನಡೆಸಿದ ಮಹಾನ್‌ ನಾಯಕ. ರಾಜಕೀಯ ಜೀವನದುದ್ದಕ್ಕೂ ನಂಬಿದ ಹಾಗೂ ತಾವೇ ಪ್ರತಿಪಾದಿಸಿದ ರಾಜಕೀಯ ಮೌಲ್ಯಗಳ ಉಳಿವಿಗಾಗಿ ಅಹರ್ನಿಶಿ ಶ್ರಮಿಸಿದವರು. ಮಾತ್ರವಲ್ಲ, ಆ ಮೌಲ್ಯಗಳಿಗಾಗಿ ಸಾಕಷ್ಟು ಬಾರಿ ಬೆಲೆಯನ್ನೂ ತೆತ್ತ ಆದರ್ಶ ನಾಯಕರೂ ಹೌದು.

1983ರಲ್ಲಿ ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್ಸೇತರ ಜನತಾ ಪಕ್ಷ (ನೇಗಿಲು ಹೊತ್ತ ರೈತ ಚಿಹ್ನೆ) ಸರಕಾರದ ಮುಖ್ಯಮಂತ್ರಿಯಾಗಿದ್ದ ಹೆಗಡೆ ಅವರು ನಾಡಿನ ಸರ್ವಾಂಗೀಣ ಅಭಿವೃದ್ಧಿಗೆ ಮಾಡಿದ ಕೆಲಸ ಅಷ್ಟಿಷ್ಟಲ್ಲ. ಇವರ ಆಡಳಿತಕ್ಕೆ ಅಗ್ನಿಪರೀಕ್ಷೆ ಎಂಬಂತೆ ಎದುರಾದ ಭೀಕರ ಬರಗಾಲದ ಸಂದರ್ಭ ಅಂದಿನ ಗ್ರಾಮೀಣಾಭಿವೃದ್ಧಿ ಸಚಿವ ಅಬ್ದುಲ್‌ ನಜೀರ್‌ ಸಾಬ್‌ ಅವರ ಮೂಲಕ ನಾಡಿನಾದ್ಯಂತ ಕೊಳವೆ ಬಾವಿಗಳನ್ನು ಕೊರೆಸಿ ನೀರಿನ ಬವಣೆ ನೀಗಿಸುವಲ್ಲಿ ಯಶಸ್ವಿಯಾದರು. ಮಾತ್ರವಲ್ಲ, ರಾಜ್ಯಾದ್ಯಂತ ಗೋಶಾಲೆಗಳನ್ನು ತೆರೆದು ಜಾನುವಾರುಗಳ ಸಂರಕ್ಷಣೆ ಮಾಡಿ, ರೈತರು ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದ್ದರು.

ಶಾಲಾ ಮಕ್ಕಳಿಗೆ ಉಚಿತ ಬಸ್‌ ಪಾಸ್‌, ವಿಧವಾ ಮಾಸಾಶನ ಹೀಗೆ ಹತ್ತು ಹಲವು ಯೋಜನೆಗಳನ್ನು ಅಮೂಲಾಗ್ರವಾಗಿ ಜಾರಿಗೆ ತರುವ ಮೂಲಕ ನಾಡಿನ ಜನಮನದಲ್ಲಿ ಭದ್ರವಾಗಿ ನೆಲೆಯೂರಿದ್ದರು. ಅವರು ಜಾರಿಗೆ ತಂದ ಪಂಚಾಯತ್‌ ರಾಜ್‌ ವ್ಯವಸ್ಥೆ ಇಡೀ ದೇಶಕ್ಕೇ ಮಾದರಿಯಾಯಿತು. ಹೆಗಡೆ ಅವರು ಪ್ರತಿಷ್ಠಾಪಿಸಿದ ಲೋಕಾಯುಕ್ತ ಸಂಸ್ಥೆ ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನವಾಗಿದೆ ಎಂಬುದು ನಿರ್ವಿವಾದದ ಸಂಗತಿ.
“ಆಡಿದರೆ ಮುತ್ತಿನ ಹಾರದಂತಿರಬೇಕು, ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು’ ಎಂಬ ಜಗಜ್ಯೋತಿ ಬಸವಣ್ಣವರ ವಚನದ ಸಾಲಿನಂತೆ ಹೆಗಡೆ ಅವರು ತಮ್ಮ ರಾಜಕೀಯ ಜೀವನದುದ್ದಕ್ಕೂ ಹಿತ-ಮಿತ ನಡೆ-ನುಡಿಯೊಂದಿಗೆ ನಾಡಿನ ಜನರ ಹೃದಯ ಗೆದ್ದಿದ್ದರು. ಅವರು ಭಾಗವಹಿಸುತ್ತಿದ್ದ ಸಭೆ-ಸಮಾರಂಭಗಳಲ್ಲಿ ಜನಸಾಗರವೇ ಸೇರುತ್ತಿತ್ತು. ಅಂಥ ಧೀಮಂತ ವ್ಯಕ್ತಿತ್ವ ಅವರಲ್ಲಿತ್ತು.

ಇನ್ನು ಎಂತಹ ಸಂದರ್ಭದಲ್ಲೂ ಹೆಗಡೆ ಅವರು ಅಸಾಂವಿಧಾನಿಕ ಭಾಷೆ ಪ್ರಯೋಗಿಸಿದ ಉದಾಹರಣೆಗಳು ತೀರಾ ವಿರಳ ಎನ್ನಬಹುದು. ಅವರನ್ನು ಜನತಾದಳದಿಂದ ಹೊರಹಾಕಿದಾಗಲೂ ತಮ್ಮ ಗರಡಿಯಲ್ಲೇ ಬೆಳೆದ, ಜತೆಗಿದ್ದ ಕೆಲ ನಾಯಕರು ತಮ್ಮಿಂದ ದೂರವಾಗುತ್ತಿದ್ದಾರೆ ಎಂಬ ಸುಳಿವು ದೊರೆತಾಗ ತೀರಾ ನೊಂದುಕೊಂಡಿದ್ದರು. ಆಗ ಮನನೊಂದು ತೀರಾ ಭಾವುಕರಾಗಿ ಸಾತ್ವಿಕ ಆಕ್ರೋಶ ಹೊರಹಾಕಿದ್ದರು. ಆದರೆ, ತಮ್ಮ ರಾಜಕೀಯ ಕಡುವೈರಿಯನ್ನೂ ಕೂಡ ಎಂದೂ ನಿಂದಿಸಿ ಮಾತನಾಡಿದವರಲ್ಲ. ಅಂಥ ರಾಜಕೀಯ ಸಂಸ್ಕಾರ ಅವರಲ್ಲಿತ್ತು.
ಇಂತಹ ಆದರ್ಶ ರಾಜಕಾರಣಿಯಾಗಿದ್ದ ಹೆಗಡೆ ಅವರ ರಾಜಕೀಯ ಮೌಲ್ಯಗಳು ಹಾಗೂ ಚಿಂತನೆಗಳನ್ನು ಯುವಜನತೆಗೆ ತಿಳಿಸಲು ರಾಜ್ಯದ ವಿವಿಯೊಂದರಲ್ಲಿ ಅಧ್ಯಯನ ಪೀಠ ಸ್ಥಾಪಿಸುವ ಭರವಸೆ ಸಾಕಾರವಾಗಿಲ್ಲ. ಹೆಗಡೆಯವರ ರಾಜಕೀಯ ಗರಡಿಯಲ್ಲೇ ಬೆಳೆದ ಸಿದ್ದರಾಮಯ್ಯ ಈಗ ಮುಖ್ಯಮಂತ್ರಿ ಆಗಿದ್ದಾರೆ. ಅವರು ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ, ಅಧ್ಯಯನ ಪೀಠ ಸ್ಥಾಪಿಸಿದ್ದೇ ಆದಲ್ಲಿ, ಭವಿಷ್ಯದ ಪೀಳಿಗೆಗೆ ಹೆಗಡೆ ಅವರ ರಾಜಕೀಯ ವಿಚಾರಧಾರೆಗಳ ಪರಿಚಯವಾಗಿ, ರಾಜಕಾರಣದಲ್ಲಿ ಮೌಲ್ಯಗಳ ಸಂರಕ್ಷಣೆಗೆ ಸಹಕಾರಿಯಾಗಬಲ್ಲದು.

– ಅಶೋಕ ಸ. ಬೆಳಗಲಿ (ಕುದರಿ), ಹುಬ್ಬಳ್ಳಿ

ಟಾಪ್ ನ್ಯೂಸ್

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಘುಪತಿ ಭಟ್‌

ಈಗಿನ ಬಿಜೆಪಿಯಲ್ಲಿ ಚಮಚಾಗಿರಿಗೆ ಟಿಕೆಟ್‌!: ಟಿಕೆಟ್‌ ವಂಚಿತ ರಘುಪತಿ ಭಟ್‌ ಬಿರುನುಡಿ

hemanth-soren

Arrest ಪ್ರಶ್ನಿಸಿ ಹೇಮಂತ್‌ ಸೊರೇನ್‌ ಸುಪ್ರೀಂ ಮೊರೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.